Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಯ ಮನದಾಸೆ ತಣಿಸಿದ ರಿಯಲ್ ಸ್ಟಾರ್
ಅಭಿಮಾನಿಯ ಮನದಾಸೆ ತಣಿಸಲು ಜೀ ಕನ್ನಡ ವೇದಿಕೆಗೆ ರಿಯಲ್ಸ್ಟಾರ್ ಉಪೇಂದ್ರಆಗಮಿಸಲಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿರೂಪಿಸುತ್ತಿರುವ ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ 'ನಾನಿರುವುದೆ ನಿಮಗಾಗಿ' ಈಗ ತನ್ನದೇ ಆದ ವಿಶೇಷಗಳೊಂದಿಗೆ ಜನಮನ ಗೆದ್ದಿದೆ.
ಸಂಚಿಕೆಯಿಂದ ಸಂಚಿಕೆಗೆ ಉತ್ತಮ ನೈಜ ಕಥೆಗಳನ್ನು ನೀಡುತ್ತಿರುವ ಕಾರ್ಯಕ್ರಮಕ್ಕೆ ಮತ್ತೋರ್ವ ಕನ್ನಡ ಚಲನಚಿತ್ರ ರಂಗದ ಜನಪ್ರಿಯ ನಾಯಕ ನಟ ಹಾಗೂ ನಿರ್ದೇಶಕ ಉಪೇಂದ್ರ ಅಥಿತಿಯಾಗಿ ಆಗಮಿಸಿದ್ದಾರೆ. ಅದೂ ಅಭಿಮಾನಿಯೊಬ್ಬರ ಮನದಾಸೆಯನ್ನು ತಣಿಸಲು ಎಂಬುದು ವಿಶೇಷ.
ಈ ಕುರಿತ ವಿವರಗಳು ಇದೇ ಮಂಗಳವಾರ(ಸೆ.28) ರಾತ್ರಿ 9 ಗಂಟೆಗೆ ಪ್ರಸಾರವಾಗಲಿರುವ 'ನಾನಿರುವುದೇ ನಿಮಗಾಗಿ' ಕಾರ್ಯಕ್ರಮದಲ್ಲಿ ಭಿತ್ತರಗೊಳ್ಳಲಿವೆ. ಖ್ಯಾತ ನಾಯಕ ನಟ ಶಿವರಾಜ್ಕುಮಾರ್ ಪ್ರಸ್ತುತಪಡಿಸುತ್ತಿರುವ 'ನಾನಿರುವುದೆ ನಿಮಗಾಗಿ' ಕಾರ್ಯಕ್ರಮದಲ್ಲಿ ಸಾಮಾನ್ಯ ಜನರ ಅಪರೂಪದ ಆಸೆಗಳನ್ನು ಈಡೇರಿಸುವ ಪ್ರಯತ್ನವನ್ನು ಜೀ ಕನ್ನಡ ಮಾಡುತ್ತಿದೆ.
ಈ ನಿಟ್ಟಿನಲ್ಲಿ ನಟ ಉಪೇಂದ್ರ ಅವರನ್ನು ತನ್ನ ಆರಾಧ್ಯದೈವವೆಂದೇ ಭಾವಿಸಿ ಅವರ ಭೇಟಿಗಾಗಿ ಹಲವು ವರ್ಷಗಳಿಂದ ಹಂಬಲಿಸುತ್ತಿದ್ದ ಉಪೇಂದ್ರ ಅಭಿಮಾನಿಯ ಆಸೆಯನ್ನು ಈ ಸಂಚಿಕೆಯಲ್ಲಿ ನೆರವೇರಿಸಲಾಗಿದೆ ಎಂದು ಜೀ ಕನ್ನಡ ವ್ಯವಹಾರಗಳ ಮುಖ್ಯಸ್ಥರಾದ ಜೆ. ಶೇಖರ್ ತಿಳಿಸಿದ್ದಾರೆ.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ