Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ರಿಯಾಲಿಟಿ ಶೋ ವಿರುದ್ಧ ಶಿವಸೇನೆ ಗರಂ
ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್'ಮೇಲೆ ಶಿವಸೇನೆಯ ವಕ್ರದೃಷ್ಟಿ ಬಿದ್ದಿದೆ. ಈ ಕಾರ್ಯಕ್ರಮದಲ್ಲಿ ಇಬ್ಬರು ಪಾಕಿಸ್ತಾನಿಯರಾದ ವೀಣಾ ಮಲಿಕ್(ನಟಿ) ಮತ್ತು ಬೇಗಂ ನವಾಜಿಶ್ ಅಲಿ(ವಸ್ತ್ರ ವಿನ್ಯಾಸಕಿ) ಭಾಗವಹಿಸಿರುವುದು ಶಿವಸೇನೆಯನ್ನು ಕೆರಳಿಸಿದೆ. 'ಬಿಗ್ ಬಾಸ್' ವಿರುದ್ಧ ಶಿವಸೇನೆ ಗರಂ ಆಗಿದೆ.
ಜೈ ಭವಾನಿ, ಜೈ ಶಿವಾಜಿ ಎಂದು ಘೋಷಣೆ ಕೂಗುತ್ತಾ ಶಿವಸೈನಿಕರು ಧ್ವಜಗಳನ್ನು ಹಿಡಿದು 'ಬಿಗ್ ಬಾಸ್' ಸ್ಟುಡಿಯೋ ಒಳಕ್ಕೆ ನುಸುಳಲು ಬುಧವಾರ (ಅ.6) ಯತ್ನಿಸಿದರು. ಕೂಡಲೆ ಪೊಲೀಸರು ಅವರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ 24 ಮಂದಿ ಶಿವ ಸೈನಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಸ್ಥಳೀಯರ ಪ್ರಕಾರ ಬಂಧಿತರಸಂಖ್ಯೆ ಸುಮಾರು ಐವತ್ತರಷ್ಟಿರಬಹುದು.
ಶಿವಸೇನೆಯ ಮುಖಂಡ ಮಚಿಂದ್ರ ಖಾರಡೆ ನೇತೃತ್ವ ವಹಿಸಿದ್ದ ತಂಡ 'ಬಿಗ್ ಬಾಸ್' ಕಾರ್ಯಕ್ರಮ ನಡೆಯುತ್ತಿರುವ ಕಾಂಪೌಂಡನ್ನು ಹತ್ತಿ ಒಳನುಗ್ಗಲು ಯತ್ನಿಸಿತು. ಆದರೆ ಪೊಲೀಸರು ಅವರನ್ನು ಬಂಧಿಸಿ ನಿಯಂತ್ರಿಸಿದರು ಎನ್ನಲಾಗಿದೆ. ಈ ಅಡೆತಡೆಗಳ ನಡುವೆಯೂ 'ಬಿಗ್ ಬಾಸ್' ಚಿತ್ರೀಕರಣ ಸುಸೂತ್ರವಾಗಿ ನಡೆಯುತ್ತಿದೆ . ಮುಂಬೈನ ಲೋನಾವಾಲಾ ಪ್ರದೇಶದಲ್ಲಿರುವ ಸ್ಟುಡಿಯೋಗೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.