X
ಹೋಮ್ ಚಲನಚಿತ್ರಗಳ ಒಳನೋಟ

ಗುರುಪ್ರಸಾದ್ ಅವರಂತೆಯೇ ಆತ್ಮಹತ್ಯೆಗೆ ಶರಣಾದ ಕನ್ನಡದ ನಟ-ನಟಿಯರಿವರು!

Author Sowmya Bairappa | Updated: Tuesday, November 5, 2024, 10:15 AM [IST]

ಜನಸಾಮಾನ್ಯರ ದೃಷ್ಟಿಯಲ್ಲಿ ಸಿನಿಮಾರಂಗ ಅಂದ ತಕ್ಷಣ ಕಣ್ತುಂಬ ಬಣ್ಣಗಳೇ ತುಂಬಿಕೊಳ್ಳುತ್ತವೆ. ಆದರೆ, ಬಣ್ಣದ ಲೋಕದಲ್ಲಿ ಯಶಸ್ಸು ಸಿಗುವುದು ಅಷ್ಟು ಸುಲಭದ ಮಾತಲ್ಲ. ಒಂದು ವೇಳೆ ಯಶಸ್ಸು ಸಿಕ್ಕರೂ ಅದನ್ನು ಸತತವಾಗಿ ಕಾಪಾಡಿಕೊಂಡು ಹೋಗುವುದು ಸುಲಭದ ಮಾತಲ್ಲ. ಸದ್ಯ ಕನ್ನಡದ ಕ್ರಿಯೇಟಿವ್ ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣಾಗಿರುವ ವಿಷಯ ಸ್ಯಾಂಡಲ್‌ವುಡ್‌ಗೆ ಶಾಕ್ ಉಂಟು ಮಾಡಿದೆ. ತಮ್ಮ ಬರವಣಿಗೆಯಿಂದ, ವಿಭಿನ್ನ ಆಲೋಚನೆಗಳಿಂದ ಸಿನಿಪ್ರಿಯರಿಗೆ ಇಷ್ಟವಾಗುತ್ತಿದ್ದ ಗುರುಪ್ರಸಾದ್ ಚಿತ್ರರಂಗಕ್ಕೆ ಅವರದ್ದೇ ಆದ ಕೊಡುಗೆಯನ್ನು ನೀಡಿದ್ದರು. ಇಲ್ಲಿ ಗುರುಪ್ರಸಾದ್ ಅವರಂತೆಯೇ ಆತ್ಮಹತ್ಯೆಗೆ ಶರಣಾದ ನಟ-ನಟಿಯರ ಪಟ್ಟಿಯನ್ನು ನೀಡಲಾಗಿದೆ.


cover image
ಸಂಪತ್ ಜಯರಾಮ್

ಕಲರ್ಸ್ ಕನ್ನಡ ಧಾರಾವಾಹಿಯಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಧಾರಾವಾಹಿಯ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ಸಂಪತ್ ಜಯರಾಮ್ 2023ರ ಏಪ್ರಿಲ್ 22ರಂದು ನೆಲಮಂಗಲದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರಿಗೆ ಕೇವಲ 35ವರ್ಷ ವಯಸ್ಸಾಗಿತ್ತು. ಅಗ್ನಿಸಾಕ್ಷಿ ಸೀರಿಯಲ್‌ನಲ್ಲಿ ನಾಯಕಿ (ಸನ್ನಿಧಿ) ಅಣ್ಣನ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಇದರ ಜೊತೆಗೆ ಹಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಫೋಷಕ ಪಾತ್ರ ನಿರ್ವಹಿಸಿದ್ದರು. ಒಂದು ವರ್ಷದ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಅವರು ಇದ್ದಕ್ಕಿದ್ದಂತೆ ಇಹಲೋಕ ತ್ಯಜಿಸಿರುವುದು ಕುಟುಂಬಸ್ಥರಿಗೆ, ಅಭಿಮಾನಿಗಳು ಮತ್ತು ಪ್ರೀತಿ ಪಾತ್ರರಿಗೆ ತೀವ್ರ ಆಘಾತ ಉಂಟುಮಾಡಿತ್ತು.

ಜಯಶ್ರೀ ರಾಮಯ್ಯ

ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಮೂಲಕ ಕನ್ನಡ ಕಿರುತೆರೆಗೆ ಪರಿಚಿತರಾಗಿದ್ದ ಜಯಶ್ರೀ ರಾಮಯ್ಯ 2021ರ ಜನವರಿ 25ರಂದು ಬೆಂಗಳೂರಿನ ಮಾಗಡಿ ರಸ್ತೆಯ ಗೊಲ್ಲರಹಟ್ಟಿಯ ಪ್ರಗತಿ ಬಡಾವಣೆಯಲ್ಲಿರುವ ಸಂಧ್ಯಾಕಿರಣ ಆಶ್ರಮದ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈ ನಟಿ ಸಾವಿನ ದಾರಿ ಹಿಡಿದಿದ್ದರು. ಬಿಗ್ ಬಾಸ್ ಸೀಸನ್ 3ರಲ್ಲಿ ಇವರು ಭಾಗವಹಿಸಿದ್ದರು.  

ಸುಶೀಲ್ ಗೌಡ

ಮಂಡ್ಯ ಮೂಲದ ನಟ ಸುಶೀಲ್ ಗೌಡ 2020ರ ಜುಲೈ ತಿಂಗಳಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರಿಗೆ  30 ವರ್ಷ ವಯಸ್ಸಾಗಿತ್ತು. ಸುಶೀಲ್ ಗೌಡ ಮದುವೆಯಾದ ಕೆಲವೇ ದಿನಗಳಲ್ಲಿ ತಮ್ಮ ಫಾರ್ಮ್ ಹೌಸ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರಿನಲ್ಲಿ ಜಿಲ್ ಟ್ರೈನರ್ ಆಗಿದ್ದ ಇವರು ಅಂತಃಪುರ ಸೀರಿಯಲ್‌ನಲ್ಲಿ ಅಭಿನಯಿಸಿದ್ದರು. ಜೊತೆಗೆ ಕಮರೊಟ್ಟು ಚೆಕ್ ಪೋಸ್ಟ್‌, ಸಲಗ ಸಿನಿಮಾದಲ್ಲೂ ನಟಿಸಿದ್ದರು.

ಸೌಜನ್ಯಾ

ಕಿರುತೆರೆ ನಟಿ ಸೌಜನ್ಯಾ 2021ರಲ್ಲಿ ಕುಂಬಳಗೋಡಿನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ನಟಿ ಯಾವ ಮೇಲೂ ಆರೋಪ ಮಾಡಿರಲಿಲ್ಲ. ಮಾನಸಿಕವಾಗಿ ಕುಗ್ಗಿರುವುದಾಗಿ ಹೇಳಿದ್ದರು. ನನ್ನ ಜೀವನದಲ್ಲಿ ಇಂತಹದ್ದೊಂದು ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಪ್ರಾಮಿಸ್ ಮಾಡಿದ್ದೆ. ಆದರೆ, ನನಗೀಗ ಯಾವುದೇ ಆಯ್ಕೆ ಇಲ್ಲ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದರು.   

ಗುರುಪ್ರಸಾದ್

ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ಬರಹಗಾರ ಹಾಗೂ ನಿರ್ದೇಶಕರಾದ ಗುರುಪ್ರಸಾದ್ 2024ರ ನವೆಂಬರ್ 3ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಹೆವೆನ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ಚಂದನವನಕ್ಕೆ ಶಾಕ್ ಉಂಟುಮಾಡಿತ್ತು. ಕಿರುತೆರೆಯಿಂದ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಗುರುಪ್ರಸಾದ್ ನಂತರ ಸಿನಿಮಾ ಕಡೆಗೆ ವಾಲಿಕೊಂಡರು. ಸಿನಿಮಾದಲ್ಲಿ ಯಶಸ್ಸು ನೀಡಬೇಕು ಅನ್ನೋ ಆಸೆಯಿತ್ತು. ಅದರಂತೆ ಎರಡು ಅದ್ಭುತ ಸಿನಿಮಾಗಳನ್ನು ಕೊಟ್ಟು ಗುರುಪ್ರಸಾದ್ ಗೆದ್ದಿದ್ದರು.
 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+