Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಕನ್ನಡ-4': ತುಪ್ಪದ ಬೆಡಗಿ ರಾಗಿಣಿ ಕೊಟ್ಟ ಸ್ಪಷ್ಟನೆ ಏನು?
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ನಾಲ್ಕನೇ ಆವೃತ್ತಿ ಶುರು ಆಗಲು ಕೆಲವೇ ದಿನಗಳು ಬಾಕಿ ಉಳಿದಿವೆ.
ಅಕ್ಟೋಬರ್ 9, 2016 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ-4'ಗೆ ಅದ್ಧೂರಿ ಚಾಲನೆ ಸಿಗಲಿದೆ. ಕಾರ್ಯಕ್ರಮದಲ್ಲಿ ಯಾರ್ಯಾರು ಸ್ಪರ್ಧಿಗಳಾಗಿ ರೆಡ್ ಕಾರ್ಪೆಟ್ ತುಳಿದು 'ಬಿಗ್' ಮನೆ ಪ್ರವೇಶಿಸುತ್ತಾರೆ ಎಂಬ ಚರ್ಚೆ ಈಗಾಗಲೇ ಆರಂಭಗೊಂಡಿದೆ. [ಬಿಗ್ ಬಾಸ್ ಕನ್ನಡ 4: 5 ಮಂದಿ ಸ್ಪರ್ಧಿಗಳ ಹೆಸರು ಬಹಿರಂಗ!]
'ಬಿಗ್ ಬಾಸ್ ಕನ್ನಡ-4' ಸ್ಪರ್ಧಿಗಳ ಪಟ್ಟಿಯಲ್ಲಿ ನಟಿ ರಾಗಿಣಿ ದ್ವಿವೇದಿ ಹೆಸರೂ ಕೂಡ ಕೇಳಿಬಂದಿತ್ತು. ಹಾಗಾದ್ರೆ, ತುಪ್ಪದ ಬೆಡಗಿ 'ಬಿಗ್' ಮನೆ ಗೃಹ ಪ್ರವೇಶ ಮಾಡುತ್ತಾರಾ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ಓದಿ....
ಬಾಯ್ಬಿಟ್ಟಿದ್ದಾರೆ ನಟಿ ರಾಗಿಣಿ ದ್ವಿವೇದಿ.!
'ಬಿಗ್ ಬಾಸ್ ಕನ್ನಡ-4' ರಿಯಾಲಿಟಿ ಶೋನಲ್ಲಿ ''ನಾನು ಭಾಗವಹಿಸುತ್ತಿಲ್ಲ'' ಅಂತ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆ. [ಓಹೋ....'ಬಿಗ್ ಬಾಸ್ ಕನ್ನಡ-4' ನಲ್ಲಿ 'ಇವರೆಲ್ಲಾ' ಇರ್ತಾರಂತೆ ಸ್ವಾಮಿ.!]
ಕಾರಣ ಏನು?
''ನಾನೀಗ ತುಂಬಿ ಬಿಜಿಯಾಗಿದ್ದೇನೆ. ನನ್ನ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಹೀಗಾಗಿ, ಎಲ್ಲವನ್ನೂ ಬಿಟ್ಟು 'ಬಿಗ್ ಬಾಸ್ ಕನ್ನಡ-4'ನಲ್ಲಿ ಭಾಗವಹಿಸಲು ಸಾಧ್ಯವಿಲ್ಲ'' ಎಂದಿದ್ದಾರೆ ನಟಿ ರಾಗಿಣಿ ದ್ವಿವೇದಿ. ['ನಾವ್ ಹೋಗಲ್ಲ ಸ್ವಾಮಿ': 'ಬಿಗ್ ಬಾಸ್' ಮನೆಯ ರೂಲ್ಸ್ ಇರುವುದೇ ಹೀಗೆ.!]
ರಾಗಿಣಿ ಕೈಯಲ್ಲಿ ಎಷ್ಟು ಸಿನಿಮಾಗಳಿವೆ?
ನಿರ್ದೇಶಕ 'ಜೋಗಿ' ಪ್ರೇಮ್ ನಾಯಕರಾಗಿ ಅಭಿನಯಿಸುತ್ತಿರುವ 'ಗಾಂಧಿಗಿರಿ' ಚಿತ್ರದಲ್ಲಿ ನಾಯಕಿ ಆಗಿ ರಾಗಿಣಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಎರಡ್ಮೂರು ಚಿತ್ರಗಳು ರಾಗಿಣಿ ಕೈಯಲ್ಲಿವೆ.
ಹಾಗಾದ್ರೆ, 'ಬಿಗ್' ಮನೆಗೆ ಹೋಗುವವರು ಯಾರು?
ಕಲರ್ಸ್ ಕನ್ನಡ ವಾಹಿನಿ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ನಿರೂಪಕಿ/ನಟಿ ಶೀತಲ್ ಶೆಟ್ಟಿ, ಫೇಸ್ ಬುಕ್ ಸ್ಟಾರ್ ಕಿರಿಕ್ ಕೀರ್ತಿ, 'ಒಗ್ಗರಣೆ ಡಬ್ಬಿ' ಖ್ಯಾತಿಯ ಮುರಳಿ, ನಟ ನವೀನ್ ಕೃಷ್ಣ, ನಿರೂಪಕ ನಿರಂಜನ್ ಈ ಬಾರಿ 'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಸ್ಪರ್ಧಿಗಳಾಗುವ ಸಾಧ್ಯತೆ ಇದೆ.
'ಇವರಿಗೆ' ಡಿಮ್ಯಾಂಡ್ ಇದೆ
'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮದಲ್ಲಿ 'ತಿಥಿ' ಚಿತ್ರ ಖ್ಯಾತಿಯ ಗಡ್ಡಪ್ಪ, ಹುಚ್ಚ ವೆಂಕಟ್ ಹಾಗೂ ತುಳು ಚಿತ್ರರಂಗದ ತಾರೆ ನವೀನ್ ಪಡೀಲ್ ಭಾಗವಹಿಸಬೇಕು ಎಂಬುದು ವೀಕ್ಷಕರ ಒತ್ತಾಯ.