Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಿಳೆ ಮೇಲೆ ಹಲ್ಲೆ ಮಾಡಿ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಧಾರಾವಾಹಿ ನಟನ ಬಂಧನ
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿ ಬ್ಯಾಗ್ ಕದ್ದು ಪರಾರಿಯಾಗಿತ್ತಿದ್ದ ಖ್ಯಾತ ಧಾರಾವಾಹಿ ನಟನನ್ನು ಮುಂಬೈನ ಮಾಣಿಕ್ಪುರ ಪೊಲೀಸರು ಬಂಧಿಸಿದ್ದಾರೆ. ಬಂಧನದ ನಂತರ ಈತ ಖ್ಯಾತ ಧಾರಾವಾಹಿ ನಟ ಮತ್ತು ನಿರ್ದೇಶಕ ಪುನೀತ್ ಸಿಂಗ್ ಎನ್ನುವುದು ಗೊತ್ತಾಗಿದೆ.
Recommended Video
ಮುಂಬೈನ ವಾಸೈ ನಗರದಲ್ಲಿ ಈ ಘಟನೆ ನಡೆದಿದೆ. ನಿನ್ನೆ(ಮಾರ್ಚ್ 20) ಸಂಜೆ ಅರುಣಾ ನಾಯರ್ ಎನ್ನುವ ಮಹಿಳೆ ಇಬ್ಬರು ಮಕ್ಕಳು ಮತ್ತು ಸ್ನೇಹಿತೆಯರ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬೈಕ್ ನಲ್ಲಿ ಬಂದ ಪುನೀತ್ ಸಿಂಗ್ ಅರಣಾ ನಾಯರ್ ಬ್ಯಾಗ್ ಅನ್ನು ಎಳೆದಿದ್ದಾನೆ.
ಟಿ.ಎನ್. ಸೀತಾರಾಮ್ ಹಂಚಿಕೊಂಡ ತಾಯಿಯೊಬ್ಬಳ ಹೃದಯಕಲಕುವ ಪತ್ರ
ಅರುಣಾ ಬ್ಯಾಗ್ ಅನ್ನು ಕೈಗೆ ಹಾಕಿಕೊಂಡಿದ್ದರಿಂದ ಬ್ಯಾಗ್ ಎಳೆದ ತಕ್ಷಣ ಬಂದಿಲ್ಲ. ಬ್ಯಾಗ್ ಜೊತೆಯೆ ಮಹಿಳೆಯನ್ನು ರಸ್ತೆಯಲ್ಲಿಯೆ ಒಂದಿಷ್ಟು ದೂರ ಎಳೆದುಕೊಂಡು ಹೋಗಿದ್ದಾನೆ. ರಸ್ತೆಯಲ್ಲಿ ಎಳೆದಾಡಿದ ಹಿನ್ನಲೆ ಮಹಿಳೆಗೆ ತ್ರೀವ ಗಾಯಾವಾಗಿದ್ದು ಹಲ್ಲು ಮುರಿದುಹೋಗಿವೆ ಎಂದು ಹೇಳಲಾಗುತ್ತಿದೆ. ಸದ್ಯ ಆಕೆಯನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗಿತ್ತಿದೆ.
ಪುನೀತ್ ಸಿಂಗ್ ಬ್ಯಾಗ್ ಅನ್ನು ಕದ್ದು ಪರಾರಿಯಾಗುತ್ತಿದ್ದಂತೆ ಸ್ಥಳಿಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ ಆತ ಧಾರಾವಾಹಿ ಕಲಾವಿದ ಮತ್ತು ನಿರ್ದೇಶಕ ಎನ್ನುವುದು ಗೊತ್ತಾಗಿದೆ. ಆತ ನಿರ್ದೇಶನ ಮಾಡಿರುವ ಸಿನಿಮಾ ಇನ್ನು ರಿಲೀಸ್ ಆಗಿಲ್ಲವಂತೆ. ಈತ ಸಾಕಷ್ಟು ಕ್ರೈಂ ಆಧಾರಿತ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದಾನಂತೆ.