ಚಲನಚಿತ್ರಗಳ ಒಳನೋಟ
ಕನ್ನಡ ಚಿತ್ರರಂಗದಲ್ಲಿ ಮೊದಲ ಸಿನಿಮಾ ಬಳಿಕ ಒಳ್ಳೆಯ ಆಫರ್ ಪಡೆಯಬೇಕೆಂದರೆ ಆ ನಟ ಉತ್ತಮವಾಗಿ ನಟಿಸುತ್ತಾನೆ ಎಂಬ ನಂಬಿಕೆ ನಿರ್ದೇಶಕರಲ್ಲಿ ಇರಬೇಕು. ಆಗ ಮಾತ್ರ ಮುಂದುವರೆಯಲು ಸಾಧ್ಯ. ಒಂದು ಸಿನಿಮಾಗೆ ಕಥೆ ಬಹಳ ಮುಖ್ಯವಾಗಿರುತ್ತದೆ. ಕಥೆ ಚೆನ್ನಾಗಿದ್ದರೆ ಪ್ರೇಕ್ಷಕರು ಕೈ ಹಿಡಿಯುತ್ತಾರೆ. ಹೀಗಾಗಿ, ಕಥೆ ಆಯ್ದುಕೊಳ್ಳುವಾಗ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಕನ್ನಡ ಚಿತ್ರರಂಗದಲ್ಲಿ ಹಲವಾರು ಸವಾಲುಗಳನ್ನು ಎದುರಿಸಿ ಅವಕಾಶ ಗಿಟ್ಟಿಸಿಕೊಂಡ ಅನೇಕ ನಟ-ನಟಿಯರು ನಂತರದ ದಿನಗಳಲ್ಲಿ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಎಡವಿ ಸೋತಿದ್ದಾರೆ. ಇಲ್ಲಿ ಸೂಪರ್ ಹಿಟ್ ಸಿನಿಮಾ ಕೊಟ್ಟು ನಟನೆಯಿಂದ ದೂರವಾದ ಸ್ಯಾಂಡಲ್ವುಡ್ ನಟರ ಪಟ್ಟಿಯನ್ನು ನೀಡಲಾಗಿದೆ.