Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೀರ್ ಖಾನ್ ಸತ್ಯಮೇವ ಜಯತೆ ವಿಶೇಷ ಸಂಚಿಕೆ
ಈಗಾಗಲೆ ಅವರು 'ಸತ್ಯಮೇವ ಜಯತೆ' ರಿಯಾಲಿಟಿ ಶೋ ಮಾಡಿದ್ದು ನೆನಪಿರಬಹುದು. ವರದಕ್ಷಿಣೆ ಕಿರುಕುಳ, ಹೆಣ್ಣು ಭ್ರೂಣ ಹತ್ಯೆ, ಭ್ರಷ್ಟಾಚಾರ, ಅನೈತಿಕತೆ, ದೌರ್ಜನ್ಯ, ಮರ್ಯಾದಾ ಹತ್ಯೆ, ಮದ್ಯಪಾನ, ಅಸ್ಪೃಶ್ಯತೆ... ಪ್ರಚಲಿತ ಸಮಸ್ಯೆಗಳ ಮೇಲೆ ಈ ಟಾಕ್ ಶೋ ಅಟ್ಯಾಕ್ ಮಾಡಿತ್ತು. ಸಾಕಷ್ಟು ಚರ್ಚೆ, ವಾದ ವಿವಾದಕ್ಕೆ ವೇದಿಕೆ ಒದಗಿಸಿತ್ತು.
ಈ ಶೋನ ವಿಶೇಷ ಸಂಚಿಕೆ ಆಗಸ್ಟ್ 19ರಂದು ಪ್ರಸಾರವಾಗಲಿವೆ. ಈ ವಿಶೇಷ ಸಂಚಿಕೆಯಲ್ಲಿ ಅಮೀರ್ ತಮ್ಮ ಅಭಿಮಾನಿಗಳೊಂದಿಗೆ ಮುಖಾಮುಖಿಯಾಗಲಿದ್ದಾರೆ. ಶೋನ ಪ್ರತಿ ಸಂಚಿಕೆ ಎಷ್ಟರ ಮಟ್ಟಿಗೆ ಪರಿಣಾಮ ಬೀರಿತು ಎಂಬುದನ್ನು ಖುದ್ದು ಅಮೀರ್ ತಿಳಿಯ ಬಯಸಿದ್ದಾರೆ.
ಈ ಶೋಗೆ ವ್ಯಕ್ತವಾದ ಅಭೂತಪೂರ್ವ ಪ್ರತಿಕ್ರಿಯೆಗೆ ಅಮೀರ್ ಧನ್ಯವಾದಗಳೂ ತಿಳಿಸಲಿದ್ದಾರೆ. ಅವರಿಗೆ ಅಸಂಖ್ಯಾತ ಈ-ಮೇಲ್ ಗಳು, ದೂರವಾಣಿ ಕರೆಗಳು, ಎಸ್ಎಂಎಸ್ ಗಳು, ಪತ್ರಗಳು ರಾಶಿ ರಾಶಿ ಬಂದಿವೆಯಂತೆ. ಎಲ್ಲರದೂ ಒಂದೇ ಅಭಿಪ್ರಾಯ 'ಸೂಪರ್ ಶೋ' ಎಂದು.
ಅಮೀರ್ ಖಾನ್ ಅವರ ಸಾಮಾಜಿಕ ಕಳಕಳಿಗೆ ಅನೇಕ ಸರ್ಕಾರೇತರ ಸಂಸ್ಥೆಗಳು ಅವರೊಂದಿಗೆ ಕೈಜೋಡಿಸಲು ಮುಂದಾಗಿವೆ. ಸತ್ಯಮೇವ ಜಯತೆ ಕಾರ್ಯಕ್ರಮದಿಂದ ರು.8 ಕೋಟಿ ನಿಧಿ ಸಂಗ್ರಹವಾಗಿದೆ. ಅಮೀರ್ ಖಾನ್ ಸಾಮಾಜಿಕ ಕಾಳಜಿಗೆ ಆನೆಬಲ ಬಂದಂತಾಗಿದೆ.
'ಸತ್ಯಮೇವ ಜಯತೆ'ಯ ವಿಶೇಷ ಸಂಚಿಕೆಗೆ 'ಸತ್ಯಮೇವ ಜಯತೇ ಕಾ ಸಫರ್' ಎಂದು ಹೆಸರಿಡಲಾಗಿದೆ. ಸ್ಟಾರ್ ಪ್ಲಸ್ ಹಾಗೂ ಡಿಡಿ 1 ವಾಹಿನಿಗಳಲ್ಲಿ ಆಗಸ್ಟ್ 19ರ ಬೆಳಗ್ಗೆ 11 ಗಂಟೆಗೆ ಈ ವಿಶೇಷ ಸಂಚಿಕೆಯನ್ನು ಕಣ್ಣು ತುಂಬಿಕೊಳ್ಳಬಹುದು. (ಏಜೆನ್ಸೀಸ್)