Don't Miss!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೆ.18ಕ್ಕೆ 'ಜನಶ್ರೀ' ವಾಹಿನಿಗೆ ಒಂದು ವರ್ಷದ ಸಂಭ್ರಮ
"ಸರಿಯಾಗಿ 12 ತಿಂಗಳ ಕೆಳಗೆ ಪ್ರಸಾರ ಆರಂಭಿಸಿದ ಜನಶ್ರೀ ವಾಹಿನಿ ಎಲ್ಲರ ನಿರೀಕ್ಷೆಗೂ ಮಿಗಿಲಾಗಿ ನಿಷ್ಪಕ್ಷಪಾತ ಸುದ್ದಿ, ವಿಶ್ಲೇಷಣೆಗಳಿಂದ ನಿಜಕ್ಕೂ ಜನ ಮನ ದನಿಯಾಗಿದೆ. ಸುದ್ದಿಯ ಹೂರಣದ ಜೊತೆ ಜನರ ಆಶೋತ್ತರಗಳಿಗೆ ದನಿಯಾಗಿರುವ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ಜನ ಮನ ಗೆಲ್ಲುವಲ್ಲಿ ಸಫಲವಾಗಿವೆ" ಎಂದಿದ್ದಾರೆ ಜನಶ್ರೀ ರೂವಾರಿ ಅನಂತ ಚಿನಿವಾರ್.
ಜ್ಯೋತಿಷ್ಯ, ಭವಿಷ್ಯ ಆಧಾರಿತ ಚರ್ಚೆಗಳು, ರೋಚಕತೆ ಬಿಂಬಿಸುವ ಹಸಿಬಿಸಿ ಸುದ್ದಿಗಳಿಂದ ದೂರವಿರುವ ಜನಶ್ರೀ ವಾಹಿನಿ ಉಳಿದ ವಾಹಿನಿಗಳಿಗಿಂತ ಭಿನ್ನ ಎನ್ನಬಹುದು. ಟಿಆರ್ಪಿಯಲ್ಲೂ ವಾಹಿನಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿರುವುದೇ ಇದಕ್ಕೆ ಸಾಕ್ಷಿ.
ಮೋಸ ಹೋಗಬೇಡಿ, ಒಂದು ಒಳ್ಳೆ ಕೆಲಸ, ದೈವ ಸನ್ನಿಧಿ, ದೇಶ ವಿದೇಶ, ನೋಡಿ ಸ್ವಾಮಿ ಎಂಬ ಕಾರ್ಯಕ್ರಮಗಳು ವೈವಿಧ್ಯಮಯವಾಗಿವೆ. ಜನಶ್ರೀ ವಾಹಿನಿಯಲ್ಲಿ ವಿಶೇಷವಾಗಿ ಗಮನಸೆಳೆಯುತ್ತಿರುವ ಕಾರ್ಯಕ್ರಮಗಳೆಂದರೆ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶವಾಗಿಟ್ಟು ಬಿತ್ತರವಾಗುತ್ತಿರುವ 'ಮನೆ ಪಾಠ' ಹಾಗೂ 'ಜಾಬ್ ಜಂಕ್ಷನ್' ನಂತಹ ಕಾರ್ಯಕ್ರಮಗಳು. ಗಣಿಧಣಿಗಳ ರಾಜಕೀಯ ಮುಖವಾಣಿಯಂತೆ ಎಂದೂ ತೋರಿಸಿಕೊಳ್ಳದ ಜನಶ್ರೀ ವಾಹಿನಿಗೆ ಹ್ಯಾಪಿ ಬರ್ತ್ಡೇ. (ಒನ್ಇಂಡಿಯಾ ಕನ್ನಡ)