Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧಾರಾವಾಹಿ ರೂಪದಲ್ಲಿ ಕನ್ನಡ ಚಲನಚಿತ್ರಗಳು
ಬೆಂಗಳೂರು ದೂರದರ್ಶನ ಕೇಂದ್ರ 'ಚಂದನ ವಾಹಿನಿ' ತನ್ನ ವಿಭಿನ್ನ ಕಾರ್ಯಕ್ರಮ ಮೂಲಕ ಈಗಾಗಲೆ ಪ್ರೇಕ್ಷಕರ ಮನಗೆದ್ದಿದೆ. ಹೊಸ ಹೊಸ ಪ್ರಯೋಗಗಳಿಗೆ ಸದಾ ಮುಂದಿರುವ ಚಂದನ ವಾಹಿನಿ ಈಗ ಮತ್ತೊಂದು ವಿಭಿನ್ನ ಕಾರ್ಯಕ್ರವನ್ನು ಪ್ರಸಾರ ಮಾಡಲು ಮುಂದಾಗಿದೆ.
ಹಳೆಯ ಸದಭಿರುಚಿಯ ಕನ್ನಡ ಚಿತ್ರಗಳನ್ನು ಧಾರಾವಾಹಿಯಾಗಿ ಪ್ರಸಾರ ಮಾಡಲು ಚಂದನ ವಾಹಿನಿ ಮುಂದಡಿಯಿಟ್ಟಿದೆ. ಹಳೆಯ ಹಿಟ್ ಚಿತ್ರವೊಂದನ್ನು ಐದು ಕಂತುಗಳಲ್ಲಿ ಪ್ರಸಾರ ಮಾಡಲಿದೆ. ಸೋಮವಾರದಿಂದ ಶುಕ್ರವಾರದತನಕ ಪ್ರತಿದಿನ ಸಂಜೆ 5.30ಕ್ಕೆ ಈ ಕಾರ್ಯಕ್ರಮ ನಿಮ್ಮ ನೆಚ್ಚಿನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಚಿತ್ರದ ಬಗೆಗಿನ ಮಹತ್ವದ ಮಾಹಿತಿಯ ಜೊತೆಜೊತೆಗೆ ಚಲನಚಿತ್ರವನ್ನು ನೋಡುವ ಸೌಭಾಗ್ಯ ಪ್ರೇಕ್ಷಕರಾಗಲಿದೆ. ಹಾಗೆಯೇ ಚಿತ್ರದ ಬಗ್ಗೆ ಇದುವರೆಗೂ ಗೊತ್ತಿರದ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ನೀಡುತ್ತಿರುವುದು ವಿಶೇಷ. ಈಗಾಗಲೆ ಪುಟ್ಟಣ್ಣ ಕಣಗಾಲ್ ಅವರ 'ಧರ್ಮಸೆರೆ'(1979) ಚಿತ್ರವನ್ನು ಪ್ರಸಾರ ಮಾಡಲಾಗಿದೆ.
ಈ ವಾರ(ಸೆ.13 ರಿಂದ ಸೆ.17) 1972ರಲ್ಲಿ ತೆರೆಕಂಡ 'ಸಿಪಾಯಿ ರಾಮು' ಚಿತ್ರ ಪ್ರಸಾರವಾಗಲಿದೆ. ವರನಟ ಡಾ.ರಾಜ್ ಕುಮಾರ್, ಲೀಲಾವತಿ, ತೂಗುದೀಪ ಶ್ರೀನಿವಾಸ್, ಅಶ್ವತ್ಥ್, ವಜ್ರಮುನಿ ಮುಖ್ಯಭೂಮಿಕೆಯಲ್ಲಿದ್ದ ಚಿತ್ರ. ವೈ ಆರ್ ಸ್ವಾಮಿ ಅವರ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಸುಮಧುರ ಗೀತೆಗಳಿಗೆ, ಮೈನವಿರೇಳಿಸುವ ಸಾಹಸ ಸಂಯೋಜನೆಯಿಂದ ಚಿತ್ರ ರಸಿಕರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದ ಚಿತ್ರ.
ಹಳೆಯ ಕನ್ನಡ ಚಲನಚಿತ್ರಗಳಾದ'ಎರಡು ಕನಸು', 'ಭುಜಂಗಯ್ಯನ ದಶಾವತಾರ' ಮತ್ತು 'ಹಂಸಗೀತೆ' ಚಿತ್ರಗಳು ಧಾರಾವಾಹಿ ರೂಪದಲ್ಲಿ ಪ್ರಸಾರವಾಗಲಿವೆ. ಈ ಕಾರ್ಯಕ್ರಮವನ್ನು ಮಂಗಳ ನಾಗರಾಜ್ ಅವರು ನಿರೂಪಿಸಲಿದ್ದಾರೆ. ಕಾರ್ಯಕ್ರಮಕ್ಕೆ ಚಿತ್ರಸಾಹಿತ್ಯ ಒದಗಿಸುತ್ತಿರುವವರು ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು.