Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುವರ್ಣ ಪ್ಯಾಟೆ ಹುಡ್ಗೀರ್ ಗೆ ನೋಟಿಸ್
ಪ್ಯಾಟೆ ಮಂದಿ ಯಾತಕ್ಕಾದರೂ ಕಾಡಿಗೆ ಬಂದ್ರು? ಎಂದು ಯಲ್ಲಾಪುರದ ಜನತೆ ಕೂಗು ಸಂಬಂಧಪಟ್ಟವರ ಕಿವಿಗೆ ಬೀಳುವ ಮುನ್ನವೇ ಪ್ಯಾಟೆ ಹುಡ್ಗೀರ ಹಳ್ಳಿ ಲೈಫು ತನ್ನ ಎರಡನೇ ಆವೃತ್ತಿಯನ್ನು ಆರಂಭಿಸಿಯಾಗಿತ್ತು. ಮೊದಲ ಭಾಗಕ್ಕಿಂತ ಇನ್ನಷ್ಟು ರೋಚಕವಾಗಿಸಲು ಸುವರ್ಣ ವಾಹಿನಿ, ಬಾಗಲಕೋಟೆಯ ಕೆರಕಲಮಟ್ಟಿ ಗ್ರಾಮವನ್ನು ಆರಿಸಿಕೊಂಡು ಉತ್ತರ ಕರ್ನಾಟಕ ಸಂಸ್ಕೃತಿ ಅನಾವರಣ ಮಾಡುವ ಭ್ರಮೆ ಇಟ್ಟುಕೊಂಡಿತ್ತು. ಆದರೆ, ಆರಂಭ ಹಂತದಲ್ಲೇ ಪ್ಯಾಟೆ ಹುಡುಗೀರ ವೇಷ ಭೂಷಣ, ಸೋಮಾರಿತನಕ್ಕೆ ಹಳ್ಳಿ ಮಂದಿಯಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ಒಂದಿಬ್ಬರು ಸ್ಪರ್ಧಿಗಳಿಗೆ ಮನೆ ಮಂದಿಯಿಂದ(ಪ್ರಮುಖವಾಗಿ ಮನೆ ಅಜ್ಜಿಯರು) ಆಗಾಗ ಜೋರಾಗಿ ಪೆಟ್ಟು ಕೂಡಾ ಬೀಳುತ್ತಿತ್ತು. ಒಂದು ಕಂತಿನಲ್ಲಿ ಸೋತ ಕುಮುದಾ ಎಂಬ ಸ್ಪರ್ಧಿಗೆ ಬ್ಯಾಡಗಿ ಮೆಣಸಿನ ಕಾಯಿ ಅರೆಯುವ ಶಿಕ್ಷೆ ನೀಡಿದ್ದು, ಆಕೆ ಆಸ್ಪತ್ರೆಯಲ್ಲಿ ಮೂರ್ನಾಲ್ಕು ದಿನ ಚೇತರಿಸಿಕೊಳ್ಳುವಂತೆ ಮಾಡಿತ್ತು. ನಿರೂಪಕ ಅಕುಲ್ ಹೇಗೋ ಇದನ್ನು ಸಂಭಾಳಿಸಿ ಬಚಾವ್ ಆಗಿ ಬಿಟ್ಟ.
ಆದರೆ, ಇತ್ತೀಚೆಗೆ ಶೋನ ಕಂತಿನಲ್ಲಿ ಅಪೂರ್ವ ಶೆಟ್ಟಿ ಹಾಗೂ ನಿಶಾ ಎಂಬ ಸ್ಪರ್ಧಿಗಳು ಪುಟ್ಟ ಬಾಲಕನಿಗೆ ಹಿಂಸೆ ನೀಡಿದ್ದು, ಬಾಲಕ ರೌದ್ರಾವತಾರ ತಾಳಿ ಮಚ್ಚು ಹಿಡಿದು ಅವರನ್ನು ಹೊಡೆಯಲು ಹೊರಟ್ಟಿದ್ದು, ಅದಕ್ಕೆ ಹೊಡಿಮಗ, ಹೊಡಿಮಗ ಹಾಡಿನ ಹಿನ್ನೆಲೆ ಧ್ವನಿ ನೀದಿದ್ದು, ಬಾಲಕನನ್ನು ಹಿಡಿದುಕೊಂಡ ಹುಡುಗಿಯರು ಕೆಳಗಿನದ್ದು ಕಟ್ ಮಾಡಿಬಿಡ್ತಿವಿ ಹುಷಾರ್ ಎಂದಿದ್ದು, ಪುಂಖಾನು ಪುಂಖವಾಗಿ ಬಾಲಕನ ಬೈಗುಳ ತಿಂದಿದ್ದು ಎಲ್ಲವೂ ಅಮಾನವೀಯವಾಗಿತ್ತು. ಈ ಪ್ರಕರಣವನ್ನು ಪತ್ರಕರ್ತ ಮೌನೇಶ್ ವಿಶ್ವಕರ್ಮ ಹೊರಗೆಳೆದು ತಂದಿದ್ದರು. ಈಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇದಕ್ಕೆ ಸಂಬಂಧಿಸಿ ಸುವರ್ಣವಾಹಿನಿಗೆ ನೋಟಿಸ್ ಜಾರಿ ಮಾಡಿದೆ.
ಸ್ಥಳೀಯ ಪತ್ರಿಕೆ, ಬ್ಲಾಗ್, ಫೇಸ್ ಬುಕ್ ನಲ್ಲಿ 'ಪ್ಯಾಟೆ ಹುಡ್ಗೀರ ಹಳ್ಳಿ ಲೈಫ್" ರಿಯಾಲಿಟಿ ಶೋದಲ್ಲಿ ಪುಟ್ಟ ಬಾಲಕನಿಗೆ ಹಿಂಸೆ ಕುರಿತ ವರದಿ ಪ್ರಕಟವಾಗಿ ಕೆಲ ದಿನಗಳಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರತಿಕ್ರಿಯೆ ನೀಡಿರುವುದು ಉತ್ತಮ ಬೆಳವಣಿಗೆ. ತಮಾಷೆಗಾಗಿ ಕೂಡಾ ಮಕ್ಕಳನ್ನು ಮಾನಸಿಕವಾಗಿ ಅಥವಾ ದೈಹಿಕವಾಗಿ ಹಿಂಸಿಸುವಂತಿಲ್ಲ. ಅದರಲ್ಲೂ ಲಕ್ಷಾಂತರ ಮಂದಿ ನೋಡುವ ರಿಯಾಲಿಟಿ ಶೋನಲ್ಲಿ ಈ ರೀತಿ ತೋರಿಸಿ ಯಾವ ಸಂಸ್ಕೃತಿ ಬೆಳೆಸುತ್ತಾರೆ ಎಂದು ಆಯೋಗದ ಸದಸ್ಯ ವಾಸುದೇವ ಶರ್ಮಾ ಪ್ರಶ್ನಿಸಿದ್ದಾರೆ.
ರಿಯಾಲಿಟಿ ಶೋ ಚಿತ್ರೀಕರಣವಾಗುತ್ತಿರುವ ಬಾಗಲ ಕೋಟೆ ಜಿಲ್ಲೆಯ ಕೆರಕಲ್ ಮಟ್ಟಿ ಗ್ರಾಮ ಪಂಚಾಯತಿ, ಮಕ್ಕಳ ಕಲ್ಯಾಣ ಸಮಿತಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ಬಾಲಕನಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆ ಸ್ಪಷ್ಟನೆಯನ್ನು ಕೋರಲಾಗಿದೆ. ಬಾಲಕನ ಬಗ್ಗೆ ಮಾಹಿತಿ ಸಂಗ್ರಹಿಸಿದ ನಂತರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಈ ಬಗ್ಗೆ ತುರ್ತು ಚರ್ಚೆ ನಡೆಸಿ, ಮುಂದಿನ ಕ್ರಮ ಜರಗಿಸುವುದಾಗಿ ವಾಸುದೇವ ಶರ್ಮಾ ಹೇಳಿದ್ದಾರೆ.