Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಳಯ ತಡೆಗೆ ಬೃಹತ್ ಬ್ರಹ್ಮಾಂಡ ಬಳಗದಿಂದ ದೀಪೋತ್ಸವ
ಜಗತ್ತು ಪ್ರಳಯದ ಭೀತಿ ಅನುಭವಿಸುತ್ತಿದ್ದು ಇದರಿಂದ ಪಾರಾಗುವ ಸಲುವಾಗಿ ಮಂಗಳವಾರದ(ಫೆ.22) ಶುಭ ದಿವಸದಂದು ಸಂಜೆ 7 ರಿಂದ 7.30 ಗಂಟೆಯವರೆಗೂ ರಾಜ್ಯದಾದ್ಯಂತ ದೀಪೋತ್ಸವ ನೆರವೇರಿಸಿದರೆ ಜಗತ್ತಿಗೆ ಶ್ರೇಯಸ್ಸು ಲಭಿಸಲಿದೆ ಎಂಬ ದೃಷ್ಟಿಯಿಂದ ಈ ಕಾರ್ಯ ನೆರವೇರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಈ ಸಲುವಾಗಿ ಅವರು ಈಗಾಗಲೇ ಅವರು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು ದೀಪೋತ್ಸವ ಕುರಿತಾದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರಮಾಣದ ದೀಪೋತ್ಸವ ನೆರವೇರಲಿದೆ. ಲೋಕ ಕಲ್ಯಾಣದ ದೂರದೃಷ್ಠಿ ಹೊಂದಿರುವ ದೀಪೋತ್ಸವದಲ್ಲಿ ರಾಜ್ಯದ ಜನತೆ ಅಪಾರ ಪ್ರಮಾಣದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಜೀ ಕನ್ನಡದ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನಲ್ಲಿ ದೀಪೋತ್ಸವ ನಡೆಯುವ ಸ್ಥಳಗಳ ವಿವರ ಇಂತಿದೆ. ಶ್ರೀ ಬಂಡಿ ಮಹಾಕಾಳಿ ದೇವಸ್ಥಾನ ಕೆಂಪೇಗೌಡ ನಗರ; ಶ್ರೀ ಮುಕ್ತಿನಾಗ ದೇವಸ್ಥಾನ, ರಾಮೋಹಳ್ಳಿ; ಶ್ರೀ ಗಂಗಮ್ಮ ದೇವಸ್ಥಾನ, ಮಲ್ಲೇಶ್ವರಂ; ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಅಲಸೂರು; ಶ್ರೀ ಬನಶಂಕರಿ ದೇವಸ್ಥಾನ, ಬನಶಂಕರಿ. ಒಟ್ಟು 27 ಜಿಲ್ಲೆಗಳಲ್ಲಿ ದೀಪೋತ್ಸವ ನಡೆಯಲಿದೆ.