Don't Miss!
- News Gold-Silver Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಡ್: ಚಿನ್ನದ ಬೆಲೆ ಇಳಿಕೆ- ಇಲ್ಲಿದೆ ಸಂಪೂರ್ಣ ವಿವರ
- Finance ಐಪಿಎಲ್ ಬೆಟ್ಟಿಂಗ್ನಲ್ಲಿ ಇಂಜಿನಿಯರ್ಗೆ 84 ಲಕ್ಷ ರೂ. ನಷ್ಟ: ಸಾಲಗಾರರ ಕಿರುಕುಳಕ್ಕೆ ಹೆಂಡತಿ ಆತ್ಮಹತ್ಯೆ
- Lifestyle ಇಲ್ಲಿದೆ ವಿಶ್ವದ ಅತ್ಯಂತ ದುಬಾರಿ ಹಸು..! ₹40 ಕೋಟಿಗೆ ಹರಾಜು..!
- Sports CSK vs GT: ಚೆಪಾಕ್ನಲ್ಲಿ ನಡೆಯದ 'ಶುಭ' ಆಟ; ಸಿಎಸ್ಕೆ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಟೈಟನ್ಸ್
- Automobiles ಆಕರ್ಷಕ ಬೆಲೆ: ಭಾರೀ ಬೇಡಿಕೆಯ ಕಿಯಾ ಸೆಲ್ಟೋಸ್ ಎಸ್ಯುವಿಯ ಹೊಸ ರೂಪಾಂತರಗಳು ಬಿಡುಗಡೆ
- Technology Lenovo: ಭಾರತದಲ್ಲಿ ಲೆನೊವೊ ಟ್ಯಾಬ್ M11 ಲಾಂಚ್! 8GB RAM ... ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಕಿರುತೆರೆಗೆ ಅಡಿಯಿಟ್ಟ ಜೂಲಿ ಲಕ್ಷ್ಮಿ!
ಹಿರಿಯ ನಟಿ ಲಕ್ಷ್ಮಿ ಕನ್ನಡ ಕಿರುತೆರೆಗೆ ಮರಳಿದ್ದಾರೆ! ಲಕ್ಷ್ಮಿ ಕಿರುತೆರೆ ಕಾರ್ಯಕ್ರಮ ನಡೆಸಿಕೊಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು 'ಕಥೈಅಲ್ಲೆ ನಿಜಂ' ಎಂಬ ಜನಪ್ರಿಯ ಟಿವಿ ರಿಯಾಲಿಟಿ ಕಾರ್ಯಾಕ್ರಮವನ್ನು ತಮಿಳಿನಲ್ಲಿ ನಡೆಸಿಕೊಟ್ಟಿದ್ದರು. ಈಗ ಅದೇ ರೀತಿಯ ಕಾರ್ಯಕ್ರಮವನ್ನು ಸುವರ್ಣ ವಾಹಿನಿಗಾಗಿ ನಡೆಸಿಕೊಡಲಿದ್ದಾರೆ.
'ಇದು ಕತೆಯಲ್ಲ ಜೀವನ' ಎಂಬ ಟಿವಿ ಕಾರ್ಯಕ್ರಮ ಸುವರ್ಣ ವಾಹಿನಿಯಲ್ಲಿ ಜೂನ್ 22ರಿಂದ ಪ್ರಾರಂಭವಾಗಲಿದೆ. ಪ್ರತಿ ಸೋಮವಾರದಿಂದ ಶುಕ್ರವಾರದ ತನಕ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಜೀವನದಲ್ಲಿ ನೊಂದ ಬದುಕುಗಳಿಗೆ ಬೆಳಕು ತೋರಿಸುವ ಕಾರ್ಯಕ್ರಮ ಇದಾಗಲಿದೆ ಎನ್ನುತ್ತದೆ ಸುವರ್ಣ ವಾಹಿನಿ.
ಸಲಿಂಗಕಾಮ, ವ್ಯಭಿಚಾರ, ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಹದಿಹರಯದ ಸಮಸ್ಯೆಗಳು, ಪತಿಯ ದಬ್ಬಾಳಿಕೆಯಂತಹ ಸಮಸ್ಯೆಗಳ ಬಗ್ಗೆ ಚರ್ಚೆ, ಸಲಹೆ, ಸೂಚನೆಗಳು ಈ ಕಾರ್ಯಕ್ರಮದಲ್ಲಿ ಸಿಗಲಿವೆ. ಪ್ರತಿ ಕಂತಿನಲ್ಲಿ ಒಂದು ನಿರ್ದಿಷ್ಟ ಘಟನೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವೀಕ್ಷಕರಿಗೆ ಸತ್ಯ ಮತ್ತು ವಾಸ್ತವದ ಅರಿವನ್ನು ಈ ಕಾರ್ಯಕ್ರಮ ಮೂಡಿಸಲಿದೆ. (ದಟ್ಸ್ ಕನ್ನಡ ಚಿತ್ರವಾರ್ತೆ)