Don't Miss!
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಕಿರುತೆರೆಗೆ ಅಡಿಯಿಟ್ಟ ಜೂಲಿ ಲಕ್ಷ್ಮಿ!
ಹಿರಿಯ ನಟಿ ಲಕ್ಷ್ಮಿ ಕನ್ನಡ ಕಿರುತೆರೆಗೆ ಮರಳಿದ್ದಾರೆ! ಲಕ್ಷ್ಮಿ ಕಿರುತೆರೆ ಕಾರ್ಯಕ್ರಮ ನಡೆಸಿಕೊಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು 'ಕಥೈಅಲ್ಲೆ ನಿಜಂ' ಎಂಬ ಜನಪ್ರಿಯ ಟಿವಿ ರಿಯಾಲಿಟಿ ಕಾರ್ಯಾಕ್ರಮವನ್ನು ತಮಿಳಿನಲ್ಲಿ ನಡೆಸಿಕೊಟ್ಟಿದ್ದರು. ಈಗ ಅದೇ ರೀತಿಯ ಕಾರ್ಯಕ್ರಮವನ್ನು ಸುವರ್ಣ ವಾಹಿನಿಗಾಗಿ ನಡೆಸಿಕೊಡಲಿದ್ದಾರೆ.
'ಇದು ಕತೆಯಲ್ಲ ಜೀವನ' ಎಂಬ ಟಿವಿ ಕಾರ್ಯಕ್ರಮ ಸುವರ್ಣ ವಾಹಿನಿಯಲ್ಲಿ ಜೂನ್ 22ರಿಂದ ಪ್ರಾರಂಭವಾಗಲಿದೆ. ಪ್ರತಿ ಸೋಮವಾರದಿಂದ ಶುಕ್ರವಾರದ ತನಕ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಜೀವನದಲ್ಲಿ ನೊಂದ ಬದುಕುಗಳಿಗೆ ಬೆಳಕು ತೋರಿಸುವ ಕಾರ್ಯಕ್ರಮ ಇದಾಗಲಿದೆ ಎನ್ನುತ್ತದೆ ಸುವರ್ಣ ವಾಹಿನಿ.
ಸಲಿಂಗಕಾಮ, ವ್ಯಭಿಚಾರ, ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಹದಿಹರಯದ ಸಮಸ್ಯೆಗಳು, ಪತಿಯ ದಬ್ಬಾಳಿಕೆಯಂತಹ ಸಮಸ್ಯೆಗಳ ಬಗ್ಗೆ ಚರ್ಚೆ, ಸಲಹೆ, ಸೂಚನೆಗಳು ಈ ಕಾರ್ಯಕ್ರಮದಲ್ಲಿ ಸಿಗಲಿವೆ. ಪ್ರತಿ ಕಂತಿನಲ್ಲಿ ಒಂದು ನಿರ್ದಿಷ್ಟ ಘಟನೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವೀಕ್ಷಕರಿಗೆ ಸತ್ಯ ಮತ್ತು ವಾಸ್ತವದ ಅರಿವನ್ನು ಈ ಕಾರ್ಯಕ್ರಮ ಮೂಡಿಸಲಿದೆ. (ದಟ್ಸ್ ಕನ್ನಡ ಚಿತ್ರವಾರ್ತೆ)