Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನರೇಂದ್ರಬಾಬು ಶರ್ಮ ವಿಶೇಷ ಪ್ರವಚನಕ್ಕೆ ಬ್ರಹ್ಮಾಂಡ ಪ್ರತಿಕ್ರಿಯೆ
ಈ ನಿಟ್ಟಿನಲ್ಲಿ 20ನೇ ಮಾರ್ಚ್ 2011ರ ಭಾನುವಾರ ಬೆಂಗಳೂರಿನ ಜೆ.ಪಿ. ನಗರದಲ್ಲಿ ಆಯೋಜಿಸಲಾಗಿದ್ದ ನರೇಂದ್ರಬಾಬು ಶರ್ಮ ಅವರ ಪ್ರವಚನ ದಿನಾಂಕ 26 ಹಾಗೂ 27ನೇ ಮಾರ್ಚ್ 2011ರ ಶನಿವಾರ ಹಾಗೂ ಭಾನುವಾರದಂದು ಬೆಳಗ್ಗೆ 8.30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.
ಟಿ ವಿ ವಾಹಿನಿಗಳು ಸಾರ್ವಜನಿಕ ಪ್ರವಚನ ಏರ್ಪಡಿಸುವುದು ಕನ್ನಡ ಕಿರುತೆರೆವಾಹಿನಿಯಲ್ಲಿ ಇದೇ ಮೊದನೆಯದಾಗಿದ್ದು ಜೀ ಕನ್ನಡ ಏರ್ಪಡಿಸಿದ್ದ ನರೇಂದ್ರಬಾಬು ಶರ್ಮ ಅವರ ಪ್ರವಚನ ಮಾಲೆಗೆ ಅಭೂತಪೂರ್ವವಾದ ಪ್ರತಿಕ್ರಿಯೆ ದೊರಕಿತ್ತು. ವಿಶ್ವಕಪ್ ಕ್ರಿಕೆಟ್ನ ಜ್ವರದ ನಡುವೆಯೂ ಬೆಂಗಳೂರಿನಂತಹ ರಾಜಧಾನಿಯಲ್ಲಿ 8 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿ ಪಾಲ್ಗೊಂಡಿದ್ದುದು ವಿಶೇಷವಾಗಿತ್ತು.
ತಮ್ಮ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪ್ರವಚನಗಳ ಮೂಲಕ ನರೇಂದ್ರಬಾಬು ಶರ್ಮ ಅವರು ರಾಜ್ಯದ ಜನತೆಯ ಜೀವನಕ್ಕೆ ಉಪಯುಕ್ತವಾದ ವಿಚಾರಗಳನ್ನು ಜೀ ಕನ್ನಡದ ಮೂಲಕ ನಿತ್ಯವೂ ಹಂಚಿಕೊಳ್ಳುತ್ತಿದ್ದು ಅಪಾರ ಜನಪ್ರಿಯತೆಗೆ ಪಾತ್ರರಾಗಿದ್ದಾರೆ. ಇವರ ವಿಚಾರಧಾರೆಗೆ ಮನಸೋತಿರುವ ಭಕ್ತಕೋಟಿ ಇವರನ್ನು ಸಂಪರ್ಕಿಸಲು ನಿತ್ಯವೂ ಪ್ರಯತ್ನಿಸುತ್ತಿರುವುದು ವಾಹಿನಿಯ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ವೀಕ್ಷಕರು ಅವರನ್ನು ನೇರವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ವಿವಿಧ ಪ್ರವಚನ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜೀ ಸೌಥ್ಹೆಡ್ ಡಾ. ಗೌತಮ್ ಮಾಚಯ್ಯ ಹೇಳಿದ್ದಾರೆ. ಇನ್ನು ಮುಂದೆಯೂ ವಾಹಿನಿ ಇಂತಹ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆ ಆಯೋಜಿಸಲಿದೆ ಎಂದು ಜೀ ಕನ್ನಡದ ಪ್ರಕಟಣೆ ತಿಳಿಸಿದೆ.