X
ಹೋಮ್ ಚಲನಚಿತ್ರಗಳ ಒಳನೋಟ

ಫೋಷಕ ಪಾತ್ರಗಳ ಮೂಲಕ ಕಿರುತೆರೆಯಲ್ಲಿ ಕಮಾಲ್ ಮಾಡುತ್ತಿರುವ ಸ್ಯಾಂಡಲ್‌ವುಡ್‌ ನಟ-ನಟಿಯರಿವರು!

Author Sowmya Bairappa | Published: Saturday, July 15, 2023, 12:33 PM [IST]

ಸಿನಿಮಾವಾಗಲಿ ಅಥವಾ ಧಾರವಾಹಿಯೇ ಆಗಲಿ ಅದರಲ್ಲಿ ಫೋಷಕ ಪಾತ್ರಗಳ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಪೋಷಕ ಪಾತ್ರವಿಲ್ಲದೇ ಒಂದು ಕಥೆ ಸಂಫೂರ್ಣವಾಗುದಿಲ್ಲ. ಕೆಲವೊಮ್ಮೆ ಪೋಷಕ ಪಾತ್ರಗಳೇ ಮುಖ್ಯ ಪಾತ್ರಗಳಿಗಿಂತ ಹೆಚ್ಚು ಜನಪ್ರಿಯವಾಗುತ್ತವೆ. ಅದಕ್ಕೆ ಕಾರಣ ಆ ಪಾತ್ರಗಳ ಅದ್ಭುತ ನಟನೆ. ಇತ್ತೀಚಿನ ದಿನಗಳಲ್ಲಿ ಚಂದನವನದ ಹಿರಿಯ ನಟ-ನಟಿಯರು ಕಿರುತೆಯಲ್ಲಿ ಕಮಾಲ್ ಮಾಡುತ್ತಿದ್ದಾರೆ. ಇಲ್ಲಿ ಫೋಷಕ ಪಾತ್ರಗಳಿಂದ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಖ್ಯಾತ ನಟ-ನಟಿಯರ ಪಟ್ಟಿಯನ್ನು ನೀಡಲಾಗಿದೆ.


cover image
ಪದ್ಮಜಾ ರಾವ್

ಆರಂಭದಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟಿ ಪದ್ಮಜಾ ರಾವ್, ವೈಶಾಲಿ ಕಾಸರವಳ್ಳಿಯವರ 'ಮೂಡಲ ಮನೆ' ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ನಟಿಸುವ ಮೂಲಕ ಮುಖ್ಯಭೂಮಿಕೆಗೆ ಬಂದರು. ನಂತರ ಸಾಕಷ್ಟು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ ಪದ್ಮಜಾ, ರವಿಚಂದ್ರನ್ ಅವರ ಹಠವಾದಿ ಚಿತ್ರದ ಮೂಲಕ ಹಿರಿತೆರೆಗೆ ಪ್ರವೇಶಿಸಿದರು. ಈ ಚಿತ್ರದಲ್ಲಿನ ತಾಯಿಯ ಪಾತ್ರದಿಂದ ಗಮನ ಸೆಳೆದ ಇವರು ನಂತರ ಮುಂಗಾರು ಮಳೆ ಚಿತ್ರದ ಮೂಲಕ ಜನಮಾನಸಕ್ಕೆ ತುಂಬಾ ಹತ್ತಿರವಾದರು. ಬಳಿಕ ಹಲವು ಹಿಟ್‌ ಸಿನಿಮಾಗಳಲ್ಲಿ ಅಭಿನಯಿಸಿರುವ ಇವರು, ಕೆಲ ಸೀರಿಯಲ್‌ಗಳನ್ನು ಕೂಡ ನಿರ್ದೇಶಿಸಿದ್ದಾರೆ. ಸದ್ಯ ಇವರು ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ತಮ್ಮ ನಟನೆ ಮೂಲಕ ಕಿರುತೆರೆ ಲೋಕದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಈ ಸೀರಿಯಲ್‌ನಲ್ಲಿ ಅವರ 'ಕುಸುಮ' ಪಾತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಸುಧಾರಾಣಿ

1986ರಲ್ಲಿ ತೆರೆಕಂಡ 'ಆನಂದ್' ಚಿತ್ರದ ಮೂಲಕ ಚಂದನವನ ಪ್ರವೇಶಿಸಿದ ಸುಧಾರಾಣಿ ನಂತರ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ಸುಧಾರಾಣಿ ಬೆಳ್ಳಿತೆರೆಯಿಂದ ಕಿರುತೆರೆಗೆ ಎಂಟ್ರಿಕೊಟ್ಟಿದ್ದಾರೆ. ಸದ್ಯ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀರಸ್ತು ಶುಭಮಸ್ತು' ಧಾರಾವಾಹಿಯಲ್ಲಿ ಮುಖ್ಯ ಫೋಷಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೊಂದು ಮಹಿಳಾ ಪ್ರಧಾನವಾದ ಸೀರಿಯಲ್‌ ಆಗಿದ್ದು, ತುಳಸಿ ಪಾತ್ರದ ಮೂಲಕ ಸುಧಾರಾಣಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದಾರೆ. 

ದೊಡ್ಡಣ್ಣ

ಖಳನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಹಿರಿಯ ನಟ ದೊಡ್ಡಣ್ಣ, ನಂತರದ ದಿನಗಳಲ್ಲಿ ತಮ್ಮ ಹಾಸ್ಯದ ಮೂಲಕ ಅಪಾರ ಕನ್ನಡ ಸಿನಿರಸಿಕರನ್ನು ಸಂಪಾದಿಸಿದರು. ನೂರಾರು ಸಿನಿಮಾಗಳಲ್ಲಿ ತಮ್ಮ ಹಾಸ್ಯ ಹಾಗೂ ಅಭಿನಯದ ಮೂಲಕ ಸಿನಿರಸಿಕರ ಮನಗೆದ್ದಿರುವ ದೊಡ್ಡಣ್ಣ, ಸದ್ಯ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಇವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಕೆಂಡಸಂಪಿಗೆ' ಧಾರಾವಾಹಿಯಲ್ಲಿ ಕೇಶವ್‌ ಪ್ರಸಾದ್ ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. 

 

ವಿನಯ್ ಪ್ರಸಾದ್

ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ನಟನೆಯಿಂದ ಛಾಪನ್ನು ಮೂಡಿಸಿರುವ ವಿನಯ ಪ್ರಸಾದ್, ಅನಂತ್ ನಾಗ್ ನಟನೆಯ 'ಗಣೇಶನ ಮದುವೆ' ಸಿನಿಮಾ ಮೂಲಕ ಸಿನಿಮಾರಂಗ ಪ್ರವೇಶಿಸಿದರು. ಬಳಿಕ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ ಈ ನಟಿ, ಸದ್ಯ ಫೋಷಕ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇವರು ಕಳೆದ ಕೆಲ ವರ್ಷಗಳಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪಾರು ಸೀರಿಯಲ್‌ನಲ್ಲಿ ಅರಸನ ಕೋಟೆ ಅರಮನೆಯ ಮಹಾರಾಣಿ ಅಖಿಲಾಂಡೇಶ್ವರಿ ಪಾತ್ರದ ಮೂಲಕ ಸೀರಿಯಲ್‌ ಪ್ರಿಯರ ಮನಗೆದ್ದಿದ್ದಾರೆ. 

ಗುರುದತ್ತ್

ಚಿತ್ರರಂಗದ ಖ್ಯಾತ ಗೀತಸಾಹಿತಿ ಮತ್ತು ಸಂಭಾಷಣಾಕಾರ ಚಿ.ಉದಯಶಂಕರ್‌ ಅವರ ಪುತ್ರರಾಗಿರುವ ಚಿಟ್ನಹಳ್ಳಿ ಗುರುದತ್ತ್ `ಆನಂದ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಚಂದನವನದಲ್ಲಿ ಖಳನಟನಾಗಿ ತಮ್ಮದೇಯಾದ ಛಾಪು ಮೂಡಿಸಿರುವ ಇವರು, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಇವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ರಾಮಾಚಾರಿ' ಸೀರಿಯಲ್‌ನಲ್ಲಿ ನಾಯಕಿಯ ತಂದೆ ಜಯಶಂಕರ್' ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  

 

ಸುಧಾ ಬೆಳವಾಡಿ

ಕನ್ನಡ ಚಿತ್ರರಂಗದ ಖ್ಯಾತ ಫೋಷಕ ನಟಿಯಾಗಿರುವ ಸುಧಾ ಬೆಳವಾಡಿ, ಹಲವಾರು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇವರು ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟಿ ಭಾರ್ಗವಿ ನಾರಾಯಣ್ ಅವರ ಪುತ್ರಿ. ಸುಧಾ ಬೆಳವಾಡಿ ಅವರು ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷಣ ಧಾರಾವಾಹಿಯಲ್ಲಿ ಶಂಕುತಲಾದೇವಿ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದಾರೆ.  

 

ಗಿರಿಜಾ ಲೋಕೇಶ್

ಗಿರಿಜಾ ಲೋಕೇಶ್ ಕನ್ನಡ ಚಿತ್ರರಂಗದ ಕಲಾತ್ಮಕ ನಟಿ ಮತ್ತು ರಂಗಭೂಮಿ ಕಲಾವಿದೆ. ಕನ್ನಡ ಚಿತ್ರರಂಗದ ಅಚ್ಚಳಿಯದ ನಟ ಲೋಕೇಶ್ ಅವರ ಧರ್ಮಪತ್ನಿ. ಹದಿನಾಲ್ಕನೇ ವಯಸ್ಸಿನಲ್ಲಿ ರಂಗಭೂಮಿ ಪ್ರವೇಶಿಸಿದ ಇವರು, ತಮ್ಮ ಅದ್ಭುತ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಈ ಹಿಂದೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಇವರು, ಸದ್ಯ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ಸತ್ಯ ಸೀರಿಯಲ್‌ನಲ್ಲಿ ಜಾನಕಮ್ಮ ಪಾತ್ರದಲ್ಲಿ ಅಬಿನಯಿಸುತ್ತಿದ್ದಾರೆ. 

 

ಉಮಾಶ್ರಿ

ಉಮಾಶ್ರೀ ಕನ್ನಡ ಚಿತ್ರ ರಸಿಕರ ಮನಸ್ಸಿನಲ್ಲಿ ತಮ್ಮ ಅದ್ಬುತ ನಟನೆಯ ಮೂಲಕ ವಿಶೇಷ ಸ್ಥಾನ ಪಡೆದಿದ್ದಾರೆ. ಹಾಸ್ಯ ನಟನೆಯಿಂದ ಹಿಡಿದು ಆಳವಾಗಿ ಪ್ರಭಾವ ಬೀರುವ ಪಾತ್ರಗಳಲ್ಲಿ ಲೀಲಾ ಜಾಲವಾಗಿ ಅಭಿನಯಿಸಿದ್ದಾರೆ. ಜೊತೆಗೆ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ. ಸದ್ಯ ಉಮಾಶ್ರೀ ಜೀ ಕನ್ನಡ ವಾಹಿನಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೂಲಕ ಕಮಾಲ್ ಮಾಡಿದ್ದಾರೆ. ಮೂವರು ಹೆಣ್ಣು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿರುವ ಅವರ ಅಭಿನಯಕ್ಕೆ ಕಿರುತೆರೆ ಪ್ರೇಕ್ಷಕರು ಫಿದಾ ಆಗಿದ್ದಾರೆ. 

ಶ್ರೀನಿವಾಸ ಮೂರ್ತಿ

ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರು ಸುಮಾರು ೪೦ ವರ್ಷಗಳ ಕಾಲ ಚಂದನವನದಲ್ಲಿ ಕೆಲಸ ಮಾಡಿದ್ದಾರೆ. ಅನೇಕ ಧಾರಾವಾಹಿಗಳಲ್ಲಿ ನಟಿಸಿದ ಇವರು, ನಂತರದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಸದ್ಯ ಅವರು ಮತ್ತೆ ಕಿರುಲೋಕಕ್ಕೆ ಕಾಳಿಟ್ಟಿದ್ದು,  ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ಸತ್ಯ ಸೀರಿಯಲ್‌ನಲ್ಲಿ ರಾಮಚಂದ್ರ ರಾಯರು ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. 

 

ಅಭಿಜಿತ್

80ರ ದಶಕದಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟ ಅಭಿಜಿತ್, ನಾಯಕನಾಗಿ, ಖಳನಾಯಕನಾಗಿ ಮತ್ತು ಪೋಷಕ ನಟನಾಗಿ ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಟ ಮಾತ್ರವಲ್ಲದೇ ಗಾಯಕ, ನಿರ್ಮಾಪಕ ಮತ್ತು ನಿರ್ದೇಶಕ ಕೂಡ ಹೌದು. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ಸತ್ಯ ಸೀರಿಯಲ್‌ನಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸುತ್ತಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+