Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕುಣಿಯೋಣು ಬಾರಾ ವಿಜೇತೆಯಾಗಿ ರಶ್ಮಿ
ಕರ್ನಾಟಕದಿಂದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಾವಿರಾರು ಪ್ರತಿಭೆಗಳಲ್ಲಿ ಕೆಲವರನ್ನು ಮಾತ್ರ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಅವರಲ್ಲಿ ಅಂತಿಮ ಸ್ಪರ್ಧಿಗಳಾಗಿ ರಶ್ಮಿ ಕುಂದರ್, ರಶ್ಮಿ ಮಂಗಳೂರು, ಮೈಸೂರಿನ ನಿರೋಷಾ ಮತ್ತು ಚಿತ್ರದುರ್ಗದ ಪ್ರತೀಕ್ ಸ್ಪರ್ಧಿಸಿದ್ದರು. ಮೂರು ತಾಸುಗಳವರೆಗೆ ನಡೆದ ಅಂತಿಮ ಸ್ಪರ್ಧೆಯಲ್ಲಿ ಪ್ರತಿಯೊಬ್ಬ ಸ್ಫರ್ಧಿಯೂ ಕೂಡ ಉತ್ತಮಪ್ರದರ್ಶನ ನೀಡಿದರು. ಫೈನಲ್ ಸ್ಪರ್ಧೆಯಲ್ಲಿದ್ದ ರಶ್ಮಿ ಕುಂದೂರ್ ಮೊದಲ ಸುತ್ತಿನಲ್ಲೇ ವೈಯುಕ್ತಿಕ ಕಾರಣಗಳಿಂದ ಹೊರನಡೆದರು.
ಅತಿಥಿ ತೀರ್ಪುಗಾರರ ಸ್ಥಾನದಲ್ಲಿದ್ದ ವಿಷ್ಣುವರ್ಧನ್ ಈ ಪುಟಾಣಿಗಳ ಪ್ರತಿಭೆಗೆ ಯಾವುದೂ ಸಾಟಿ ಇಲ್ಲ. ನನಗೆ ಈ ತಿರ್ಪುಗಾರನ ಸ್ಥಾನದಲ್ಲಿ ಕೂರಲು ಭಯ. ಒಬ್ಬರಿಗಿಂತ ಒಬ್ಬರು ಚೆನ್ನಾಗಿ ನರ್ತಿಸುವ ಈ ಪುಟಾಣಿಗಳಲ್ಲಿ ಯಾರನ್ನು ವಿಜೇತರನ್ನಾಗಿ ಆಯ್ಕೆ ಮಾಡುವುದು ಎಂಬ ತೀರ್ಮಾನ ಕಷ್ಟಕರ ಎಂದು ಹೇಳಿದರು.
ಅಂತಿಮ ಸ್ಪರ್ಧೆಯಲ್ಲಿ ಕೇವಲ ಪುಟಾಣಿಗಳು ಮಾತ್ರವಲ್ಲದೇ ದೇಶದ ಪ್ರಸಿದ್ಧ ನೃತ್ಯ ತಂಡ ಕೇರಳದ ಶಿವಾಸ್ ಡಾನ್ಸ್ ಟ್ರೂಪ್ ಮತ್ತು ಮಂಗಳೂರಿನ ಎಕ್ಸ್ ಜೋನ್ ನೃತ್ಯ ತಂಡದಿಂದ ವಿಶೇಷ ನೃತ್ಯ ಪ್ರದರ್ಶನವಿತ್ತು.
ಕಳೆದ ಸಂಚಿಕೆಗಳಲ್ಲಿರುವಂತೆ ಸಿಂದು ಮೆನನ್ ಹಾಗೂ ಮಾಲೂರು ಶ್ರೀನಿವಾಸ್ ತೀರ್ಪುಗಾರರಾಗಿದ್ದರು. ಪುಟಾಣಿಗಳಾದ ಜ್ಯೇಷ್ಠ ನರಸಿಂಹ ಮತ್ತು ಶ್ರೇಯಾ ಕಾರ್ಯಕ್ರಮ ನಿರೂಪಕರಾಗಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಜೀ ಕನ್ನಡ ನೃತ್ಯ ರಸಸಂಜೆ ಸವಿಯೋಣ ಬಾರಾ!