Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೋಟ್ಯಾಧಿಪತಿ' ಶೀರ್ಷಿಕೆಯಲ್ಲಿ ವ್ಯಾಕರಣ ದೋಷ
'ಕೋಟ್ಯಾಧಿಪತಿ' ಎಂಬ ಶಬ್ದವನ್ನು ಹುಡುಕಿದರೆ ಯಾವುದೇ ನಿಘಂಟಿನಲ್ಲಿ ಕಾಣಸಿಗುವುದಿಲ್ಲ. 'ಕೋಟಿ' ಮತ್ತು 'ಅಧಿಪತಿ' ಎಂಬ ಎರಡು ಪದಗಳನ್ನು ಕೂಡಿಸಿ ಬರೆದರೆ 'ಕೋಟ್ಯಧಿಪತಿ' ಎಂದಾಗುತ್ತದೆಯೇ ಹೊರತು 'ಕೋಟ್ಯಾಧಿಪತಿ' ಅಲ್ಲ. ಇನ್ನು 'ಕೋಟ್ಯಧಿಪತಿ' ಪದವನ್ನು ಸಂಧಿ ಮಾಡಿದಾಗ ಯಣ್ ಸಂಧಿಯಾಗುತ್ತದೆ.
ಇದಕ್ಕೆ ಇನ್ನೊಂದೆರಡು ಉದಾಹರಣೆಗಳನ್ನೂ ಕೊಡಬಹುದು. ಅತಿ + ಅಂತ್ಯ =ಅತ್ಯಂತ ಹಾಗೆಯೇ ಮನು + ಅಂತರ= ಮನ್ವಂತರ. ಆದರೆ 'ಲಕ್ಷಾಧಿಪತಿ' ಪದವನ್ನು ಬಿಡಿಸಿ ಬರೆದಾಗ ಲಕ್ಷ + ಅಧಿಪತಿ = ಲಕ್ಷಾಧಿಪತಿ (ಸವರ್ಣದೀರ್ಘ ಸಂಧಿ) ಆಗುತ್ತದೆ. ಹಾಗಾಗಿ ಕೋಟ್ಯಂತರ ವೀಕ್ಷಕರು ನೋಡುವ ಕೋಟ್ಯಧಿಪತಿ ಶೀರ್ಷಿಕೆಯಲ್ಲಿನ ವ್ಯಾಕರಣ ದೋಷವನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ವಿನಂತಿ. ನನ್ನ ಅಭಿಪ್ರಾಯದಲ್ಲಿ ಏನಾದರೂ ತಪ್ಪಿದ್ದರೆ ದಯವಿಟ್ಟು ತಿಳಿಸಿ.
ಕನ್ನಡದ ವ್ಯಾಕರಣವನ್ನು ಇಂದು ಮತ್ತೊಮ್ಮೆ ವಿಶದವಾಗಿ ತಿಳಿದುಕೊಳ್ಳಬೇಕಾದ ಅಗತ್ಯ ತುಂಬಾ ಇದೆ. ಏನಂತೀರಾ ಸ್ವಾಮಿ. ನನ್ನ ಈ ವಾದಕ್ಕೆ ಶತಾಯುಷಿಯಾಗುತ್ತಿರುವ ನಡೆದಾಡುವ ನಿಘಂಟು ಎಂದೇ ಖ್ಯಾತರಾಗಿರುವ ಪ್ರೊ. ಜಿ. ವೆಂಕಟಸುಬ್ಬಯ್ಯನವರ ಕೃಪೆ ಇದೆ ಅಂದುಕೊಳ್ಳುತ್ತೇನೆ.