X
ಹೋಮ್ ಚಲನಚಿತ್ರಗಳ ಒಳನೋಟ

ಈ ವಾರ ವೀಕೆಂಡ್‌ ವಿತ್ ರಮೇಶ್‌ಗೆ ಬರುವ ಅತಿಥಿ ಇವರೇ!

Author Sowmya Bairappa | Published: Tuesday, May 16, 2023, 05:44 PM [IST]

ಕನ್ನಡ ಕಿರುತೆರೆಯ ಜನಪ್ರಿಯವಾದ ವೀಕೆಂಡ್‌ ವಿತ್ ರಮೇಶ್‌ಗೆ ಪ್ರತಿ ವಾರ ಒಬ್ಬರು ಇಲ್ಲವೇ ಇಬ್ಬರು ಸಾಧಕರನ್ನು ಕರೆಸಲಾಗುತ್ತಿದೆ. ಈಗಾಗಲೇ ಮೋಹಕತಾರೆ ರಮ್ಯಾ, ಪ್ರಭುದೇವ, ಢಾ.ಸಿ.ಎನ್.ಮಂಜುನಾಥ್, ದತ್ತಣ್ಣ, ಡಾಲಿ ಧನಂಜಯ್, ಅವಿನಾಶ್, ಮಂಡ್ಯ ರಮೇಶ್, ಡಾ. ಗುರುರಾಜ್ ಕರಜಗಿ, ಸಿಹಿಕಹಿ ಚಂದ್ರು, ನಟ ಪ್ರೇಮ್, ಚಿನ್ನಿ ಪ್ರಕಾಶ್, ಡಾ. ನಾ ಸೋಮೇಶ್ವರ್ ಆಗಮಿಸಿ ತಮ್ಮ ಜೀವನದ ಕುರಿತು ತಿಳಿಸಿದ್ದರು. ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಓರ್ವ ಸಾಧಕರು ಆಗಮಿಸುತ್ತಿದ್ದಾರೆ. ಅವರು ಯಾರು ಎಂಬ ಮಾಹಿತಿ ಇಲ್ಲಿದೆ.


cover image
ವಿ ನಾಗೇಂದ್ರ ಪ್ರಸಾದ್
1

ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿನ 1,000ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿರುವ ಕನ್ನಡ ಚಿತ್ರರಂಗದ ಜನಪ್ರಿಯ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್ ಈ ವಾರ  ವೀಕೆಂಡ್‌ ವಿತ್ ರಮೇಶ್‌ ಕಾರ್ಯಕ್ರಮಕ್ಕೆ ಬರಲಿದ್ದಾರೆ.  ಈ ಟಚ್ಚಲಿ ಏನೋ ಇದೆ...', ಹಾಗೂ 'ಕಣ್ ಕಣ್ಣ ಸಲಿಗೆ..' ಮುಂತಾದ ಅಸಂಖ್ಯಾತ ಒಂದಕ್ಕಿಂತ ಇನ್ನೊಂದು ವಿಭಿನ್ನ ಹಾಗೂ ವಿಶಿಷ್ಟ ಎಂಬಂತಹ ಹಾಡುಗಳ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನಗೆದ್ದಿರುವ ಇವರು, ಕೆ ವಿ ಜಯರಾಂ ನಿರ್ದೇಶನದ 'ಗಾಜಿನ ಮನೆ' ಚಿತ್ರಕ್ಕೆ 'ಗಂಧರ್ವ' ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳನ್ನು ಬರೆಯುವ ಮೂಲಕ ತಮ್ಮ ಗೀತಸಾಹಿತ್ಯದ ಪಯಣ ಆರಂಭಿಸಿದರು.  'ಸತ್ಯ' ಚಿತ್ರದ 'ಹುಟ್ಟು ಎರಡಕ್ಷರ...' ಹಾಡಿಗೆ 'ರಾಜ್ಯ ಪ್ರಶಸ್ತಿ' ಪಡೆದವರು. ದೀಪಕ್ ನಟನೆಯ 'ಶಿಷ್ಯ' ಹಾಗೂ 'ಅಂಬಿ' ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ನಟನೆಯ 'ನಲ್ಲ' ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸೂಪರ್ ಹಿಟ್ 'ಶ್ರೀ ಮಂಜುನಾಥ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ಆರಂಭಿಕ ಜೀವನ
2

ಬಹುರೂಪಿ ಬರಹಗಾರ ನಾಗೇಂದ್ರ ಪ್ರಸಾದ್ ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ವೆಂಕಟರಮಣಪ್ಪ, ತಾಯಿ ಚಂದ್ರಮ್ಮ. ಪ್ರಾಥಮಿಕ ಶಿಕ್ಷಣ ಮುಗಿಸಿದ್ದು ಅಜ್ಜಿಮನೆ ನಾಗಮಂಗಲದಲ್ಲಿ. ನಂತರ ಪ್ರೌಢ ಶಿಕ್ಷಣ, ಪದವಿ ಹಾಗೂ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಬೆಂಗಳೂರಿನಲ್ಲಿ ಮುಗಿಸಿದ ಇವರು ಸಾಹಿತ್ಯದ ಹಿನ್ನೆಲೆ ಕುಟುಂಬದಿಂದ ಬಂದವರು. ಇವರ ತಾತ ವೆಂಕಟಸುಬ್ಬಯ್ಯನವರು ನಾಟಕಕಾರರಾಗಿದ್ದರು. ಹೀಗಾಗಿ ನಾಟಕ ಹಾಗೂ ರಂಗಭೂಮಿಯ ನಂಟು ಹರಿದು ಬಂತು. ಹೈಸ್ಕೂಲ್‌ನಲ್ಲಿದ್ದಾಗಲೇ ಇವರು ಬರೆದ ಕವಿತಗಳು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು. ನಂತರ ಅಭಿನಯ ತರಂಗ ನಾಟಕಶಾಲೆಯಲ್ಲಿ ಡಿಪ್ಲೋಮಾ ಮುಗಿಸಿದರು. ಸಾವಿರಕ್ಕೂ ಹೆಚ್ಚು ಬೀದಿ ನಾಟಕಗಳಲ್ಲಿ ಅಭಿನಯಿಸಿದ ಇವರು, 15 ರಿಂದ 20 ಬೀದಿ ನಾಟಕಗಳನ್ನು ರಚಿಸಿದ್ದಾರೆ. 15 ರೇಡಿಯೋ ನಾಟಕಗಳ ರಚನೆ ಮತ್ತು ನಿರ್ದೇಶನವನ್ನೂ ಮಾಡಿದ್ದಾರೆ. ನಂತರ ಸಿನಿಮಾಗೆ ಹಾಡು ಬರೆಯುವ ಅವಕಾಶ ದೊರೆಯಿತು.  

ಕನ್ನಡ ಮಾಣಿಕ್ಯ
3

ನಂತರ ಒಂದಾದ ಮೇಲೆ ಇನ್ನೊಂದರಂತೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರುಗಳಾದ ಗುರುಕಿರಣ್, ವಿ ಹರಿಕೃಷ್ಣ, ಹಂಸಲೇಖ, ಇಳೆಯರಾಜ, ಸಾಧು ಕೋಕಿಲ, ಎಲ್ ಎನ್ ಶಾಸ್ತ್ರಿ ಮುಂತಾದವರ ಸ್ವರಸಂಯೋಜನೆಗಳಲ್ಲಿ 300 ಕ್ಕೂ ಮೀರಿದ ಚಿತ್ರಗಳಿಗೆ 1,000ಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ಸಾಹಿತ್ಯ ಬರೆದಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಂಘ-ಸಂಸ್ಥೆಗಳ ಗೌರವಕ್ಕೆ ಪ್ರಾಪ್ತರಾದ ಕೀರ್ತಿ ಇವರದು. `ಕನ್ನಡ ಮಾಣಿಕ್ಯ' ಎಂಬ ಮಾಸಿಕ ಪತ್ರಿಕೆಗೆ ಮುಖ್ಯ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹಿಂದಿನ ವಾರ ಯಾರಿದ್ದರು?
4

ಹಿಂದಿನ ವಾರ  ವೀಕೆಂಡ್ ವಿತ್ ರಮೇಶ್‌ ಕಾರ್ಯಕ್ರಮದ ಅತಿಥಿಯಾಗಿ ನೃತ್ಯ ನಿರ್ದೇಶಕ, ಕಲಾ ನಿರ್ದೇಶಕ, ನಟ, ನಿರ್ದೇಶಕ ಮತ್ತು ಚಿತ್ರಕಥೆ ಬರಹಗಾರ ಚಿನ್ನಿ ಪ್ರಕಾಶ್ ಮತ್ತು  'ಥಟ್ ಅಂತ ಹೇಳಿ' ಕಾರ್ಯಕ್ರಮದ ಮೂಲಕ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ್ ಸಾಧಕರ ಕುರ್ಚಿಯಲ್ಲಿ ಕುಳಿತಿದ್ದರು. ಇವರಿಬ್ಬರ ಸಂಚಿಕೆಗಳು ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದವು. 

ಫೋಟೋ ರಿಲೀಸ್
5

ಕನ್ನಡ ಚಿತ್ರರಂಗದ ಜನಪ್ರಿಯ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್ ಸಾಧಕರ ಕುರ್ಚಿಯಲ್ಲಿ ಕುಳಿತಿರುವ ಬ್ಲರ್ ಫೋಟೋ ಹಂಚಿಕೊಂಡಿರುವ ಜೀ ಕನ್ನಡ ವಾಹಿನಿ,ಈ  ವೀಕೆಂಡ್ ಕುರ್ಚಿಯಲ್ಲಿ ಕುಳಿತಿರುವ ಅತಿಥಿ ಯಾರು? ಗೆಸ್ ಮಾಡಿ ಎಂದು ಹೇಳಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+