ಕಿರುತೆರೆಯನ್ನೇ ಹೆಚ್ಚು ಪ್ರೀತಿಸುತ್ತಿರುವ ಚಂದ್ರಕಲಾ

ಮಂಡ್ಯದ ಹೊಸಹಳ್ಳಿಯವರಾದ ಚಂದ್ರಕಲಾ ತಮ್ಮ ಹತ್ತನೇ ವಯಸ್ಸಿನಲ್ಲಿಯೇ ಬಣ್ಣ ಹಚ್ಚಿದವರು. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು ಕುರುಕ್ಷೇತ್ರ, ದಕ್ಷಯಜ್ಞ, ಶ್ರೀ ಕೃಷ್ಣ ಸಂಧಾನ, ರ್ತನ ಮಾಂಗಲ್ಯ, ಬಸ್ ಕಂಡಕ್ಡರ್, ಸತಿ ಸಂಸಾರದ ಜ್ಯೋತಿ, ಗೌಡ್ರ ಗದ್ಲ, ಹೀಗೆ ಬಹಳಷ್ಟು ನಾಟಕಗಳಲ್ಲಿ ನಟಿಸಿದ್ದಾರೆ.
ಮದುವೆಯಾದ ನಂತರ ದೂರದರ್ಶನದಲ್ಲಿ ಪ್ರಸಾರವಾದ 'ಮರೀಚಿಕೆ' ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶ ಮಾಡಿದ ಇವರು ನಂತರ ಜೀವನ, ಕುಸುಮಾಂಜಲಿ, ರಂಗೋಲಿ, ಗೋಧೂಳಿ, ಎಸ್ಸೆಸ್ಸೆಲ್ಸಿ ನನ್ಮಕ್ಳು, ಮೂಡಲ ಮನೆ ಮುಂತಾದ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಜೊತೆಗೆ ರಾಜಧಾನಿ, ಭದ್ರ ಮುಂತಾದ ಸಿನಿಮಾಗಳಲ್ಲಿಯೂ ನಟಿಸಿ ಎಲ್ಲಾ ಕಡೆ ಸಲ್ಲಬಲ್ಲವರು ಎನಿಸಿಕೊಂಡಿದ್ದಾರೆ.
ಉಮಾಶ್ರೀ ಅವರಂತೆ ಮಧ್ಯ ವಯಸ್ಸಿನಲ್ಲಿರುವಾಗಲೇ ಮದುಕಿ ಪಾತ್ರ ಮಾಡುವಾಸೆ ಎನ್ನುವ ಇವರು ತಮಗೆ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತಾರೆ. ಪದ್ಮಜಾ ರಾವ್, ರವಿ ಆರ್ ಗರಣಿಯವರ ಜೊತೆ ಸದ್ಯಕ್ಕೆ ಇವರ ನಟನಾಯಾನ ಮುಂದುವರಿದಿದೆ. (ಒನ್ ಇಂಡಿಯಾ ಕನ್ನಡ)


Click it and Unblock the Notifications











