Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀತಿ ಹುಟ್ಟಿಸುವ ಜ್ಯೋತಿಷಿಗಳಿಗೆ ಶಿಕ್ಷೆ ಏಕಿಲ್ಲ?
ದಢೂತಿ ಜ್ಯೋತಿಷಿಯೊಬ್ಬರಂತೂ ಟಿವಿಯಲ್ಲಿ ಕಾಣಿಸಿಕೊಂಡು ಜನರಲ್ಲಿ ಅನಗತ್ಯ ಭೀತಿ ಹರಡುತ್ತಿದ್ದಾರೆ. ಅವರ ಜಾಣ್ಮೆ ಎಷ್ಟಿದೆಯೆಂದರೆ ಅವರು ಮಾತನಾಡುವುದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ. ಭೂಕಂಪ, ಪ್ರವಾಹವೇ ಆಗುವುದೆಂದು ತಾನು ಹೇಳಲಾರೆ, ಆದರೆ ಏನೋ ಒಂದು ಆಗಲಿದೆ ಎಂದು ಅವರು ಹೇಳುತ್ತಾರೆ. ಮಾ.19ರಂದೇ ಸಂಭವಿಸುವುದೆಂದು ಹೇಳಲಾರೆ, ಮುಂದೆ ಯಾವಾಗಲೂ ಸಂಭವಿಸಬಹುದು ಎನ್ನುತ್ತಾರೆ.
ಮುಂದಕ್ಕೆ ಲಾರಿಯಡಿಗೆ ನಾಯಿ ಬಿದ್ದು ಸತ್ತರೂ 'ನೋಡಿ, ನಾನು ಹೀಗೆ ಹೇಳಿರಲಿಲ್ಲವೆ " ಎಂದು ಅವರು ಹೇಳಿದರೂ ಹೇಳಿಯಾರೆ. ಹಿಂದೊಮ್ಮೆ ಇದೇ ರೀತಿ ಟಿವಿ ಜ್ಯೋತಿಷಿಯೊಬ್ಬರು ಬಂಟ್ವಾಳಕ್ಕೆ ಬಂದಿದ್ದಾಗ ಮುಂದಿನ ತಿಂಗಳು ಇಂತಿಷ್ಟೇ ತಾರೀಕಿನಂದು ಪ್ರಳಯ ಸದೃಶ ಮಳೆ ಬಂದು ಬಂಟ್ವಾಳವು ಭೀಕರ ಪ್ರವಾಹಕ್ಕೆ ತುತ್ತಾಗಲಿದೆ ಎಂದು ಹೇಳಿಹೋಗಿದ್ದರು. ಆದರೆ ಅವರು ಹೇಳಿದ ದಿನದಂದು ಬಂಟ್ವಾಳದಲ್ಲಿ ಸುಡು ಬಿಸಿಲಿತ್ತು.
ಇದೀಗ ಜನತೆಯಲ್ಲಿ ಭಾರೀ ಭಯಭೀತಿ ಬಿತ್ತುವಲ್ಲಿ ಈ ಕಪಟ ಜ್ಯೋತಿಷಿಗಳು ಸಫಲರಾಗಿದ್ದಾರೆ. ಒಂದುವೇಳೆ ನಾಡಿದ್ದು ಏನೂ ಸಂಭವಿಸಲಿಲ್ಲವೆಂದಾದರೆ ಅವರು ಈ ರೀತಿ ಅನವಶ್ಯ ಭೀತಿ ಬಿತ್ತಿದ್ದಕ್ಕೆ ಸೂಕ್ತ ಶಿಕ್ಷೆ ಪಡೆಯಬೇಡವೆ? ಅವರೇನೋ ಮರುದಿನದಿಂದ ಬೇರೆಯೆ ತೆರನಾದ ನೆಪ ಹೇಳಲು ಆರಂಭಿಸಿಯಾರು. ಆದರೆ ಜನಗಳು ಅವರಿಗೆ ಪಾಠ ಕಲಿಸಲು ಈಗಲೆ ಸಿದಟಛಿರಾಗಿರುವುದೊಳಿತು. ಇಲ್ಲದಿದ್ದರೆ ಮುಂದೊಂದು ದಿನ ಹೊಸದಾದ ವಿಷಯ ಎತ್ತಿ ಅವರು ಜನರಲ್ಲಿ ಭೀತಿ ಸೃಷ್ಟಿಸತೊಡಗುತ್ತಾರೆ.