Don't Miss!
- Sports ಕಮಿನ್ಸ್ ಟೆನ್ಷನ್ ಹೆಚ್ಚಿಸಿದ ಸ್ಟಾರ್ ಪ್ಲೇಯರ್ ನಿರ್ಧಾರ: ಎಸ್ಆರ್ಎಚ್ ತಂಡಕ್ಕೆ ಆರಂಭದಲ್ಲೇ ಪೆಟ್ಟು
- Lifestyle ಪಳ ಪಳ ಹೊಳೆಯುವ ಕೆಂಪು ನಾಗರ ನೋಡಿದ್ದೀರಾ..? ವೈರಲ್ ಆಗ್ತಿದೆ ವಿಡಿಯೋ..!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯುತ್ತಮ ಟಿವಿ ಚಾನಲ್ ಕನಸು ನಮ್ಮದು- ಲಹರಿ ನಾಯ್ಡು
ಇಡೀ ನಾಡಿನ ಜನತೆಗೆ ನಾವು ಈ ಚಾನಲ್ ಅನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ. ರಂಗನಾಥ್ ಸಾಹೇಬರ ಕಾರ್ಯ ವೈಖರಿ ನಮಗೆ ಮೊದಲಿಂದಲೂ ಹಿಡಿಸಿತ್ತು. ಆದರೆ ಎಲ್ಲವನ್ನೂ ನಮ್ಮ ಸಹೋದರ ಮನೋಹರ್ ನಾಯ್ದು (ಲಹರಿ ಸಂಸ್ಥೆಯ ಸಂಸ್ಥಾಪಕ) ಅವರೇ ನೋಡಿ ಕೊಳ್ಳುತ್ತಿದ್ದಾರೆ. ಖಂಡಿತ ಅವರೇ ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ದಟ್ಸ್ ಕನ್ನಡ ಪ್ರತಿನಿಧಿಗೆ ಲಹರಿ ವೇಲು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಣ್ಣ ಮನೋಹರ್ ನಾಯ್ದು ಅವರಿಗೆ ಒಂದು ದೊಡ್ಡ ಮಟ್ಟದ ಖಾಸಾಗಿ ವಾಹಿನಿ ಮಾಡಬೇಕೆಂಬ ಕನಸಿತ್ತು. ಆದರೆ ಅದಕ್ಕೆ ಸರಿಯಾದ ವೇದಿಕೆ ಸಿಕ್ಕಿರಲಿಲ್ಲ. ಈಗ ಅದು ಒದಗಿ ಬಂದಿದೆ. ಖಂಡಿತ ಕನ್ನಡ ಜನತೆಗೆ ನಮ್ಮ ಕಡೆಯಿಂದ ಉತ್ತಂ ಮತ್ತು ಗುಣಮಟ್ಟದ ವಾಹಿನಿಯನ್ನು ಕೊಡುಗೆಯಾಗಿ ನೀಡುವುದು ಖಚಿತ ಎಂದು ವೇಲು ಅವರು ಮನೋಹರ್ ನಾಯ್ದು ಅವರ ಪರವಾಗಿ ಹೇಳಿಕೆ ನೀಡಿದ್ದಾರೆ.
ಇವೆಲ್ಲದ ಜೊತೆಗೆ ಚಾನಲ್ ಸಂಬಂಧಿಸಿದ ಎಲ್ಲಾ ಜವಾಬ್ದಾರಿಯನ್ನು ಹಿರಿಯರಾದ ರಂಗನಾಥ್ ಅವರಿಗೆ ವಹಿಸಿದ್ದೇವೆ. ನಾವೇನಿದ್ದರೂ ಅವರ ಆದೇಶದಂತೆ ಕಾರ್ಯ ನಿರ್ವಹಿಸುತ್ತೇವೆ ಎಂದು ವೇಲು ನಮ್ಮ ಪ್ರತಿನಿಧಿಗೆ ತಿಳಿಸಿದ್ದಾರೆ.