Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂಗೂ ಶೋಭಾಗೂ ಎಂತಹ ಸಂಬಂಧವಿದೆ ?
ಗುರುವಾರ 13 ನವೆಂಬರ್ ಸಂಜೆ 6.30 ರಿಂದ 7.30ರ ವರೆಗೆ ಝೀ ಟಿವಿಯಲ್ಲಿ 'ಬದುಕು ಜಟಕಾ ಬಂಡಿ' ಎಂಬ ನಿಜ ಜೀವನ್ನವನ್ನಾಧರಿಸಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ನಟಿ, ನಿರೂಪಕಿ ಮಾಳವಿಕಾ ಅವರು ಮೇಲಿನ ಪ್ರಶ್ನೆಯನ್ನು ಮಂತ್ರಿ ಪದವಿ ಕಳೆದುಕೊಂಡಿರುವ ಯಡಿಯೂರಪ್ಪ ಸಂಪುಟ ಏಕೈಕ ಮಹಿಳೆ ಶೋಭಾ ಕರಂದ್ಲಾಜೆ ಅವರನ್ನು ಕೇಳಿದ್ದು. ಮಾಳವಿಕಾ ಕೂಡಾ ಒಬ್ಬ ಮಹಿಳೆ. ಲಕ್ಷಾಂತರ ಜನ ಕಾರ್ಯಕ್ರಮ ವೀಕ್ಷಿಸುತ್ತಿರುತ್ತಾರೆ ಎಂಬುದು ಅವರಿಗೂ ಗೊತ್ತು. ಚಲನಚಿತ್ರ, ಧಾರವಾಹಿಗಳಲ್ಲಿ ನಟಿಸಿರುವ ಮಾಳವಿಕಾ ಅವರನ್ನು ಎಲ್ಲರೂ ಗುರುತಿಸುತ್ತಾರೆ. ಆದರೆ, ಅವರಿಗ್ಯಾಕೆ ಇಂತಹ ಪ್ರಶ್ನೆಯನ್ನ ಕೇಳಬೇಕು ಅನಿಸಿತು ಎನ್ನುವುದು ಒಂದು ಪ್ರಶ್ನೆ.
"ನಾನು ಅನೇಕ ಬಾರಿ ಮಾಧ್ಯಮಗಳ ಮೂಲಕ ಹೇಳಿರುವೆ. ತಂದೆಯಷ್ಟು ವಯಸ್ಸಾಗಿರುವ ಯಡಿಯೂರಪ್ಪ ಅವರೊಂದಿಗೆ ಸಂಬಂಧ ಕಲ್ಪಿಸುವುದು ಎಷ್ಟರ ಮಟ್ಟಿಗೆ ಸರಿ. ಒಬ್ಬ ಮಹಿಳೆ ಬೆಳೆಯುತ್ತಿದ್ದಾಳೆ ಎಂದರೆ ಅದು ಗಂಡಸರಿಗೆ ಕಣ್ಣು ಕುಕ್ಕುವ ಸಂಗತಿ. ಭಾರತೀಯ ಸಂಸ್ಕೃತಿಯೇ ಹಾಗೆ. ಇಂತಹ ಆರೋಪಕ್ಕೆ ದೊಡ್ಡ ಇತಿಹಾಸವಿದೆ. ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರನ್ನೂ ಈ ಪೀಡೆ ಬಿಟ್ಟಿಲ್ಲ. ಇದು ನನ್ನನ್ನು ರಾಜಕೀಯವಾಗಿ ತುಳಿಯುವ ಷಢ್ಯಂತ್ರ. ಇಂತಹ ಬೆದರಿಕೆ ನಾನು ಬಗ್ಗಲ್ಲ. ಮಹಿಳೆ ಅಬಲೆಯಲ್ಲ, ಸಬಲೆ ಎಂದು ಈ ಪುರುಷ ಪ್ರಧಾನ ಸಮಾಜಕ್ಕೆ ತೋರಿಸಲು ನಾನು ಇಂತಹ ಎಲ್ಲ ಆರೋಪಗಳನ್ನು ನುಂಗಿಕೊಂಡಿರುವೆ" ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
ಉಪಚುನಾವಣೆಯ ಕಾಲ ಆಡಳಿತ ಪಕ್ಷ ಬಿಜೆಪಿಯನ್ನು ಹೇಗಾದರೂ ಬಗ್ಗು ಬಡಿಯಬೇಕು ಎಂದು ಕಾಂಗ್ರೆಸ್ ನಾಯಕರು ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಅವರ ಮೇಲೆ ನೇರ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಆರ್ ವಿ ದೇಶಪಾಂಡೆ ಅವರು, ಯಡಿಯೂರಪ್ಪನವರ ಸರಕಾರ ಒಬ್ಬ ಮಹಿಳೆಯ ಕೈಯಲ್ಲಿದೆ. ಆ ಮಹಿಳೆಯೇ ಸರಕಾರದ ಕೀಲಿ ಕೈ ಎಂದು ಟೀಕಿಸಿ ಮಜಾ ತೆಗೆದುಕೊಂಡಿದ್ದರು. ಬಿಜೆಪಿಯ ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ಕೂಡಾ ಬಿಜೆಪಿ ಬಿಕ್ಕಟ್ಟು ಆರಂಭವಾದ ನಂತರ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರ ಸರಕಾರ ಮುಗಿಯಿತು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇಂತಹ ಪ್ರಶ್ನೆಗಳು ಸಾರ್ವಜನಿಕವಾಗಿ ಚರ್ಚೆಯಾಗಬೇಕೆ ಎನ್ನುವುದೇ ಪ್ರಶ್ನೆ.