Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಹೊಸತೊಂದು ಸುದ್ದಿ ಟಿವಿ ಚಾನಲ್
ಇಂದಿನಿಂದ 80 ದಿನಗಳೊಳಗಾಗಿ ತಮ್ಮ ಚಾನಲ್ ಪ್ರಸಾರ ಆರಂಭಿಸಲಿದ್ದು. ಚಾನಲ್ ನಿರ್ಮಾಣ ಚಟುವಟಿಕೆಗಳು ಭರದಿಂದ ಸಾಗಿವೆ ಎಂದು ರಂಗನಾಥ್ ಇದೇ ಮೊದಲಬಾರಿಗೆ ಅಧಿಕೃತವಾಗಿ ಪ್ರಕಟಣೆ ಮಾಡಿದ್ದಾರೆ.
ಕನ್ನಡ ಟಿವಿ ವೀಕ್ಷಕರ ಆಶೋತ್ತರಗಳನ್ನು ಯಥಾವತ್ತಾಗಿ ಬಿಂಬಿಸುವ, ಮೊಟ್ಟ ಮೊದಲ ಜನಪರ ವಾಹಿನಿಯಾಗಿ ತಮ್ಮ ಚಾನಲ್ ರೂಪುಗೊಳ್ಳಲಿದೆ ಎಂದು ಅವರು ದಟ್ಸ್ ಕನ್ನಡಕ್ಕೆ ತಿಳಿಸಿದರು.
ಇಪ್ಪತ್ನಾಲ್ಕು ಗಂಟೆ ಕನ್ನಡದಲ್ಲಿ ಸುದ್ದಿ ನೀಡುವ ಟಿವಿ9, ಸುವರ್ಣ ನ್ಯೂಸ್, ಜನಶ್ರೀ ಮತ್ತು ಸಮಯ ಚಾನಲ್ಲುಗಳ ಸಾಲಿಗೆ ರಂಗ ಅವರ ಇನ್ನೂ ಹೆಸರಿಡದ ಚಾನಲ್, 5 ನೇ ವಾಹಿನಿಯಾಗಿ ಸೇರ್ಪಡೆಯಾಗುತ್ತದೆ.
ಇಪ್ಪತ್ತು ಸಾವಿರ ಚದರ ಅಡಿ ಜಾಗ ಇರುವ ಚಾನಲ್ ಕಚೇರಿ ಯಶವಂತಪುರದಲ್ಲಿ ತೆರೆಯಲಾಗಿದೆ. ಚಾನಲ್ ಸ್ಥಾಪನೆಗೆ ಅಗತ್ಯವಾಗ ತಾಂತ್ರಿಕ ಉಪಕರಣಗಳು, ಇಂಟೀರಿಯರ್ ಡೆಕೋರೇಷನ್ ಮತ್ತು ಅಗತ್ಯ ಸಿಬ್ಬಂದಿಯ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ರಂಗಾ ಹೇಳಿದರು.
ನಿಮ್ಮ ಹೊಸ ಸಾಹಸಕ್ಕೆ ಬಂಡವಾಳ ಹಾಕುವವರು ಯಾರು ಎಂಬ ಪ್ರಶ್ನೆಗೆ ಸೀದಾ ನೇರ ಉತ್ತರ ನೀಡಲು ನಿರಾಕರಿಸಿದ ರಂಗ, ಕಪ್ಪುಹಣ ಮತ್ತು ರಾಜಕೀಯ ವ್ಯಕ್ತಿಗಳ ಹಣದಿಂದ ತಮ್ಮ ಚಾನಲ್ ಮುಕ್ತವಾಗಿರುತ್ತದೆ ಎಂದಷ್ಟೇ ಹೇಳಿದರು.
ತಮ್ಮ ಹೊಸ ಸಾಹಸ ಪತ್ರಕರ್ತರ ಪಾಲುದಾರಿಕೆಯಿಂದ ನಡೆಯುವ ಚಾನಲ್ ಆಗಿರುತ್ತದೆ ಎಂದೂ ಅವರು ಒತ್ತಿ ಹೇಳಿದರು. ತಾವು 1 ರು. ಸಂಬಳ ಪಡೆಯುವ ಸಂಪಾದಕನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.
ತಮ್ಮ ಚಾನಲ್ ಲಾಭ ಮಾಡುವ ಉದ್ದೇಶ ಇಟ್ಟುಕೊಂಡಿಲ್ಲ. ಉದ್ಯಮ ತನ್ನ ಕಾಲ ಮೇಲೆ ತಾನು ನಿಂತುಕೊಳ್ಳುವಷ್ಟು ಆದಾಯ ಮಾಡಿದರಷ್ಟೇ ಸಾಕು ಎಂದ ರಂಗ, ಯಾವುದೇ ರಾಜಕೀಯ, ಉದ್ಯಮದ ಲಾಬಿಗಳಿಗೆ ಮಣಿಯದ ತಮ್ಮ ಸಂಸ್ಥೆ, ಸ್ವಚ್ಛ, ಸೀದಾ, ಸಾದಾ, ಪತ್ರಿಕೋದ್ಯಮದಲ್ಲಿ ಬಲವಾದ ನಂಬಿಕೆ ಇಟ್ಟ ಒಂದು ವಿನೂತನ ಮಾಧ್ಯಮ ಸಂಸ್ಥೆ ಆಗಲಿದೆ ಎಂದರು.
ಚಾನಲ್ ಆರಂಭಿಸುವುದಕ್ಕೆ ಮೂಲ ಬಂಡವಾಳ 10 ಕೋಟಿ ರು. ಬೇಕು. ಪ್ರತೀ ತಿಂಗಳು 1 ಕೋಟಿ ರು. ಪುನರಾವರ್ತಿತ ವೆಚ್ಚದಂತೆ ವರ್ಷಕ್ಕೆ 25 ಕೋಟಿ ರು. ಬಂಡವಾಳ ಅಗತ್ಯ ಎಂದು ನುಡಿದರು.
ತಮ್ಮಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಸಾಮಾಜಿಕ ಬದ್ದತೆ ಇರತಕ್ಕದ್ದು. ಪ್ರತಿಯೊಬ್ಬರು ಸ್ವಯಂಪ್ರೇರಣೆಯಿಂದ ಪ್ರತಿವರ್ಷ ಆಸ್ತಿ ಘೋಷಣೆ ಮಾಡಿಕೊಳ್ಳತಕ್ಕದ್ದು. ನಿಸ್ಪೃಹ, ಕನ್ನಡ ಸಮಾಜ ಪ್ರೇಮಿ ಜರ್ನಲಿಸ್ಟುಗಳು ತಮ್ಮ ಸಂಸ್ಥೆಯ ಆಧಾರಸ್ಥಂಭ ಎನ್ನುವ ರಂಗನಾಥ್ ಕನಸುಗಳ ಎತ್ತರ ಕೊಡಚಾದ್ರಿ ಬೆಟ್ಟದಷ್ಟು.
ಚಾನಲ್ಲಿಗೆ ಇನ್ನೂ ಹೆಸರು ನಿಗದಿಯಾಗಿಲ್ಲ. ದಟ್ಸ್ ಕನ್ನಡ ಓದುಗರು ಹೊಸ ವಾಹಿನಿಗೆ ಆಕರ್ಷಕ, ಅರ್ಥಪೂರ್ಣ ಹೆಸರುಗಳನ್ನು ಸಲಹೆ ಮಾಡಲು ಸ್ವಾಗತ ಎಂದಿರುವ ರಂಗ ಅವರ ಸಂಪರ್ಕ ವಿಳಾಸ : [email protected]