ಚಲನಚಿತ್ರಗಳ ಒಳನೋಟ
ರಾಬರ್ಟ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್ನಲ್ಲಿ ಬರಬೇಕಿದ್ದ ಚಿತ್ರ 'ಸಿಂಧೂರ ಲಕ್ಷ್ಮಣ'. ಸ್ವಾತಂತ್ರ್ಯ ಹೋರಾಟಗಾರರಾದ ಸಿಂಧೂರ ಲಕ್ಷ್ಮಣ ಅವರ ಜೀವನನ್ನಾಧರಿಸಿ ಸಿನಿಮಾ ಮಾಡಲು ನಿರ್ಧರಿಸಿ, ತರುಣ್ ಕಥೆಗಾಗಿ ಸಾಕಷ್ಟು ರೀಸರ್ಚ್ ಕೂಡ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ಕೂಡ ಈ ಸಿನಿಮಾದಲ್ಲಿ ನಟಿಸಲು ಉತ್ಸುಕರಾಗಿದ್ರು. ಆದರೆ, ಕಾರಣಾಂತರಗಳಿಂದ ಇದು ಮುಂದುವರೆದಿರಲಿಲ್ಲ. ಆದ್ರೀಗ ಈ ಸಿನಿಮಾ ಮಾಡುವುದಾಗಿ ತರುಣ್ ಸುಧೀರ್ ಘೋಷಿಸಿದ್ದಾರೆ. ಇಲ್ಲಿ ಸಿಂಧೂರ ಲಕ್ಷ್ಮಣನ ಕುರಿತು ಸಿನಿಮಾಗೆ ಗೊತ್ತಿರದ ವಿಷಯಗಳ ಪಟ್ಟಿ ಮಾಡಲಾಗಿದೆ.