ಚಲನಚಿತ್ರಗಳ ಒಳನೋಟ
ವೀಕೆಂಡ್ ವಿತ್ ರಮೇಶ್ ಸೀಸನ್ 5ರ ಮೂರನೇ ಅತಿಥಿಯಾಗಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಆಗಮಿಸಿದ್ದರು. ಸಾವಿರಾರು ರೋಗಿಗಳ ಪಾಲಿಗೆ ಡಾ.ಸಿ.ಎನ್.ಮಂಜುನಾಥ್ ಅವರು ಸಾಕ್ಷಾತ್ ಮಂಜುನಾಥನಾಗಿದ್ದಾರೆ ಎಂದರೆ ತಪ್ಪಾಗಲ್ಲ. ಉಚಿತವಾಗಿ ಚಿಕಿತ್ಸೆ ನೀಡಿ, ಅದೆಷ್ಟೋ ಜನರ ಪ್ರಾಣವನ್ನು ಉಳಿಸಿದ್ದಾರೆ. ಇವರಿಂದ ಜೀವದಾನ ಪಡೆದವರು ಯಾರು ಸಹ ಇವರನ್ನು ಮರೆತಿಲ್ಲ. ಪ್ರತಿನಿತ್ಯವೂ ಜಯದೇವ ಆಸ್ಪತ್ರೆಯಲ್ಲಿ ಅದೆಷ್ಟೋ ಬಡ ರೋಗಿಗಳಿಗೆ ಸದ್ದಿಲ್ಲದೇ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಸಿ.ಎನ್.ಮಂಜುನಾಥ್ ಕುರಿತ ಇಂಟರೆಸ್ಟಿಂಗ್ ವಿಚಾರಗಳು ಇಲ್ಲಿವೆ.