Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಿವಿ ಧಾರಾವಾಹಿಗಳಿಗೂ ಸರ್ಕಾರದ ಪ್ರೋತ್ಸಾಹ
ಕತೆ, ಕಾದಂಬರಿ ಆಧಾರಿತ ದೂರದರ್ಶನ ಧಾರಾವಾಹಿಗಳಿಗೆ ಸರಕಾರ ಪ್ರೋತ್ಸಾಹಿಸಲಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕುವೆಂಪು ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ 'ಟಿವಿ ರತ್ನ ಪುರಸ್ಕಾರ' ಮತ್ತು 'ಟಿವಿ ಸಾಮ್ರಾಟ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಟಿವಿ ಧಾರಾವಾಹಿಗಳು ಸಿನಿಮಾಗಳಿಗಿಂಗಲೂ ಹೆಚ್ಚು ಜನರನ್ನು ತಲುಪುತ್ತಿವೆ. ಟಿವಿಯಲ್ಲಿ ಉತ್ತಮ ಧಾರಾವಾಹಿಗಳು ಪ್ರಸಾರಗೊಳ್ಳುತ್ತಿವೆ ಎಂದು ಅಶೋಕ್ ಮೆಚ್ಚುಗೆ ವ್ಯ್ಯಕ್ತಪಡಿಸಿದರು. ಸನ್ಮಾನಿತ ನಟಿ ಉಮಾಶ್ರೀ ಅವರು ಮಾತನಾಡುತ್ತಾ, ರಂಗಭೂಮಿ, ಚಲನಚಿತ್ರ ಮತ್ತು ಧಾರಾವಾಹಿಗಳಲ್ಲಿನ ಕಲಾವಿದರೆಲ್ಲಾ ಒಂದೇ ಎಂದರು.
ವಿ.ಕೆ ಮೂರ್ತಿ, ಅಶೋಕ್ ನಾಯ್ಡು, ಪಿ ಶೇಷಾದ್ರಿ, ಸುರೇಶ್ ಬೈರಸಂದ್ರ, ಎಸ್ ರಾಮಚಂದ್ರ, ಉಮಾಶ್ರೀ, ಗುರುದತ್, ಬಿ ಸುರೇಶ್, ಶೈಲಜಾ ನಾಗ್, ಎಚ್.ಎಲ್.ಎನ್.ರಾವ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಕಾಶ್ ರೈ, ಅಭಯ ಸಿಂಹ ಮತ್ತು ಅರುಂಧತಿ ನಾಗ್ ಅವರ ಪರವಾಗಿ ಇತರರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ವಾತ್ರಾ ಇಲಾಖೆ ನಿರ್ದೇಶಕ ವಿಶುಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ, ಶಾಸಕ ಸತೀಶ್ ರೆಡ್ಡಿ, ನಟ ರಘು ಮುಖರ್ಜಿ, ನಟಿಯರಾದ ಗಿರಿಜಾ ಲೋಕೇಶ್, ಗಾಯತ್ರಿ ಪ್ರಭಾಕರ್, ಧಾರಾವಾಹಿ ಕಲಾವಿದರು ಮತ್ತು ಸಂಘದ ಅಧ್ಯಕ್ಷ ರವಿಶಂಕರ್ ಉಪಸ್ಥಿತರಿದ್ದರು.