X
ಹೋಮ್ ಚಲನಚಿತ್ರಗಳ ಒಳನೋಟ

ಬಾಕ್ಸಾಪೀಸ್‌ನಲ್ಲಿ ಅತಿಹೆಚ್ಚು ಗಳಿಕೆ ಕಂಡ ದರ್ಶನ್ ನಟನೆಯ ಟಾಪ್ 5 ಸಿನಿಮಾಗಳಿವು!

Author Sowmya Bairappa | Published: Monday, September 23, 2024, 04:22 PM [IST]

ಕನ್ನಡ ಚಿತ್ರರಂಗದಲ್ಲಿ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು 'ಬಾಕ್ಸಾಫೀಸ್ ಸುಲ್ತಾನ್' ಅಂತ ಕರೆಯಲಾಗುತ್ತದೆ. ಕೇವಲ ಜನಪ್ರಿಯತೆ ಮಾತ್ರವಲ್ಲದೇ ಅವರ ಸಿನಿಮಾಗಳು ಬಾಕ್ಸಾಫೀಸ್ ಕಲೆಕ್ಷನ್ ವಿಚಾರದಲ್ಲೂ ಮುಂದಿವೆ. ಸದ್ಯ ದರ್ಶನ್ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇಲ್ಲಿ ಐಎಂಡಿಬಿ ಪ್ರಕಾರ, ಬಾಕ್ಸಾಪೀಸ್‌ನಲ್ಲಿ ಅತಿಹೆಚ್ಚು ಗಳಿಕೆ ಕಂಡ ದರ್ಶನ್ ನಟನೆಯ ಟಾಪ್ 5 ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


cover image
ಕಾಟೇರ

2023ರ ಕೊನೆಯಲ್ಲಿ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ತೂಗುದೀಪ್ ಅಭಿನಯದ 'ಕಾಟೇರ' ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೊಂದು ಪಕ್ಕ ಹಳ್ಳಿ ಸೊಗಡಿನ ಈ ಸಿನಿಮಾದಲ್ಲಿ ದರ್ಶನ್ ಕಥೆಯ ಗೇಜ್ ಅರಿತು ಹಾಗೂ ತಮ್ಮ ಇಮೇಜ್ ಪಕ್ಕಕ್ಕಿಟ್ಟು ತಮ್ಮ ಪಾತ್ರ ಮಾಡಿದ್ದರು. ಚಿತ್ರದಲ್ಲಿ ಜಾತಿವ್ಯವಸ್ಥೆ, ಅಸ್ಪೃಶ್ಯತೆ, ಮೇಲು ಕೀಳು ಎನ್ನುವ ಭೇದ-ಭಾವ ಆ ಕಾಲದಲ್ಲಿ ಎಷ್ಟರಮಟ್ಟಿಗಿತ್ತು ಎನ್ನುವುದನ್ನು ತೋರಿಸಲಾಗಿತ್ತು. ಕಾಟೇರ ಸಿನಿಮಾವನ್ನು 45 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದ್ದು, ಬಾಕ್ಸಾಫೀಸ್‌ನಲ್ಲಿ 105 ಕೋಟಿ ರೂ. ಕಲೆಕ್ಷನ್ ಮಾಡಿತ್ತು.

ಕುರುಕ್ಷೇತ್ರ

ಕನ್ನಡದ ಅತ್ಯಂತ ಅದ್ಧೂರಿ ಪೌರಾಣಿಕ ಚಿತ್ರವಾದ ಕುರುಕ್ಷೇತ್ರವನ್ನು ಶಾಸಕ ಮುನಿರತ್ನ ನಿರ್ಮಿಸಿದ್ದರು. ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ. ಒಂದು ಕಾಲದಲ್ಲಿ ದರ್ಶನ್ ಬರೀ ಹೀರೋಯಿಸಂ ಪಾತ್ರಗಳನ್ನೇ ಮಾಡುತ್ತಾ ಒಂದೇ ರೀತಿಯ ಪಾತ್ರಗಳಿಗೆ ಅಂಟಿಕೊಂಡಿದ್ದರು ಎಂಬ ಆರೋಪವಿತ್ತು. ಆದರೆ, ಅಂತಹ ಮಾತುಗಳಿಗೆ ದರ್ಶನ್ 'ಕುರುಕ್ಷೇತ್ರ' ಸಿನಿಮಾ ಮೂಲಕ ಉತ್ತರ ಕೊಟ್ಟಿದ್ದರು. ಈ ಸಿನಿಮಾದಲ್ಲಿ ದರ್ಶನ್ ಅವರು ದುರ್ಯೋಧನ ಪಾತ್ರ ನಿರ್ವಹಿಸಿದ್ದು, ಈ ಪಾತ್ರ ಚಾಲೆಂಜಿಂಗ್ ಸಿನಿಬದುಕಿನ ಬೆಸ್ಟ್ ಪಾತ್ರಗಳಲ್ಲಿ ಒಂದಾಗಿದೆ. ಕುರುಕ್ಷೇತ್ರ ಚಿತ್ರವನ್ನು 65 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 92 ಕೋಟಿ ರೂ. ಗಳಿಕೆ ಕಂಡಿತ್ತು.

ರಾಬರ್ಟ್

ದರ್ಶನ್ ಅವರ 53ನೇ ಚಿತ್ರ 'ರಾಬರ್ಟ್'. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾವನ್ನು ಅಂದಾಜು 45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಉಮಾಪತಿ ಶ್ರೀನಿವಾಸ್ ರಾಬರ್ಟ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕೆಜಿಎಫ್ ಖ್ಯಾತಿ ಚಂದ್ರಮೌಳಿ ಮತ್ತು ಅಮ್ಮಾ ಐ ಲವ್ ಯು ಖ್ಯಾತಿ ರಾಜಶೇಖರ್ ಈ ಚಿತ್ರಕ್ಕೆ ಡೈಲಾಗ್ ಬರೆದಿದ್ದರು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಬರೋಬ್ಬರಿ 73 ಕೋಟಿ ಗಳಿಸಿತ್ತು.

ಯಜಮಾನ

ವಿ.ಹರಿಕೃಷ್ಣ ನಿರ್ದೇಶನ 'ಯಜಮಾನ' ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 51ನೇ ಸಿನಿಮಾ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದರು. ಬೆಳೆ ಬೆಳೆದ ರೈತನೇ ನಿಜವಾದ 'ಯಜಮಾನ' ಎಂದು ಹೇಳುವ ಈ ಸಿನಿಮಾ ಕೆಲ ಸೂಕ್ಷ್ಮ ವಿಷಯಗಳನ್ನು ಕಮರ್ಶಿಯಲ್ ಶೈಲಿಯಲ್ಲಿ ಹೇಳಿತ್ತು. ಜೊತೆಗೆ ಮಜಾ ನೀಡೋ ಹಾಡು, ಥ್ರಿಲ್ ನೀಡುವ ಫೈಟುಗಳ ಜೊತೆಜೊತೆಗೆ ಫ್ಯಾಮಿಲಿ ಹಾಗೂ ಊರಿನ ಕಥೆ ಇರುವ 'ಯಜಮಾನ' ಪ್ರೇಕ್ಷಕರನ್ನು ಸೆಳೆದಿತ್ತು. ಯಜಮಾನ ರೈತರ ಸಮಸ್ಯೆಗಳ ಕುರಿತಾಗಿದ್ದು, ಈ ಚಿತ್ರ ಶತದಿನೋತ್ಸವ ಪೂರೈಸಿ 52 ಕೋಟಿ ರೂ. ಬಾಚಿಕೊಂಡಿತ್ತು.

ಕ್ರಾಂತಿ

2023ರ ಆರಂಭದಲ್ಲಿ ಬಿಡುಗಡೆಯಾದ ವಿ.ಹರಿಕೃಷ್ಣ ನಿರ್ದೇಶನದ  'ಕ್ರಾಂತಿ' ಸಿನಿಮಾವನ್ನು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು.  ಹಣಬಲ, ಬಾಹುಬಲವುಳ್ಳ ಎನ್‌ಆರ್‌ಐ ವ್ಯಕ್ತಿಯೊಬ್ಬ ಖಾಸಗಿ ಶಾಲೆಗಳ ಮೇಲೆ ಸಮರ ಸಾರುವ ಹಾಗೂ ಸರ್ಕಾರವನ್ನು ಸರ್ಕಾರಿ ಶಾಲೆಗಳ ಪರವಾಗುವಂತೆ ಮಾಡುವ ಕಥೆಯನ್ನು ಹೊಂದಿದ್ದ ಕ್ರಾಂತಿ ಸಿನಿಮಾ ಬಾಕ್ಸಾಫೀಸ್‌ನಲ್ಲಿ 50 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+