twitter
    For Quick Alerts
    ALLOW NOTIFICATIONS  
    For Daily Alerts

    ರಂಗನಾಥ್ ಇಲ್ಲದೆ ಪಿಚ್ ಅನಿಸುತ್ತಿದೆ ಸುವರ್ಣ!

    By * ಬಾಬು ಮೋಹನ್, ಕೋಲಾರ
    |

    HR Ranganath
    ಸುವರ್ಣ 24/7 ಸುದ್ದಿ ವಾಹಿನಿ ನೋಡಿದರೆ ಈಗ ಪಿಚ್ ಅನಿಸುವುದಿಲ್ಲವೆ? ರಾಜಕೀಯ ಬಿಕ್ಕಟ್ಟು, ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡುತ್ತಿದ್ದ ಎಚ್ ಆರ್ ರಂಗನಾಥ್ ಇಲ್ಲದೆ ಬಣಬಣ ಎನ್ನುತ್ತಿದೆ. ಅವರು ಸುವರ್ಣ ವಾಹಿನಿಗೆ ಗುಡ್ ಬೈ ಹೇಳಿದ ಮೇಲೆ ಅದ್ಯಾಕೋ ಏನೋ ನ್ಯೂಸ್‍ಗಳು ಸಪ್ಪೆಯಾಗಿವೆ. ರಂಗನಾಥ್ ಅವರ ವೃತ್ತಿಪರತೆ ವೀಕ್ಷಕರಿಗೂ ಇಷ್ಟವಾಗಿತ್ತು.

    ರಂಗನಾಥ್ ಕೊರತೆಯನ್ನು ಹಮೀದ್ ಪಾಳ್ಯ ಹಾಗೂ ಗೌರೀಶ್ ಅಕ್ಕಿ ಅಚ್ಚುಕಟ್ಟಾಗಿ ತುಂಬುತ್ತಿರುವುದು ಎದ್ದು ಕಾಣುತ್ತದೆ. ಆದರೂ ಎಲ್ಲೋ ಒಂದು ಕಡೆ ರಂಗನಾಥ್ ಗೈರುಹಾಜರಿ ಎದ್ದು ಕಾಣುತ್ತಿದೆ. ಅವರಿದ್ದರೆ ಚೆನ್ನಾಗಿತ್ತು ಎಂಬ ಭಾವನೆ ನನ್ನನ್ನು ಕಾಡುತ್ತಿದೆ. ಉಳಿದ ವಾಹಿನಿಗಳ ಪರಿಸ್ಥಿತಿಯೂ ಸುವರ್ಣ ವಾಹಿನಿಗಿಂತಲೂ ಭಿನ್ನವಾಗಿಲ್ಲ. ಅಲ್ಲೂ ಸಂಪಾದಕರು ಹಾಗೂ ಪತ್ರಕರ್ತರ ನಡುವೆ ಸೂಕ್ತ ಸಮನ್ವಯದ ಕೊರತೆ ಕಾಡುತ್ತಿದೆ.

    ಘಟಾನುಘಟಿ ರಾಜಕಾರಣಿಗಳೊಂದಿಗೆ ರಂಗನಾಥ್ ಆತ್ಮವಿಶ್ವಾಸದಿಂದ ಚರ್ಚೆ ನಡೆಸುತ್ತಿದ್ದರು. ರಾಜಕಾರಣಿಗಳಿಂದ ಅಗತ್ಯ ಉತ್ತರಗಳನ್ನು ತೆಗೆಸುವಲ್ಲಿ ಅವರ ವೃತಿಪರತೆ, ಜಾಣ್ಮೆ , ಚಾಕಚಕ್ಯತೆ ಎದ್ದು ಕಾಣುತ್ತಿತ್ತು. ಅದರಲ್ಲೂ ಸಾಂವಿಧಾನಿಕ ಬಿಕ್ಕಟ್ಟು, ರಾಜಕೀಯ ಬಿಕ್ಕಟ್ಟಿನಂತಹ ಪರಿಸ್ಥಿತಿಯಲ್ಲಿ ರಂಗನಾಥ್ ಇಲ್ಲದೆ ಇದ್ದದ್ದು ಸುವರ್ಣ ವಾಹಿನಿಗೆ ದೊಡ್ಡ ನಷ್ಟ ಎಂದೇ ಹೇಳಬೇಕು.

    ಸುದ್ದಿಯ ವಿಶ್ಲೇಷಣೆ, ಖಚಿತ ಮಾಹಿತಿ ನಿರೀಕ್ಷಿಸುತ್ತಿರುವ ಕನ್ನಡ ವೀಕ್ಷಕರೂ ಸಿಎನ್‌ಎನ್ ಐಬಿಎನ್, ಎನ್‌ಡಿಟಿವಿ, ಟೈಮ್ಸ್ ನೌ ಗಳನ್ನು ನೋಡಿ ತಮ್ಮ ಸುದ್ದಿ ದಾಹವನ್ನು ನೀಗಿಸಿಕೊಳ್ಳುವ ಪರಿಸ್ಥಿತಿ ತಲೆದೋರಿದೆ. ರಂಗನಾಥ್ ತರಹದ ನುರಿತ ಕನ್ನಡ ಪತ್ರಕರ್ತರು ಯಾವುದಾದರೂ ಚಾನಲ್‌ಗೆ ಶೀಘ್ರ ಬರಲಿ ಎಂದು ಆಶಿಸುತ್ತೇನೆ. ಅಂದಹಾಗೆ ರಂಗನಾಥ್ ಅವರು ಈಗ ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಎಂಬ ವಿಷಯವಾಗಿ ತಿಳಿಸಬೇಕಾಗಿ ಕೇಳಿಕೊಳ್ಳುತ್ತೇನೆ.

    English summary
    After resignation of HR Ranganath, Kannada news channel Suvarna 24/7 is boring quite a bit. Where is he? what is he doing?
    Tuesday, May 24, 2011, 14:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X