ಬಿಗ್ಬಾಸ್ ಕನ್ನಡ ಸೀಸನ್ 11 ಆರಂಭವಾಗಿ ಕೇವಲ ಎರಡು ವಾರಗಳು ಕಳೆದಿವೆ. ಎರಡೇ ವಾರಕ್ಕೆ ಸ್ಪರ್ಧಿಗಳ ನಡುವೆ ಜಗಳ, ವಾದ-ವಿವಾದ, ತಳ್ಳಾಟ, ನೂಕಾಟ ಹೆಚ್ಚಾಗಿದೆ. ಸದ್ಯ ಇಡೀ ಮನೆ ಒಂದು, ಜಗದೀಶ್ ಅವರೇ ಒಂದು ಅನ್ನೋ ತರಹ ಆಗಿದೆ. ಬಿಗ್ಬಾಸ್ ಮನೆಯ ಪ್ರತಿಯೊಬ್ಬ ಸದಸ್ಯರು ಲಾಯರ್ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದು, ರಂಜಿತ್ ಅವರು ಜಗದೀಶ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿ ಬಿಗ್ಬಾಸ್ ಸ್ಪರ್ಧಿ ರಂಜಿತ್ ಯಾರು? ಅವರ ಹಿನ್ನೆಲೆಯೇನು ಎಂಬ ಮಾಹಿತಿಯನ್ನು ನೀಡಲಾಗಿದೆ.