Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೆ.18ಕ್ಕೆ 'ಜನಶ್ರೀ' ವಾಹಿನಿಗೆ ಒಂದು ವರ್ಷದ ಸಂಭ್ರಮ
"ಸರಿಯಾಗಿ 12 ತಿಂಗಳ ಕೆಳಗೆ ಪ್ರಸಾರ ಆರಂಭಿಸಿದ ಜನಶ್ರೀ ವಾಹಿನಿ ಎಲ್ಲರ ನಿರೀಕ್ಷೆಗೂ ಮಿಗಿಲಾಗಿ ನಿಷ್ಪಕ್ಷಪಾತ ಸುದ್ದಿ, ವಿಶ್ಲೇಷಣೆಗಳಿಂದ ನಿಜಕ್ಕೂ ಜನ ಮನ ದನಿಯಾಗಿದೆ. ಸುದ್ದಿಯ ಹೂರಣದ ಜೊತೆ ಜನರ ಆಶೋತ್ತರಗಳಿಗೆ ದನಿಯಾಗಿರುವ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ಜನ ಮನ ಗೆಲ್ಲುವಲ್ಲಿ ಸಫಲವಾಗಿವೆ" ಎಂದಿದ್ದಾರೆ ಜನಶ್ರೀ ರೂವಾರಿ ಅನಂತ ಚಿನಿವಾರ್.
ಜ್ಯೋತಿಷ್ಯ, ಭವಿಷ್ಯ ಆಧಾರಿತ ಚರ್ಚೆಗಳು, ರೋಚಕತೆ ಬಿಂಬಿಸುವ ಹಸಿಬಿಸಿ ಸುದ್ದಿಗಳಿಂದ ದೂರವಿರುವ ಜನಶ್ರೀ ವಾಹಿನಿ ಉಳಿದ ವಾಹಿನಿಗಳಿಗಿಂತ ಭಿನ್ನ ಎನ್ನಬಹುದು. ಟಿಆರ್ಪಿಯಲ್ಲೂ ವಾಹಿನಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿರುವುದೇ ಇದಕ್ಕೆ ಸಾಕ್ಷಿ.
ಮೋಸ ಹೋಗಬೇಡಿ, ಒಂದು ಒಳ್ಳೆ ಕೆಲಸ, ದೈವ ಸನ್ನಿಧಿ, ದೇಶ ವಿದೇಶ, ನೋಡಿ ಸ್ವಾಮಿ ಎಂಬ ಕಾರ್ಯಕ್ರಮಗಳು ವೈವಿಧ್ಯಮಯವಾಗಿವೆ. ಜನಶ್ರೀ ವಾಹಿನಿಯಲ್ಲಿ ವಿಶೇಷವಾಗಿ ಗಮನಸೆಳೆಯುತ್ತಿರುವ ಕಾರ್ಯಕ್ರಮಗಳೆಂದರೆ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶವಾಗಿಟ್ಟು ಬಿತ್ತರವಾಗುತ್ತಿರುವ 'ಮನೆ ಪಾಠ' ಹಾಗೂ 'ಜಾಬ್ ಜಂಕ್ಷನ್' ನಂತಹ ಕಾರ್ಯಕ್ರಮಗಳು. ಗಣಿಧಣಿಗಳ ರಾಜಕೀಯ ಮುಖವಾಣಿಯಂತೆ ಎಂದೂ ತೋರಿಸಿಕೊಳ್ಳದ ಜನಶ್ರೀ ವಾಹಿನಿಗೆ ಹ್ಯಾಪಿ ಬರ್ತ್ಡೇ. (ಒನ್ಇಂಡಿಯಾ ಕನ್ನಡ)