Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಂಚನದಿಗಳ ಬೀಡು ಬಿಜಾಪುರದಲ್ಲಿ ನಮ್ಮೂರ ಹಮ್ಮೀರ
ಪ್ರಪ್ರಥಮ ಬಾರಿಗೆ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ವಿನೂತನ ಕಾರ್ಯಕ್ರ 'ನಮ್ಮೂರ ಹಮ್ಮೀರ' ಡಿ.22 ಹಾಗೂ 23ರಂದು ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ರಾಜ್ಯದ ಮೂಲೆ ಮೂಲೆಯಲ್ಲಿರು ಎಲೆ ಮರೆಯ ಕಾಯಿಗಳನ್ನು ಗುರುತಿಸಲಾಗುತ್ತದೆ ಎಂದು ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಸುರೇಶ್ ಭಟ್ ತಿಳಿಸಿದ್ದಾರೆ.
ಈ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಿದ್ದು, ಬಿಜಾಪುರ ಜಿಲ್ಲೆಯಿಂದ ಆರಂಭಿಸಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲಿ ತಿಳಿಸಿದರು. ಪ್ರತಿ ಕಲಾವಿದರೂ ದೊಡ್ಡ ಶಹರಗಳಿಗೆ ತೆರಳಿ ಅವಕಾಶ ಗಿಟ್ಟಿಸಿಕೊಳ್ಳಲಿಕ್ಕಾಗದು. ಇದೇ ಕಾರಣಕ್ಕೆ ನಾವೇ ನಿಮ್ಮೂರಿಗೆ ಬಂದು ಅಂತಹದೊಂದು ವೇದಿಕೆ ಒದಗಿಸಿಕೊಡುತ್ತಿದ್ದೇವೆ ಎಂದು ವಾಹಿನಿ ಹೇಳಿದೆ.
ಡಿ.22ರಂದು ಕಲಾವಿದರ ಮೊದಲನ ಸುತ್ತಿನ ಆಯ್ಕೆ ಬಿಜಾಪುರದ ಮಧುವನ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. ಡಿ.23ರಂದು ಬೆಳಗ್ಗೆಯಿಂದ ಸಂಜೆವರೆಗೆ ಅಂತಿಮ ಸುತ್ತಿನ ಆಯ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿಗಾಗಿ ಹಾಗೂ ಹೆಸರು ನೋಂದಾಯಿಸಿಕೊಳ್ಳಲು ರಾಜು ಪಾಟೀಲ್ (ಮೊ.96322 01534), ರುದ್ರಪ್ಪ ಆಸಂಗಿ (ಮೊ.9341029329), ಸಂಗಮೇಶ ಕಂಬಾರ (ಮೊ.9916116377), ಪ್ರದೀಪ್ ಕುಲಕರ್ಣಿ (ಮೊ.9343112303) ಇವರನ್ನು ಸಂಪರ್ಕಿಸಲು ಸೂಚಿಸಲಾಗಿದೆ. (ಏಜೆನ್ಸೀಸ್)