Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ವಾಹಿನಿಯಲ್ಲಿ ಓಲ್ಡ್ ಈಸ್ ಗೋಲ್ಡ್
ಗಾಯಕಿಯರಾದ ಪಿ ಸುಶೀಲ, ಎಲ್ ಆರ್ ಈಶ್ವರಿ, ಮಂಜುಳಾ ಗುರುರಾಜ್ ಮತ್ತು ರತ್ನಮಾಲಾ ಪ್ರಕಾಶ್ ಅವರನ್ನು ಒಂದೇ ವೇದಿಕೆಗೆ ಕರೆತರುತ್ತಿದೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರಗಳಿಗೆ ತಮ್ಮ ಸುಮಧುರ ಕಂಠದಿಂದ ರಂಗು ತುಂಬಿದ ಗಾಯಕಿಯರ ಹಾಡುಗಳನ್ನು ಮತ್ತೊಮ್ಮೆ ಕೇಳುವ ಅವಕಾಶ ಒದಗಿಬಂದಿದೆ.
ಪಿ ಸುಶೀಲ ಹಾಡಿದ ಬಾಳ ಬಂಗಾರ ನೀನು(ಬಂಗಾರದ ಮನುಷ್ಯ), ಕರ್ಪೂರದ ಗೊಂಬೆ ನಾನು (ನಾಗರಹಾವು), ಎಲ್ಲೇ ಇರು ಹೇಗೇ ಇರು (ಕಸ್ತೂರಿ ನಿವಾಸ). ಎಲ್ ಆರ್ ಈಶ್ವರಿ ಕಂಠದಿಂದ ಹೊರಹೊಮ್ಮಿದ ಜೋಕೆ ನಾನು ಬಳ್ಳಿಯ ಮಿಂಚು (ಸಂಶಯ ಫಲ), ರಸಿಕಾ ರಸಿಕಾ (ಭಲೆ ಭಾಸ್ಕರ). ರತ್ನಮಾಲಾ ಪ್ರಕಾಶ್ ಹಾಡಿದ ಗೆದಿಯ ಬೇಕು ಮಗಳ (ನಾಗಮಂಡಲ), ಸಂತಸ ಅರಳುವ ಸಮಯ (ಏಳು ಸುತ್ತಿನ ಕೋಟೆ). ಮಂಜುಳಾ ಗುರುರಾಜ್ ಹಾಡಿದ ಒಳಗೆ ಸೇರಿದರೆ ಗುಂಡು (ನಂಜುಂಡಿ ಕಲ್ಯಾಣ), ಪ್ರೀತಿಯಲ್ಲಿ ಇರೋ ಸುಖ (ಅಂಜದ ಗಂಡು) ಹಾಡುಗಳು ಮತ್ತೆ ಜೀವ ಪಡೆಯಲಿವೆ.
ಓಲ್ಡ್ ಈಸ್ ಗೋಲ್ಡ್ ಕಾರ್ಯಕ್ರಮ ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಳೆದ ವಾರ ನಡೆದಿತ್ತು. ನಟಿ ವಿನಯಾ ಪ್ರಸಾದ್ ನಿರೂಪಿಸಿದ ಈ ಕಾರ್ಯಕ್ರಮ ಏಪ್ರಿಲ್ 3 ಮತ್ತು 4 ರಂದು ಸುವರ್ಣ ವಾಹಿನಿಯಲ್ಲಿ ರಾತ್ರಿ 8ಕ್ಕೆ ಪ್ರಸಾರವಾಗಲಿದೆ. ಸಮಾರಂಭದಲ್ಲಿ ಹಿರಿ ಕಿರಿಯ ಕಲಾವಿದರು ಭಾಗವಹಿಸಿದ್ದರು.