X
ಹೋಮ್ ಚಲನಚಿತ್ರಗಳ ಒಳನೋಟ

ಸಿನಿಮಾದಿಂದ ಕಿರುತೆರೆಯತ್ತ ಮುಖ ಮಾಡಿದ ಫೋಷಕ ನಟರ ಪಟ್ಟಿ ಇಲ್ಲಿದೆ.

Author Sowmya Bairappa | Published: Wednesday, September 11, 2024, 03:33 PM [IST]

ಸಿನಿಮಾ ಹಾಗೂ ಸೀರಿಯಲ್‌ಗಳಲ್ಲಿ ಆಗಾಗ ಟ್ರೆಂಡ್ ಬದಲಾಗುತ್ತಲೇ ಇರುತ್ತದೆ. ಕಿರುತೆರೆಯಲ್ಲಿ ನಾಯಕ-ನಾಯಕಿಯರಿಗೆ ಎಷ್ಟು ಬೇಡಿಕೆ ಇರುತ್ತದೋ, ಅಷ್ಟೇ ಪೋಷಕ ಪಾತ್ರಗಳೂ ಗಮನ ಸೆಳೆಯುತ್ತವೆ. ನಾಯಕ-ನಾಯಕಿಯರ ತಂದೆ, ತಾಯಿ ಪಾತ್ರ ನಿರ್ವಹಿಸಿರುವವರು ತಮ್ಮ ಅಭಿನಯದಿಂದಲೇ ಪ್ರೇಕ್ಷಕರ ಮೇಲೆ ಪ್ರಭಾವ ಬೀರಿರುತ್ತಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಫೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟರು ಕಿರುತೆರೆಯತ್ತ ಮುಖ ಮಾಡುತ್ತಿದ್ದಾರೆ. ಇಲ್ಲಿ ಸಿನಿಮಾದಿಂದ ಕಿರುತೆರೆಯತ್ತ ಮುಖ ಮಾಡಿದ ಫೋಷಕ ನಟರ ಪಟ್ಟಿಯನ್ನು ನೀಡಲಾಗಿದೆ.


cover image
ದೊಡ್ಡಣ್ಣ

ಖಳನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಹಿರಿಯ ನಟ ದೊಡ್ಡಣ್ಣ, ನಂತರದ ದಿನಗಳಲ್ಲಿ ತಮ್ಮ ಹಾಸ್ಯದ ಮೂಲಕ ಅಪಾರ ಕನ್ನಡ ಸಿನಿರಸಿಕರನ್ನು ಸಂಪಾದಿಸಿದರು. ನೂರಾರು ಸಿನಿಮಾಗಳಲ್ಲಿ ತಮ್ಮ ಹಾಸ್ಯ ಹಾಗೂ ಅಭಿನಯದ ಮೂಲಕ ಸಿನಿರಸಿಕರ ಮನಗೆದ್ದಿರುವ ದೊಡ್ಡಣ್ಣ, ಸದ್ಯ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಇವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಕೆಂಡಸಂಪಿಗೆ' ಧಾರಾವಾಹಿಯಲ್ಲಿ ಕೇಶವ್‌ ಪ್ರಸಾದ್ ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ.

ಗುರುದತ್ತ್

ಚಿತ್ರರಂಗದ ಖ್ಯಾತ ಗೀತಸಾಹಿತಿ ಮತ್ತು ಸಂಭಾಷಣಾಕಾರ ಚಿ.ಉದಯಶಂಕರ್‌ ಅವರ ಪುತ್ರರಾಗಿರುವ ಚಿಟ್ನಹಳ್ಳಿ ಗುರುದತ್ತ್ `ಆನಂದ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಚಂದನವನದಲ್ಲಿ ಖಳನಟನಾಗಿ ತಮ್ಮದೇಯಾದ ಛಾಪು ಮೂಡಿಸಿರುವ ಇವರು, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಇವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ರಾಮಾಚಾರಿ' ಸೀರಿಯಲ್‌ನಲ್ಲಿ ನಾಯಕಿಯ ತಂದೆ ಜಯಶಂಕರ್' ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  

ಅಭಿಜಿತ್

80ರ ದಶಕದಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟ ಅಭಿಜಿತ್, ನಾಯಕನಾಗಿ, ಖಳನಾಯಕನಾಗಿ ಮತ್ತು ಪೋಷಕ ನಟನಾಗಿ ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಟ ಮಾತ್ರವಲ್ಲದೇ ಗಾಯಕ, ನಿರ್ಮಾಪಕ ಮತ್ತು ನಿರ್ದೇಶಕ ಕೂಡ ಹೌದು. ಇವರು ಈ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿದ್ದ ಸತ್ಯ ಸೀರಿಯಲ್‌ನಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದರು. ಜೊತೆಗೆ ಸ್ಟಾರ್ ಸುವರ್ಣ ವಾಹಿನಿಯ ಸರಸು ಸೀರಿಯಲ್‌ನಲ್ಲೂ ನಟಿಸುತ್ತಿದ್ದಾರೆ.

ಶ್ರೀನಿವಾಸ ಮೂರ್ತಿ

ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರು ಸುಮಾರು 40 ವರ್ಷಗಳ ಕಾಲ ಚಂದನವನದಲ್ಲಿ ಕೆಲಸ ಮಾಡಿದ್ದಾರೆ. ಅನೇಕ ಧಾರಾವಾಹಿಗಳಲ್ಲಿ ನಟಿಸಿದ ಇವರು, ನಂತರದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಇವರು ಈ ಹಿಂದೆ  ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿದ್ದ ಸತ್ಯ ಸೀರಿಯಲ್‌ನಲ್ಲಿ ರಾಮಚಂದ್ರ ರಾಯರು ಎಂಬ ಪಾತ್ರ ನಿರ್ವಹಿಸಿದ್ದರು.

ರಾಜೇಶ್  ನಟರಂಗ

ತಮ್ಮ ಪ್ರಬುದ್ಧ ನಟನೆಯಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲೂ ಛಾಪು ಮೂಡಿಸಿರುವವರು ರಾಜೇಶ್ ನಟರಂಗ. ಮಾಯಾಮೃಗ, ಮುಕ್ತ, ಬದುಕು, ಶಕ್ತಿ, ಗುಪ್ತ ಗಾಮಿನಿ ಮುಂತಾದ ಧಾರಾವಾಹಿಗಳಲ್ಲಿ ಭಿನ್ನ-ಭಿನ್ನ ಪಾತ್ರದಲ್ಲಿ ಮಿಂಚಿದ್ದ ಇವರು, ಆನಂತರ ಸಿನಿಮಾಗಳಲ್ಲಿ ಬ್ಯುಸಿಯಾದರು. ಸದ್ಯ ಜೀ ಕನ್ನಡ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ನಾಯಕ ಗೌತಮ್ ದಿವಾನ್ ಪಾತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಆದಿ ಲೋಕೇಶ್

ನೆಗೆಟಿವ್ ಪಾತ್ರಗಳ ಮೂಲಕ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ಖಳನಾಯಕರುಗಳ ಪೈಕಿ ಆದಿ ಲೊಕೇಶ್ ಕೂಡಾ ಒಬ್ಬರು. ನಟಿಸಿರುವಂತಹ ಹೆಚ್ಚಿನ ಸಿನಿಮಾಗಳಲ್ಲಿ ಖಳನಾಯಕನಾಗಿ ಅಬ್ಬರಿಸಿ ಸೈ ಎನಿಸಿಕೊಂಡಿದ್ದ ಆದಿ ಲೋಕೇಶ್, ಶ್ರುತಿ ನಾಯ್ಡು ನಿರ್ದೇಶನದ ಒಲವಿನ ನಿಲ್ದಾಣ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು. ಇದರಲ್ಲೂ ಅವರದ್ದು ನೆಗೆಟಿವ್ ಕ್ಯಾರೆಕ್ಟರ್ ಆಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+