Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನರೇಂದ್ರಬಾಬು ಶರ್ಮ ವಿಶೇಷ ಪ್ರವಚನಕ್ಕೆ ಬ್ರಹ್ಮಾಂಡ ಪ್ರತಿಕ್ರಿಯೆ
ಈ ನಿಟ್ಟಿನಲ್ಲಿ 20ನೇ ಮಾರ್ಚ್ 2011ರ ಭಾನುವಾರ ಬೆಂಗಳೂರಿನ ಜೆ.ಪಿ. ನಗರದಲ್ಲಿ ಆಯೋಜಿಸಲಾಗಿದ್ದ ನರೇಂದ್ರಬಾಬು ಶರ್ಮ ಅವರ ಪ್ರವಚನ ದಿನಾಂಕ 26 ಹಾಗೂ 27ನೇ ಮಾರ್ಚ್ 2011ರ ಶನಿವಾರ ಹಾಗೂ ಭಾನುವಾರದಂದು ಬೆಳಗ್ಗೆ 8.30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.
ಟಿ ವಿ ವಾಹಿನಿಗಳು ಸಾರ್ವಜನಿಕ ಪ್ರವಚನ ಏರ್ಪಡಿಸುವುದು ಕನ್ನಡ ಕಿರುತೆರೆವಾಹಿನಿಯಲ್ಲಿ ಇದೇ ಮೊದನೆಯದಾಗಿದ್ದು ಜೀ ಕನ್ನಡ ಏರ್ಪಡಿಸಿದ್ದ ನರೇಂದ್ರಬಾಬು ಶರ್ಮ ಅವರ ಪ್ರವಚನ ಮಾಲೆಗೆ ಅಭೂತಪೂರ್ವವಾದ ಪ್ರತಿಕ್ರಿಯೆ ದೊರಕಿತ್ತು. ವಿಶ್ವಕಪ್ ಕ್ರಿಕೆಟ್ನ ಜ್ವರದ ನಡುವೆಯೂ ಬೆಂಗಳೂರಿನಂತಹ ರಾಜಧಾನಿಯಲ್ಲಿ 8 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿ ಪಾಲ್ಗೊಂಡಿದ್ದುದು ವಿಶೇಷವಾಗಿತ್ತು.
ತಮ್ಮ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪ್ರವಚನಗಳ ಮೂಲಕ ನರೇಂದ್ರಬಾಬು ಶರ್ಮ ಅವರು ರಾಜ್ಯದ ಜನತೆಯ ಜೀವನಕ್ಕೆ ಉಪಯುಕ್ತವಾದ ವಿಚಾರಗಳನ್ನು ಜೀ ಕನ್ನಡದ ಮೂಲಕ ನಿತ್ಯವೂ ಹಂಚಿಕೊಳ್ಳುತ್ತಿದ್ದು ಅಪಾರ ಜನಪ್ರಿಯತೆಗೆ ಪಾತ್ರರಾಗಿದ್ದಾರೆ. ಇವರ ವಿಚಾರಧಾರೆಗೆ ಮನಸೋತಿರುವ ಭಕ್ತಕೋಟಿ ಇವರನ್ನು ಸಂಪರ್ಕಿಸಲು ನಿತ್ಯವೂ ಪ್ರಯತ್ನಿಸುತ್ತಿರುವುದು ವಾಹಿನಿಯ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ವೀಕ್ಷಕರು ಅವರನ್ನು ನೇರವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ವಿವಿಧ ಪ್ರವಚನ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜೀ ಸೌಥ್ಹೆಡ್ ಡಾ. ಗೌತಮ್ ಮಾಚಯ್ಯ ಹೇಳಿದ್ದಾರೆ. ಇನ್ನು ಮುಂದೆಯೂ ವಾಹಿನಿ ಇಂತಹ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆ ಆಯೋಜಿಸಲಿದೆ ಎಂದು ಜೀ ಕನ್ನಡದ ಪ್ರಕಟಣೆ ತಿಳಿಸಿದೆ.