ಚಲನಚಿತ್ರಗಳ ಒಳನೋಟ
ಜನಸಾಮಾನ್ಯರ ದೃಷ್ಟಿಯಲ್ಲಿ ಸಿನಿಮಾರಂಗ ಅಂದ ತಕ್ಷಣ ಕಣ್ತುಂಬ ಬಣ್ಣಗಳೇ ತುಂಬಿಕೊಳ್ಳುತ್ತವೆ. ಆದರೆ, ಬಣ್ಣದ ಲೋಕದಲ್ಲಿ ಯಶಸ್ಸು ಸಿಗುವುದು ಅಷ್ಟು ಸುಲಭದ ಮಾತಲ್ಲ. ಒಂದು ವೇಳೆ ಯಶಸ್ಸು ಸಿಕ್ಕರೂ ಅದನ್ನು ಸತತವಾಗಿ ಕಾಪಾಡಿಕೊಂಡು ಹೋಗುವುದು ಸುಲಭದ ಮಾತಲ್ಲ. ಸದ್ಯ ಕನ್ನಡದ ಕ್ರಿಯೇಟಿವ್ ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣಾಗಿರುವ ವಿಷಯ ಸ್ಯಾಂಡಲ್ವುಡ್ಗೆ ಶಾಕ್ ಉಂಟು ಮಾಡಿದೆ. ತಮ್ಮ ಬರವಣಿಗೆಯಿಂದ, ವಿಭಿನ್ನ ಆಲೋಚನೆಗಳಿಂದ ಸಿನಿಪ್ರಿಯರಿಗೆ ಇಷ್ಟವಾಗುತ್ತಿದ್ದ ಗುರುಪ್ರಸಾದ್ ಚಿತ್ರರಂಗಕ್ಕೆ ಅವರದ್ದೇ ಆದ ಕೊಡುಗೆಯನ್ನು ನೀಡಿದ್ದರು. ಇಲ್ಲಿ ಗುರುಪ್ರಸಾದ್ ಅವರಂತೆಯೇ ಆತ್ಮಹತ್ಯೆಗೆ ಶರಣಾದ ನಟ-ನಟಿಯರ ಪಟ್ಟಿಯನ್ನು ನೀಡಲಾಗಿದೆ.