Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ರಿಯಾಲಿಟಿ ಶೋ ವಿರುದ್ಧ ಶಿವಸೇನೆ ಗರಂ
ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್'ಮೇಲೆ ಶಿವಸೇನೆಯ ವಕ್ರದೃಷ್ಟಿ ಬಿದ್ದಿದೆ. ಈ ಕಾರ್ಯಕ್ರಮದಲ್ಲಿ ಇಬ್ಬರು ಪಾಕಿಸ್ತಾನಿಯರಾದ ವೀಣಾ ಮಲಿಕ್(ನಟಿ) ಮತ್ತು ಬೇಗಂ ನವಾಜಿಶ್ ಅಲಿ(ವಸ್ತ್ರ ವಿನ್ಯಾಸಕಿ) ಭಾಗವಹಿಸಿರುವುದು ಶಿವಸೇನೆಯನ್ನು ಕೆರಳಿಸಿದೆ. 'ಬಿಗ್ ಬಾಸ್' ವಿರುದ್ಧ ಶಿವಸೇನೆ ಗರಂ ಆಗಿದೆ.
ಜೈ ಭವಾನಿ, ಜೈ ಶಿವಾಜಿ ಎಂದು ಘೋಷಣೆ ಕೂಗುತ್ತಾ ಶಿವಸೈನಿಕರು ಧ್ವಜಗಳನ್ನು ಹಿಡಿದು 'ಬಿಗ್ ಬಾಸ್' ಸ್ಟುಡಿಯೋ ಒಳಕ್ಕೆ ನುಸುಳಲು ಬುಧವಾರ (ಅ.6) ಯತ್ನಿಸಿದರು. ಕೂಡಲೆ ಪೊಲೀಸರು ಅವರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ 24 ಮಂದಿ ಶಿವ ಸೈನಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಸ್ಥಳೀಯರ ಪ್ರಕಾರ ಬಂಧಿತರಸಂಖ್ಯೆ ಸುಮಾರು ಐವತ್ತರಷ್ಟಿರಬಹುದು.
ಶಿವಸೇನೆಯ ಮುಖಂಡ ಮಚಿಂದ್ರ ಖಾರಡೆ ನೇತೃತ್ವ ವಹಿಸಿದ್ದ ತಂಡ 'ಬಿಗ್ ಬಾಸ್' ಕಾರ್ಯಕ್ರಮ ನಡೆಯುತ್ತಿರುವ ಕಾಂಪೌಂಡನ್ನು ಹತ್ತಿ ಒಳನುಗ್ಗಲು ಯತ್ನಿಸಿತು. ಆದರೆ ಪೊಲೀಸರು ಅವರನ್ನು ಬಂಧಿಸಿ ನಿಯಂತ್ರಿಸಿದರು ಎನ್ನಲಾಗಿದೆ. ಈ ಅಡೆತಡೆಗಳ ನಡುವೆಯೂ 'ಬಿಗ್ ಬಾಸ್' ಚಿತ್ರೀಕರಣ ಸುಸೂತ್ರವಾಗಿ ನಡೆಯುತ್ತಿದೆ . ಮುಂಬೈನ ಲೋನಾವಾಲಾ ಪ್ರದೇಶದಲ್ಲಿರುವ ಸ್ಟುಡಿಯೋಗೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.