X
ಹೋಮ್ ಚಲನಚಿತ್ರಗಳ ಒಳನೋಟ

ವೀಕೆಂಡ್ ವಿತ್ ರಮೇಶ್ ಸೀಸನ್ 5 ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ? ಇಲ್ಲಿದೆ ಪಟ್ಟಿ

Author Sowmya Bairappa | Updated: Saturday, February 4, 2023, 02:36 PM [IST]

ಸಾಧಕರ ಸಾಧನೆಯ ಹಾದಿಯ ಬಗ್ಗೆ ಪ್ರೇಕ್ಷಕರ ಮುಂದಿಟ್ಟು, ಯುವಜನತೆಗೆ ಸ್ಫೂರ್ತಿ ತುಂಬುತ್ತಿದ್ದ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್. ಎವರ್ ಗ್ರೀನ್ ಹೀರೋ ರಮೇಶ್ ಅರವಿಂದ್ ಅವರು ನಡೆಸಿಕೊಡುವ ಈ ಕಾರ್ಯಕ್ರಮ ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿರುತ್ತಾರೆ. ರಮೇಶ್ ಅರವಿಂದ್ ಅವರ ಕನ್ನಡ ಭಾಷೆಯ ಮೇಲಿನ ಹಿಡಿತ, ಅವರು ಹೋಸ್ಟ್ ಮಾಡುವ ರೀತಿ ಎಲ್ಲದಕ್ಕೂ ಒಂದು ಅಭಿಮಾನಿ ವರ್ಗವೇ ಇದೆ. ಇಷ್ಟು ಫೇಮಸ್ ಆಗಿದ್ದ ಶೋ ಕಳೆದ ಮೂರು ವರ್ಷಗಳಿಂದ ಪ್ರಸಾರವಾಗಿಲ್ಲ. ಇದು ವೀಕ್ಷಕರ ಬೇಸರಕ್ಕೆ ಕಾರಣವಾಗಿತ್ತು. ಇದೀಗ ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮತ್ತೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ಬಾರಿ ಕೂಡ ರಮೇಶ್ ಅವರೇ ಸಾಧಕರ ಪರಿಚಯವನ್ನು ಪ್ರೇಕ್ಷಕರಿಗೆ ಮಾಡಿಸಲಿದ್ದಾರೆ.ಶೀಘ್ರದಲ್ಲೇ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ವೀಕ್ಷಕರು ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮಕ್ಕೆ ಇವರನ್ನೆಲ್ಲ ಕರೆಸಬೇಕು ಎಂಬ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ. ಅವರು ಯಾರು ಎಂಬ ಮಾಹಿತಿ ಇಲ್ಲಿದೆ.


cover image
ರಿ‍ಷಭ್ ಶೆಟ್ಟಿ
1

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಮೊದಲ ಗೆಸ್ಟ್ ಆಗಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ರಿಷಬ್ ಶೆಟ್ಟಿ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ವಾಟರ್ ಬಿಸಿನೆಸ್, ನಿರ್ಮಾಪಕರ ಬಳಿ ಡ್ರೈವರ್ ಆಗಿ, ಹೋಟಲ್ ಕೆಲಸ, ಹೋಟೆಲ್ ಮಾಲೀಕ, ಸೇಲ್ಸ್‌ಮನ್ ಕೆಲಸವನ್ನೂ ಮಾಡಿದ್ದ ರಿಷಬ್ ಶೆಟ್ಟಿ ಅವರು ಇಂದು ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಅಂದು ನೀರಿನ ಕ್ಯಾನ್ ಹೊರುತ್ತಿದ್ದ ರಿಷಬ್ ಶೆಟ್ಟಿ, ಇಂದು ತಮ್ಮ ವಿಭಿನ್ನ ಚಿತ್ರಗಳು ಮತ್ತು ಭಿನ್ನ ಚಿತ್ರ ನಿರ್ಮಾಣ ಶೈಲಿಯಿಂದ ಪ್ರಸಿದ್ಧ ಪಡೆದಿದ್ದಾರೆ. ತಮ್ಮ ಪ್ರತಿಭೆಯಿಂದಲೇ ಸ್ಟಾರ್ ನಟ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಈ ನಟನ ಸಾಧನೆ ವೀಕೆಂಡ್ ವಿತ್ ರಮೇಶ್ ಸೀಸನ್ ಐದರಲ್ಲಿ ಮೊದಲು ಪ್ರಸಾರವಾಗಲಿದೆ. ಈಗಾಗಲೇ ರಿಷಬ್ ಶೆಟ್ಟಿ ಜೀವನಗಾಥೆಯ ಶೂಟಿಂಗ್ ಮುಗಿದಿದ್ದು, ಕಳೆದ ವಾರ ಪ್ರೊಮೋ ಶೂಟಿಂಗ್ ಕೂಡ ಮುಗಿದಿದೆ ಎನ್ನಲಾಗಿದೆ. 

ಧನಂಜಯ
2

ನಟ ಡಾಲಿ ಧನಂಜಯ್ ಅವರು ತುಂಬಾನೇ ಕಷ್ಟಪಟ್ಟು ಸಿನಿಮಾರಂಗದಲ್ಲಿ ಗುರುತಿಸಿಕೊಂಡವರು. ಐಟಿ ಕೆಲಸ ಬಿಟ್ಟು ಚಿತ್ರರಂಗಕ್ಕೆ ಬಂದರು. ಹಲವು ವರ್ಷಗಳ ಕಾಲ ಯಶಸ್ಸಿಗಾಗಿ ಕಾದ ಇವರು, ಹಲವು ಅವಮಾನಗಳನ್ನು ಎದುರಿಸಿದರು. 'ಜಯನಗರ 4th ಬ್ಲಾಕ್'​ ಎಂಬ ಕಿರುಚಿತ್ರದ ಮೂಲಕ ಚಿತ್ರರಂಗದಲ್ಲಿ ವಿಶಿಷ್ಟವಾಗಿ ಛಾಪು ಮೂಡಿಸಿದ ಡಾಲಿ, ಇಂದು ಬಹುಭಾಷಾ ನಟರಾಗಿ ಹೊರಹೊಮ್ಮಿದ್ದಾರೆ. ಪ್ರತಿ ಸಿನಿಮಾಗೂ ವಿಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುವ ಧನಂಜಯ್, ಬೆಳ್ಳಿತೆರೆಗೆ ಕಾಲಿಡಲು ಸಾಕಷ್ಟು ಶ್ರಮಪಟ್ಟಿದ್ದಾರೆ. ಇವರು ವೀಕೆಂಡ್ ವಿತ್ ರಮೇಶ್ ಸೀಸನ್ ೫ರ ಎರಡನೇ ಗೆಸ್ಟ್ ಆಗಿ ಬರಲಿದ್ದಾರೆ ಎನ್ನಲಾಗಿದೆ. ಇವರ ಸಾಧನೆಯ ಶೂಟಿಂಗ್ ಕೂಡ ಈಗಾಗಲೇ ಮುಕ್ತಾಯವಾಗಿದೆ ಎನ್ನಲಾಗಿದೆ. 

ರಮ್ಯಾ
3

ಸ್ಯಾಂಡಲ್‌ವುಡ್‌ ಕ್ವೀನ್ ಎಂದೇ ಖ್ಯಾತರಾಗಿರುವ ರಮ್ಯಾ ನಟನೆ ಮಾತ್ರವಲ್ಲದೆ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದಾರೆ. ೨೦೨೩ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಅವರು, ನಂತರ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲೂ ಮಿಂಚಿದರು. ಕನ್ನಡ ಚಿತ್ರರಂಗದಲ್ಲಿ ನಂಬರ್ ಒನ್ ಪಟ್ಟದಲ್ಲಿದ್ದ ರಮ್ಯಾ, ಸುದೀಪ್, ದರ್ಶನ್, ಪುನೀತ್ ರಾಜ್‍ಕುಮಾರ್ ಹಾಗೂ ಯಶ್ ಸೇರಿದಂತೆ ಬಹುತೇಕ ಸ್ಟಾರ್ ನಟರ ಜೊತೆಗೆ ಅಭಿನಯಿಸಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ, ಆರೇಳು ವರ್ಷದಿಂದ ಚಿತ್ರರಂಗದಿಂದ ದೂರ ಉಳಿದಿದ್ದರು. ಆದರೆ, ೨೦೨೨ರಲ್ಲಿ ವರ್ಷ ಮತ್ತೆ ಸ್ಯಾಂಡಲ್‌ವುಡ್‌ ಗೆ ಮರಳಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತಾರಖಂಡ ಸಿನಿಮಾ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ನಟಿ ರಮ್ಯಾ ವೀಕೆಂಡ್ ವಿತ್ ರಮೇಶ್ ಸೀಸನ್ ೪ರಲ್ಲಿ ಬರಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ಬಂದಿರಲಿಲ್ಲ. ಇದೀಗ ಸೀಸನ್ ೫ರಲ್ಲಿ ಬರಲಿದ್ದಾರೆ ಎನ್ನಲಾಗುತ್ತಿದೆ. 

ರಾಹುಲ್ ದ್ರಾವಿಡ್
4

ದಕ್ಷಿಣದಲ್ಲಿ ಕರ್ನಾಟಕದ ದಿಗ್ಗಜ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆತರಬೇಕು ಎಂಬುದು ಪ್ರೇಕ್ಷಕರ ಹೆಬ್ಬಯಕೆ.  'ದಿ ವಾಲ್' ಎಂದು ಖ್ಯಾತಿ ಪಡೆದಿರುವ ರಾಹುಲ್ ದ್ರಾವಿಡ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್. ಕನ್ನಡದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದವರು ರಾಹುಲ್ ದ್ರಾವಿಡ್. ಇವರ  ಬಯೋಪಿಕ್ ಸಿನಿಮಾ ಮಾಡಬೇಕು ಎಂಬ ಚರ್ಚೆ ಆಗಾಗ ಕೇಳಿ ಬರುತ್ತಲೇ ಇದೆ. ಕನ್ನಡ ಇಂಡಸ್ಟ್ರಿಯಲ್ಲಿ ಮಾತ್ರವಲ್ಲ ತಮಿಳು, ತೆಲುಗು ಇಂಡಸ್ಟ್ರಿಯಲ್ಲೂ ದ್ರಾವಿಡ್ ಬಯೋಪಿಕ್ ಬಗ್ಗೆ ಆಸಕ್ತಿ ವ್ಯಕ್ತವಾಗಿದೆ. ಇದರ ಜೊತೆಗೆ  ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅವರನ್ನು ಕರೆಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. 

ಜಾವಗಲ್ ಶ್ರೀನಾಥ್
5

ಭಾರತ ಕಂಡ ಅತ್ಯಂತ ಪ್ರತಿಭಾನ್ವಿತ ವೇಗಿಗಗಳಲ್ಲಿ ಕರ್ನಾಟಕದ ಜಾವಗಲ್ ಶ್ರೀನಾಥ್ ಅಗ್ರಗಣ್ಯರು. ಸ್ಪಿನ್ ಬೌಲರ್ ಗಳನ್ನೇ ನೆಚ್ಚಿಕೊಂಡಿದ್ದ ಭಾರತ ತಂಡಕ್ಕೆ ವೇಗದ ಬೌಲಿಂಗ್ ಮೂಲಕ ಶಕ್ತಿ ತುಂಬಿದವರು ಈ ಕನ್ನಡಿಗ. ನಿರಂತರವಾಗಿ 140 ಕಿ.ಮೀ ಗೂ ವೇಗದಲ್ಲಿ ಸತತವಾಗಿ ಚೆಂಡನ್ನು ಎಸೆಯುವ ಸಾಮರ್ಥ್ಯವನ್ನು ಹೊಂದಿದ್ದರು. ಇವರನ್ನು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆಸಬೇಕು ಎಂಬುದು ಹಲವರ ಬಯಕೆ. 

ಸಾಲುಮರದ ತಿಮ್ಮಕ್ಕ
6

ಕರ್ನಾಟಕದ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರು ಹುಲಿಕಲ್ ಮತ್ತು ಕುದೂರಿನ ನಡುವಿನ ನಲವತ್ತೈದು ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಪೋಷಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಈವರೆಗೂ  ಸುಮಾರು 8,000ಕ್ಕೂ ಹೆಚ್ಚು ಇತರೆ ಮರಗಳನ್ನು ನೆಟ್ಟಿದ್ದಾರೆ. ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯದ ಇವರು, ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಪರಿಸರ ಸಂರಕ್ಷರಣೆಯಲ್ಲಿ ಮಹತ್ತರ ಕಾರ್ಯ ಮಾಡಿರುವ ಸಾಲುಮರದ ತಿಮ್ಮಕ್ಕ ಅವರ ಕೆಲಸವನ್ನು ಗುರುತಿಸಿ ಭಾರತ ಸರ್ಕಾರ ರಾಷ್ಟ್ರೀಯ ನಾಗರಿಕ ಪ್ರಶಸ್ತಿ ನೀಡಿದೆ. ಜೊತೆಗೆ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಜೊತೆಗೆ  2019ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರನ್ನು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆಸಬೇಕು ಎಂಬುದು ವೀಕ್ಷಕರ ಬೇಡಿಕೆ. 

ರಚಿತಾ ರಾಮ್
7

ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರಮುಖ ನಾಯಕ ನಟಿ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ, 2013ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ರಚಿತಾ ರಾಮ್ ಸಿನಿಮಾಗಳ  ರಿಯಾಲಿಟಿ ಶೋಗಳ ಜಡ್ಜ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಅವರನ್ನು  ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆಸಬೇಕು ಎಂಬುದು ಅವರ ಅಭಿಮಾನಿಗಳ ಒತ್ತಾಯ. 

ಬಿ.ಎಸ್.ಯಡಿಯೂರಪ್ಪ
8

ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡ. ಇವರು ಕರ್ನಾಟಕ ವಿಧಾನಸಭೆಯಲ್ಲಿ ಶಿಕಾರಿಪುರ ವಿಧಾನ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. 2008ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಎಸ್.ಬಂಗಾರಪ್ಪನವರನ್ನು ಸುಮಾರು 46 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ, ವಿಧಾನಸಭೆಯನ್ನು ಪ್ರವೇಶಿಸುವುದರ ಜೊತೆಗೆ ಬಿಜೆಪಿಗೆ ರಾಜ್ಯಾದ್ಯಂತ ಜಯ ತಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರನ್ನು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಕರೆಸಬೇಕು ಎಂಬ ಅವರ ಅಭಿಮಾನಿಗಳ ಒತ್ತಾಸೆ. 

 

ಲಿಸ್ಟ್ ನಲ್ಲಿರುವ ಹಲವರು
9

ಇವರ ಜೊತೆಗೆ ನಾದಬ್ರಹ್ಮ ಹಂಸಲೇಖ, ಖ್ಯಾತ ವೈದ್ಯ ಡಾ.ದೇವಿ ಶೆಟ್ಟಿ, ರಂಗಕರ್ಮಿ, ಹಿರಿಯ ನಟಿ ಅರುಂಧತಿ ಶಂಕರ್ ನಾಗ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಸಾಹಿತಿ ದೇವನೂರು ಮಹಾದೇವ, ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ, ಹರೇಕಳ ಹಾಜಬ್ಬ, ತುಳಸಿ ಗೌಡ ಸೇರಿದಂತೆ ಅನೇಕ ಸಾಧಕರನ್ನು ಕರೆಸುವಂತೆ ವೀಕ್ಷಕರು ಮನವಿ ಮಾಡಿದ್ದಾರೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+