Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ ಹೊತ್ತಿಗೆ ರೆಡ್ಡಿಗಳ ಕನಸಿನ ಕೂಸು ಜನನ
ಈ 24X 7 ಸುದ್ದಿವಾಹಿನಿಗೆ ಗಣಿಧಣಿಗಳು ಎಷ್ಟು ಹಣ ಹೂಡಿದ್ದಾರೆ ಎಂದು ತಿಳಿದುಬಂದಿಲ್ಲ. ಗಣಿಗಾರಿಕೆಯಲ್ಲಿ ತೊಡಗಿಸುವ ಬಂಡಾವಳಕ್ಕೆ ಹೋಲಿಸಿದರೆ, ಸುದ್ದಿವಾಹಿನಿ ಆರಂಭಕ್ಕೆ ಅಲ್ಪ ಪ್ರಮಾಣದ ಮೊತ್ತವಿದ್ದರೆ ಸಾಕು. ಈಗಾಗಲೇ ಕುಮಾರಸ್ವಾಮಿ ಹಾಗೂ ದೇವೇಗೌಡರ ಜೆಡಿಎಸ್ ಮುಖವಾಣಿಯಾಗಿ ಕಸ್ತೂರಿ ವಾಹಿನಿ , ಕಾಂಗ್ರೆಸ್ ಪಕ್ಷದ ಜಾರಕಿಹೊಳಿ ಆರಂಭಿಸಿರುವ 'ಸಮಯ' ವಾಹಿನಿ ಜೊತೆಗೆ ನೇರ ಯುದ್ಧ ಸಾರಲು ರೆಡ್ಡಿಗಳ ಚಾನೆಲ್ ಬರಲಿದೆ.
ಅಂದ ಹಾಗೆ, ಈ ಹೊಸ ಸುದ್ದಿವಾಹಿನಿಗೆ 'ಜನಶ್ರೀ'ಎಂದು ಹೆಸರಿಡಲಾಗಿದೆ. ಕೇಳುವುದಕ್ಕೆ ಯಾವುದೋ ಸರ್ಕಾರಿ ಯೋಜನೆಯ ಹೆಸರಿನಂತಿದ್ದರೂ, ಇದರರ್ಥ ಬೇರೆ ಇದೆ. ಜನಾರ್ದನ ರೆಡ್ಡಿ ಹೆಸರಿನಿಂದ 'ಜನ' ಹಾಗೂ ಶ್ರೀ ರಾಮುಲು ಹೆಸರಿನಿಂದ 'ಶ್ರೀ' ತೆಗೆದು 'ಜನಶ್ರೀ' ಎಂದು ಹೆಸರಿಸಲಾಗಿದೆಯಂತೆ.
ನಗರದ ಶ್ರೀಮಂತ ಬಡಾವಣೆಗಳಲ್ಲಿ ಒಂದೆನಿಸಿರುವ ಕೋರಮಂಗಲದಲ್ಲಿ ತನ್ನ ಕೇಂದ್ರ ಕಚೇರಿಯನ್ನು ಜನಶ್ರೀ ವಾಹಿನಿ ಹೊಂದಲಿದೆ. ಅಗಷ್ಟ್ ವೇಳೆಗೆ ಸುದ್ದಿವಾಹಿನಿ ಪ್ರಸಾರ ಆರಂಭವಾಗುವ ಸಾಧ್ಯತೆಯಿದ್ದರೂ, ಶುಭ ಮಹೂರ್ತಕ್ಕಾಗಿ ದಸರಾ ಅಥವಾ ದೀಪಾವಳಿಯ ವರೆಗೂ ಕಾಯಲು ರೆಡ್ಡಿಗಳು ಸಿದ್ಧರಾಗಿದ್ದರಂತೆ. ಈ ಸುದ್ದಿವಾಹಿನಿರಾಜ್ಯದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಕನಸಿನ ಕೂಸಾದರೂ, ವಾಹಿನಿಯ ದೈನಂದಿನ ಕೆಲಸದಲ್ಲಿ ಅವರು ತಲೆ ಹಾಕುವುದಿಲ್ಲವಂತೆ. ಅಧಿಕೃತವಾಗಿ ಇನ್ನೂ ಸುದ್ದಿ ಹೊರಬಿದ್ದಿಲ್ಲವಾದ್ದರಿಂದ, ತಾಳ್ಮೆಯಿಂದ ಕಾಯಲೇಬೇಕು.