Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಧಿಪತಿ' ಇಂದಿನ ಸಂಚಿಕೆಯಲ್ಲಿ 'ಗೋಲ್ಡನ್ ಸ್ಟಾರ್'
ಸ್ಟಾರ್ ಸುವರ್ಣ ಟಿವಿಯಲ್ಲಿ ಪ್ರಸಾರವಾಗುತ್ತಿರುವ 'ಕನ್ನಡದ ಕೋಟ್ಯಧಿಪತಿ' ಮೂರನೇ ಆವೃತ್ತಿಯಲ್ಲಿ ಇಷ್ಟುದ ದಿನ ಜನ ಸಾಮಾನ್ಯರು ಭಾಗವಹಿಸಿದ್ದರು. ಇದೀಗ, ಮೊದಲ ಈ ಸೆಲೆಬ್ರಿಟಿಯೊಬ್ಬರು ಸ್ಪರ್ಧಿಯಾಗಲಿದ್ದಾರೆ.
ಈ ಆವೃತ್ತಿಯ ಮೊದಲ ಸೆಲೆಬ್ರಿಟಿಯಾಗಿ ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಿದ್ದಾರೆ. ಈ ಎಪಿಸೋಡ್ ಇಂದು ರಾತ್ರಿ ಪ್ರಸಾರವಾಗಲಿದೆ.
ಈ ಹಿಂದಿನ ಆವೃತ್ತಿಗಳಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ನಟಿ ರಮ್ಯಾ, ಲಕ್ಷ್ಮಿ, ಪ್ರಭುದೇವ, ಅನಿಲ್ ಕುಂಬ್ಳೆ, ಸೃಜನ್ ಲೋಕೇಶ್, ಉಪೇಂದ್ರ, ಜಗ್ಗೇಶ್, ರಾಧಿಕಾ ಪಂಡಿತ್, ಸಿಹಿ ಕಹಿ ಚಂದ್ರು, ಅಕುಲ್ ಬಾಲಾಜಿ, ಸೇರಿದಂತೆ ಹಲವು ಕಿರುತೆರೆ ಕಲಾವಿದರು ಕೂಡ ಹಾಟ್ ಸೀಟ್ ನಲ್ಲಿ ಕೂತಿದ್ದರು.
ಇದುವರೆಗೂ ಕನ್ನಡದ ಕೋಟ್ಯಧಿಪತಿಯಲ್ಲಿ ಅತಿ ಹೆಚ್ಚು ಹಣ ಗೆದ್ದಿರುವುದು ಪ್ರಭುದೇವ ಮತ್ತು ಅನಿಲ್ ಕುಂಬ್ಳೆ. ತಲಾ ಇಬ್ಬರು 25 ಲಕ್ಷ ಬಹುಮಾನ ಗೆದ್ದಿದ್ದಾರೆ.
ಸಾಮಾನ್ಯವಾಗಿ ಸಿನಿತಾರೆಯರು ಭಾಗವಹಿಸಿದ್ರೆ, ಕಷ್ಟದಲ್ಲಿರುವ ವ್ಯಕ್ತಿಗಳಿಗಾಗಿ ಅಥವಾ ಸಮುದಾಯಗಳಿಗಾಗಿ ಗೆದ್ದ ಬಹುಮಾನವನ್ನ ನೀಡುತ್ತಾರೆ. ಬಹುಶಃ ಗಣೇಶ್ ಅವರು ಯಾವ ಉತ್ತಮ ಕೆಲಸಕ್ಕೆ ಈ ಹಣವನ್ನ ಗಳಿಸುತ್ತಾರೋ ಕಾದುನೋಡಬೇಕಿದೆ.