Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಗೆ ಅಡಿಯಿಟ್ಟ ಹ್ಯಾಟ್ರಿಕ್ ಹೀರೋ
ಕನ್ನಡ ಚಲನಚಿತ್ರರಂಗದ ಅಗ್ರಗಣ್ಯ ನಾಯಕ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇದೇ ಮೊಟ್ಟ ಮೊದಲ ಬಾರಿಗೆ ಕಿರುತೆರೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರನ್ನು ಬರಮಾಡಿಕೊಳ್ಳುವಲ್ಲಿ ಯಶಸ್ವಿಯಾದ ವಾಹಿನಿ, ಜೀ ಕನ್ನಡ ವಾಹಿನಿ. ಜೀ ಕನ್ನಡದ ಸರಿಗಮಪ ಚಾಲೆಂಜ್ ಸಂಗೀತ ಸಮರಕ್ಕೆ ಹ್ಯಾಟ್ರಿಕ್ ಹೀರೋ ಮುಖ್ಯ ಆಥಿತಿಯಾಗಿ ಆಗಮಿಸಿದ್ದರು.
ಸಂಗೀತಾಧಾರಿತ "ಸರಿಗಮಪ" ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾಗಿದ್ದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಸಾರಥ್ಯದಲ್ಲಿ ಮೂಡಿಬರುತ್ತಿದೆ. ವಿಶೇಷ ಸಂಚಿಕೆಯೊಂದರ ನಿರ್ಮಾಣಕ್ಕೆ ಶಿವರಾಜ್ ಅವರನ್ನು ಆಹ್ವಾನಿಸಲಾಗಿತ್ತು. ಶಿವರಾಜ್ ಕುಮಾರ್ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೂ ಯಾವುದೇ ಕಿರುತೆರೆಯ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಾಗಲಿ ಅಥವಾ ರಿಯಾಲಿಟಿ ಶೋಗಳಲ್ಲಾಗಲಿ ಕಾಣಿಸಿಕೊಂಡಿದ್ದಿಲ್ಲ ಹೀಗಾಗಿ ಇದು ಅವರಿಗೂ ಹೊಸ ಅನುಭವೇ.
ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್ ಸ್ವತಃ ಹಾಡಿ, ನೃತ್ಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕಳೆ ತಂದಿದ್ದಾರೆ. ನಾಯಕ ನಟರಾಗಿ ಬಾರಿ ಜನಪ್ರಿಯತೆಗಳಿಸಿರುವ ಶಿವರಾಜ್ಕುಮಾರ್ ಸ್ವತಃ ಗಾಯಕರಾಗಿಯೂ ಅನೇಕ ಹಾಡುಗಳನ್ನು ಹಾಡಿದ್ದು ತಮ್ಮ ಹಾಡು ಹಾಗೂ ಹಿನ್ನೆಲೆ ಗಾಯನದ ಅನುಭವವನ್ನು ಸರಿಗಮಪದಲ್ಲಿ ಹಂಚಿಕೊಂಡರು.
ಜೊತೆಗೆ ಹಂಸಲೇಖ ಅವರೊಂದಿಗಿನ ಸಂಗೀತ ಹಾಗೂ ಸಾಹಿತ್ಯದ ಒಡನಾಟಗಳನ್ನು ಶಿವಣ್ಣ ಹಂಚಿಕೊಂಡರು. ತಮ್ಮ 23 ವರ್ಷಗಳ ನಟನಾ ಬದುಕಿನ ಆಯ್ದ ಘಟನೆಗಳ ಬಗ್ಗೆ ಶಿವಣ್ಣ ಮನಬಿಚ್ಚಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವರ್ಣರಂಜಿತ ಕಾರ್ಯಕ್ರಮ ಸದ್ಯದಲ್ಲಿಯೇ ಜೀಕನ್ನಡದಲ್ಲಿ ಪ್ರಸಾರ ಕಾಣಲಿದೆ.