Don't Miss!
- Automobiles 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಳ್ಳಿಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸುತ್ತಿರುವ ನಟ ಹರೀಶ್
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ಹಲವರು ಹಲವು ಬಗೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕಿರುತೆರೆ ನಟರೂ ಸಹ ತಮ್ಮ ಕೈಲಾದ ಮಟ್ಟಿಗೆ ಸೇವೆಯಲ್ಲಿ ನಿರತರಾಗಿದ್ದಾರೆ.
'ಮಂಗಳ ಗೌರಿ', 'ಪುಟ್ಟಗೌರಿ ಮದುವೆ', 'ಅರಮನೆ' ಧಾರಾವಾಹಿಗಳಲ್ಲಿ ನಟಿಸಿರುವ ಸಿಜಿ ಹರೀಶ್ ಗೌಡ ಅವರು ಮಾಲೂರು ಸಮೀಪದ ಹಳ್ಳಿಗಳಿಗೆ ತೆರಳಿ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯ ಮಾಡುತ್ತಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಹರೀಶ್, 'ಮಾಲೂರು ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಕ್ಕೂರು ಹೋಬಳಿಯ ಲಕ್ಕೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಕ್ಕೂರು ಗ್ರಾಮದ 1.2.3.4. ಬ್ಲಾಕ್ ಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತುಸ್ಯಾನಿಟೈಸರ್ ಸಿಂಪಡನೆ ಮಾಡಲಾಯಿತು ಹಾಗೂ ಜನರಿಗೆ ಮಾಸ್ಕ್ ಧರಿಸಿ ಮನೆಯಲ್ಲಿ ಸುರಕ್ಷಿತವಾಗಿರಿ ಯೆಂದು ಅರಿವು ಮೂಡಿಸಲಾಯಿತು' ಎಂದಿದ್ದಾರೆ.
ಹರೀಶ್, ತಮ್ಮದೇ ಆದ ತಂಡವೊಂದನ್ನು ಕಟ್ಟಿಕೊಂಡು ಹಳ್ಳಿಗಳಿಗೆ ತೆರಳಿ ಬೀದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡುತ್ತಿದ್ದಾರೆ.
ಹಳ್ಳಿಗಳಲ್ಲಿ ಕೊರೊನಾ ಬಗ್ಗೆ ಜಾಗೃತೆ ಕಡಿಮೆ ಇದೆ. ಹೀಗಾಗಿ ಕೊರೊನಾ ಪಾಸಿಟಿವ್ ಬಂದವರಿಗೆ ಕೊರೊನಾ ಸೆಂಟರ್ಗಳಿಗೆ ಹೋಗಿ ಚಿಕಿತ್ಸೆ ಪಡೆಯಿರಿ ಎಂದು ಅರಿವು ಮೂಡಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರಿಗೆ ಫುಡ್ ಕಿಟ್, ಮಾಸ್ಕ್, ಫೇಸ್ಶೀಲ್ಡ್ ವಿತರಣೆ ಮಾಡುತ್ತಿದ್ದೇವೆ. ಕೊರೊನಾ ವೈರಸ್ ರೋಗಿಗಳಿಗೂ ಕೂಡ ಚಿಕಿತ್ಸೆ ಪಡೆಯಲು ಸಹಾಯ ಮಾಡುತ್ತಿದ್ದೇವೆ" ಎಂದಿದ್ದಾರೆ ಹರೀಶ್.
ಕವಿರಾಜ್, ನೀತು ಶೆಟ್ಟಿ, ಸಾಧು ಕೋಕಿಲ, ಉಪೇಂದ್ರ, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಪ್ಪ ಇನ್ನೂ ಹಲವಾರು ಮಂದಿ ನಟ-ನಟಿಯರು ಕೊರೊನಾ ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಿನ ಹಸ್ತ ಚಾಚುತ್ತಿದ್ದಾರೆ.