Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ ರಾಣಿ ಜತೆಗೆ ಪ್ರೀತಿಯಿಂದ ರಮೇಶ್ ಅರವಿಂದ್
ಕನ್ನಡ ಕಿರುತೆರೆಗೆ ಮತ್ತೊಬ್ಬ ನಾಯಕ ನಟನ ಆಗಮನವಾಗಿದೆ. ಈ ಟಿವಿ ಕನ್ನಡ ವಾಹಿನಿ ಮೂಲಕ ನಟ ರಮೇಶ್ ಅರವಿಂದ್ ಕಿರುತೆರೆಗೆ ಲಗ್ಗೆಯಿಟ್ಟಿದ್ದಾರೆ. ಕಾರ್ಯಕ್ರಮದ ಹೆಸರು 'ರಾಜ ರಾಣಿ ರಮೇಶ್'. ಒಬ್ಬರನ್ನೊಬ್ಬರು ಇಷ್ಟಪಡುವ ಜೋಡಿಗಳಿಗಾಗಿ ರೂಪಿಸಿರುವ ಕುಟುಂಬ ಪ್ರಧಾನ ಕಾರ್ಯಕ್ರಮ ಇದಾಗಿದೆ.
ಆಗಸ್ಟ್ 15ರಿಂದ ಪ್ರಸಾರ ಪ್ರಾರಂಭಿಸಿರುವ ಈ ಕಾರ್ಯಕ್ರಮ ಪ್ರತಿ ಭಾನುವಾರ ರಾತ್ರಿ 9.30ಕ್ಕೆ ನಿಮ್ಮ ನೆಚ್ಚಿನ ಈ ಟಿವಿ ಕನ್ನಡದಲ್ಲಿ ಪ್ರತ್ಯಕ್ಷವಾಗಲಿದೆ. ನಟನೆ, ನಿರ್ದೇಶನ, ಸಂಭಾಷಣೆ ಹೀಗೆ ನೂರೆಂಟು ರಗಳೆಗಳ ನಡುವೆ ಪ್ರೀತಿಯಿಂದ ರಮೇಶ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.
ಏತನ್ಮಧ್ಯೆ ರಮೇಶ್ ಅರವಿಂದ ಎರಡು ಚಿತ್ರಗಳನ್ನು ಮುಗಿಸಿದ್ದಾರೆ. ಒಂದು 'ರಂಗಪ್ಪ ಹೋಗ್ಬಿಟ್ನಾ' ಮತ್ತು 'ಶಾಕ್'. ಹಾಸ್ಯಪ್ರಧಾನ 'ರಂಗಪ್ಪ ಹೋಗ್ಬಿಟ್ನಾ' ಚಿತ್ರಕ್ಕೆ ಆಕ್ಷನ್, ಕಟ್ ಹೇಳಿದವರು ಎಂ ಎಲ್ ಪ್ರಸನ್ನ. 'ಶಾಕ್' ಚಿತ್ರವನ್ನು ರಾಜಶೇಖರ್ ನಿರ್ದೇಶಿಸಿದ್ದಾರೆ. 'ಶಾಕ್' ಚಿತ್ರದಲ್ಲಿ ರಮೇಶ್ ಸೈಕೋ ಪಾತ್ರದಲ್ಲಿ ಕಾಣಿಸಲಿದ್ದಾರೆ. ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗಲು ರಮೇಶ್ ಈಗ ಮನೆಮನೆಗೆ ತಲುಪುತ್ತಿದ್ದಾರೆ.