ನಟ ಶ್ರೀನಗರ ಕಿಟ್ಟಿ ಆರು ವರ್ಷಗಳ ಬಳಿಕ 'ಗೌಳಿ' ಸಿನಿಮಾ ಮೂಲಕ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಸತತ ಸೋಲಿನ ಬಳಿಕ ಶ್ರೀನಗರ ಕಿಟ್ಟಿ ಚಿತ್ರರಂಗಕ್ಕೆ ಮರಳಿದ್ದಾರೆ. ಸೂರ ನಿರ್ದೇಶನದ 'ಗೌಳಿ' ಚಿತ್ರವನ್ನು ರಘು ಸಿಂಗಂ ನಿರ್ಮಾಣ ಮಾಡಿದ್ದಾರೆ. ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದು ರಂಗಾಯಣ ರಘು, ಶರತ್ ಲೋಹಿತಾಶ್ವ, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ಗೋಪಾಲ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. 'ಗೌಳಿ' ಸಿನಿಮಾ ಮೇಕಿಂಗ್, ಬಿಜಿಎಂ ಎಲ್ಲವೂ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಒಂದೊಳ್ಳೆ ಬ್ರೇಕ್ಗಾಗಿ ಕಾಯುತ್ತಿರುವ ಶ್ರೀನಗರ ಕಿಟ್ಟಿ ಈ ಚಿತ್ರದ ಮೇಲೆ ಬಹಳ ನಂಬಿಕೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರದ ಕಥೆ ಸೇರಿದಂತೆ ಪ್ರಮುಖ ಅಂಶಗಳು ಇಲ್ಲಿವೆ.