Just In
Don't Miss!
- Sports
ಅಜಿಂಕ್ಯ ರಹಾನೆ ಬಳಗಕ್ಕೆ ಕ್ವಾರಂಟೈನ್ ವಿನಾಯಿತಿ ನೀಡಿದ ಮಹಾರಾಷ್ಟ್ರ
- News
ಶಿವಮೊಗ್ಗದಲ್ಲಿ ಭಾರಿ ಸ್ಫೋಟ: ಕಂಪಿಸಿದ ಭೂಮಿ, ಜನತೆಯಲ್ಲಿ ಭಯ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಶ್ರೀಯಿಂದ 'ಬೆಂಗಳೂರು-ಇದು ನಮ್ಮ ಊರು'
ಬೆಂಗಳೂರಿನ ಇತಿಹಾಸ, ಜನಜೀವನ, ಸಂಸ್ಕೃತಿಯ ಬಗ್ಗೆ ಆಳವಾದ ಅಧ್ಯಯನ ನಡೆಸಿರುವ ಇತಿಹಾಸಕಾರ, ಚಿಂತಕ ಸುರೇಶ್ ಮೂನ ಪ್ರಸ್ತುತ ಪಡಿಸುವ ಈ ಕಾರ್ಯಕ್ರಮದಲ್ಲಿ ಆಯಾ ಸ್ಥಳದ ಇತಿಹಾಸ, ಅಲ್ಲಿನ ಸ್ಮಾರಕಗಳು, ತಿಂಡಿ, ತಿನಿಸಿನ ವೈವಿಧ್ಯ, ಅಲ್ಲಿ ನೆಲೆಸಿರುವ ಪ್ರಸಿದ್ಧ ವ್ಯಕ್ತಿಗಳ ಪರಿಚಯ ಸಹಿತ ಹಲವಾರು ಮಾಹಿತಿಗಳು ಇರುತ್ತವೆ. ಜತೆಗೆ ಜನರನ್ನು ತೊಡಗಿಸಿಕೊಳ್ಳುವಂತಹ ರೀತಿಯಲ್ಲಿ ಪ್ರಶ್ನೋತ್ತರಗಳು ಇರಲಿವೆ.
ನಗರದ ಬಗೆಗೆ ಅಭಿಮಾನ ಇರುವವರು ನಗರದ ಪರಂಪರೆ, ಸಂಸ್ಕೃತಿ ರಕ್ಷಣೆಗೆ ಮುಂದಾಗುತ್ತಾರೆ. ಬೆಂಗಳೂರಿನಲ್ಲಿ ಇಂದು ಮೂಲ ನಿವಾಸಿಗಳಿಗಿಂತ ಹೊರಗಿನಿಂದ ಬಂದು ನೆಲೆಸಿದವರೇ ಅಧಿಕ ಮಂದಿ ಇದ್ದಾರೆ. ಬೆಂಗಳೂರಿನ ಬಗ್ಗೆ ತಿಳಿಯದ ಅದೆಷ್ಟೋ ಸಂಗತಿಗಳು ಇದ್ದು ಅದನ್ನು ಕಾರ್ಯಕ್ರಮ ಸರಣಿಯ ಮೂಲಕ ಪರಿಚಯಿಸುವ ಪ್ರಯತ್ನವೇ ಬೆಂಗಳೂರು ಇದು ನಮ್ಮ ಊರು ಕಾರ್ಯಕ್ರಮ ಎನ್ನುತ್ತಾರೆ ಜನಶ್ರೀ ಸುದ್ದಿವಾಹಿನಿ ಮುಖ್ಯಸ್ಥ ಅನಂತ್ ಚಿನಿವಾರ್.
ಹಿಂದಿನ ಮತ್ತು ಇಂದಿನ ಬೆಂಗಳೂರನ್ನು ಜನರಿಗೆ ಪರಿಚಯಿಸುತ್ತಲೇ, ನಾಳಿನ ಬೆಂಗಳೂರು ಹೇಗಿರುತ್ತದೆ ಮತ್ತು ಹೇಗಿರಬೇಕು ಎಂಬುದನ್ನು ಜನರಿಗೆ ಅದರಲ್ಲೂ ಯುವಜನತೆಗೆ ಮನವರಿಕೆ ಮಾಡಿಕೊಡುವುದು ಕಾರ್ಯಕ್ರಮದ ಉದ್ದೇಶ ಮತ್ತು ಮೂಲ ಬೆಂಗಳೂರಿಗರು ಮತ್ತು ಇಲ್ಲಿಗೆ ವಲಸೆ ಬಂದು ಬೆಂಗಳೂರಿಗರಾಗಿರುವವರು ಎಲ್ಲರೂ ಈ ಊರನ್ನು ಪ್ರೀತಿಸುವ ಹಾಗಾಗಬೇಕು. ಈ ಊರಿನ ಬಗ್ಗೆ ಕಾಳಜಿ ತೋರಿಸುವ ಹಾಗಾಗಬೇಕು ಎನ್ನುವುದೂ ಕೂಡ ಕಾರ್ಯಕ್ರಮಗಳ ಆಶಯಗಳಲ್ಲೊಂದು.