Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ವಾಹಿನಿಯಲ್ಲಿ ಓಲ್ಡ್ ಈಸ್ ಗೋಲ್ಡ್
ಗಾಯಕಿಯರಾದ ಪಿ ಸುಶೀಲ, ಎಲ್ ಆರ್ ಈಶ್ವರಿ, ಮಂಜುಳಾ ಗುರುರಾಜ್ ಮತ್ತು ರತ್ನಮಾಲಾ ಪ್ರಕಾಶ್ ಅವರನ್ನು ಒಂದೇ ವೇದಿಕೆಗೆ ಕರೆತರುತ್ತಿದೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರಗಳಿಗೆ ತಮ್ಮ ಸುಮಧುರ ಕಂಠದಿಂದ ರಂಗು ತುಂಬಿದ ಗಾಯಕಿಯರ ಹಾಡುಗಳನ್ನು ಮತ್ತೊಮ್ಮೆ ಕೇಳುವ ಅವಕಾಶ ಒದಗಿಬಂದಿದೆ.
ಪಿ ಸುಶೀಲ ಹಾಡಿದ ಬಾಳ ಬಂಗಾರ ನೀನು(ಬಂಗಾರದ ಮನುಷ್ಯ), ಕರ್ಪೂರದ ಗೊಂಬೆ ನಾನು (ನಾಗರಹಾವು), ಎಲ್ಲೇ ಇರು ಹೇಗೇ ಇರು (ಕಸ್ತೂರಿ ನಿವಾಸ). ಎಲ್ ಆರ್ ಈಶ್ವರಿ ಕಂಠದಿಂದ ಹೊರಹೊಮ್ಮಿದ ಜೋಕೆ ನಾನು ಬಳ್ಳಿಯ ಮಿಂಚು (ಸಂಶಯ ಫಲ), ರಸಿಕಾ ರಸಿಕಾ (ಭಲೆ ಭಾಸ್ಕರ). ರತ್ನಮಾಲಾ ಪ್ರಕಾಶ್ ಹಾಡಿದ ಗೆದಿಯ ಬೇಕು ಮಗಳ (ನಾಗಮಂಡಲ), ಸಂತಸ ಅರಳುವ ಸಮಯ (ಏಳು ಸುತ್ತಿನ ಕೋಟೆ). ಮಂಜುಳಾ ಗುರುರಾಜ್ ಹಾಡಿದ ಒಳಗೆ ಸೇರಿದರೆ ಗುಂಡು (ನಂಜುಂಡಿ ಕಲ್ಯಾಣ), ಪ್ರೀತಿಯಲ್ಲಿ ಇರೋ ಸುಖ (ಅಂಜದ ಗಂಡು) ಹಾಡುಗಳು ಮತ್ತೆ ಜೀವ ಪಡೆಯಲಿವೆ.
ಓಲ್ಡ್ ಈಸ್ ಗೋಲ್ಡ್ ಕಾರ್ಯಕ್ರಮ ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಳೆದ ವಾರ ನಡೆದಿತ್ತು. ನಟಿ ವಿನಯಾ ಪ್ರಸಾದ್ ನಿರೂಪಿಸಿದ ಈ ಕಾರ್ಯಕ್ರಮ ಏಪ್ರಿಲ್ 3 ಮತ್ತು 4 ರಂದು ಸುವರ್ಣ ವಾಹಿನಿಯಲ್ಲಿ ರಾತ್ರಿ 8ಕ್ಕೆ ಪ್ರಸಾರವಾಗಲಿದೆ. ಸಮಾರಂಭದಲ್ಲಿ ಹಿರಿ ಕಿರಿಯ ಕಲಾವಿದರು ಭಾಗವಹಿಸಿದ್ದರು.