Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಗ್ನಿಸಾಕ್ಷಿ'ಯಲ್ಲಿ ಹೆಬ್ಬುಲಿ : ಲವರ್ ಬಾಯ್ ಸಿದ್ಧಾರ್ಥ್ ಈಗ ಆಕ್ಷನ್ ಹೀರೋ !
Recommended Video
ಧಾರಾವಾಹಿ ಅಂತ ಹೇಳಿದ ತಕ್ಷಣ ಬರೀ ಅಳು... ಬರೀ ಗೋಳು... ಎನ್ನುವ ಭಾವನೆ ಎಲ್ಲರಲ್ಲಿಯೂ ಬಂದು ಬಿಡುತ್ತದೆ. ಆದರೆ ಈಗೀಗ ಧಾರಾವಾಹಿಗಳು ಸಹ ಬದಲಾಗುತ್ತಿದೆ. ಸೀರಿಯಲ್ ಗಳು ಕೂಡ ಕಮರ್ಶಿಯಲ್ ರೂಪವನ್ನು ಪಡೆದುಕೊಳ್ಳುತ್ತಿವೆ.
ಸದ್ಯ 'ಅಗ್ನಿಸಾಕ್ಷಿ' ಸೀರಿಯಲ್ ನಲ್ಲಿ ಮೊದಲ ಬಾರಿಗೆ ಒಂದು ಬದಲಾವಣೆ ಆಗಿದೆ. ಈ ಧಾರಾವಾಹಿಯಲ್ಲಿ ಫಸ್ಟ್ ಟೈಂ ಆಕ್ಷನ್ ಸನ್ನಿವೇಶ ಬಂದು ಬಿಟ್ಟಿದೆ. ಇಷ್ಟು ದಿನ ಲವರ್ ಬಾಯ್ ಮತ್ತು ಚಾಕಲೇಟ್ ಹೀರೋ ಆಗಿದ್ದ ಸಿದ್ಧಾರ್ಥ್ ಈಗ ಆಕ್ಷನ್ ಸ್ಟಾರ್ ಆಗಿದ್ದಾರೆ. ಮುಂದೆ ಓದಿ...
ಸಿದ್ಧಾರ್ಥ್ ಸಾಹಸ
'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಮೊಟ್ಟ ಮೊದಲ ಬಾರಿಗೆ ಸಾಹಸ ದೃಶ್ಯ ಬಂದಿದೆ. ನಟ ಸಿದ್ಧಾರ್ಥ್ ಇಲ್ಲಿ 'ಹೆಬ್ಬುಲಿ' ಚಿತ್ರದ ಮ್ಯೂಸಿಕ್ ನೊಂದಿಗೆ ಸಖತ್ ಆಗಿ ಆಕ್ಷನ್ ಮಾಡಿದ್ದಾರೆ.
ಯಾವ ಸಿನಿಮಾಗೂ ಕಡಿಮೆ ಇಲ್ಲ
ಮೊದಲ ಬಾರಿ ಆಕ್ಷನ್ ಮಾಡಿದರೂ ಕೂಡ ಸಿದ್ಧಾರ್ಥ್ ಸೂಪರ್ ಆಗಿ ಅದನ್ನು ನಿಭಾಯಿಸಿದ್ದಾರೆ. ಯಾವ ಆಕ್ಷನ್ ಚಿತ್ರಕ್ಕೂ ಕಡಿಮೆ ಇಲ್ಲದ ರೀತಿ ಈ ದೃಶ್ಯದ ಶೂಟಿಂಗ್ ಮಾಡಲಾಗಿದೆ.
ಖುಷಿ ಕಾಪಾಡಲು...
ಚಿಕ್ಕ ಮಕ್ಕಳಾದ ಆಯುಷಿ ಮತ್ತು ಖುಷಿ ಕಾಣಿಯಾಗಿದ್ದು, ಈ ಪೈಕಿ ಖುಷಿ ದುಷ್ಟರ ಕೈ ನಲ್ಲಿ ಸೆರೆಯಾಗಿರುತ್ತಾಳೆ. ಖುಷಿಯನ್ನು ಕಾಪಾಡಲು ಸಿದ್ಧಾರ್ಥ್ ಈ ರೀತಿಯ ಸಾಹಸ ಮಾಡಿದ್ದಾರೆ.
ಪೋಲೀಸ್ ಹುಡುಕುತ್ತಿದ್ದರು
ಆಯುಷಿ ಕಾಣೆಯಾಗಿರುವ ವಿಷಯ ತಿಳಿದ ಸಿದ್ಧಾರ್ಥ್ ಪೊಲೀಸ್ ತನಿಖೆ ಮಾಡಿ ಹುಡುಕುವ ಮುನ್ನವೇ ಮಗುವನ್ನು ರಕ್ಷಣೆ ಮಾಡಿದ್ದಾರೆ.
'ಅಗ್ನಿಸಾಕ್ಷಿ'ಯಲ್ಲಿ ರೋಚಕ ಟ್ವಿಸ್ಟ್: ತಾಯಿಯ ಕೈ ಸೇರಿದ ಆಯುಷಿ.!
ಬದಲಾದ ಮಕ್ಕಳು
ಸದ್ಯ ಧಾರಾವಾಹಿಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅತ್ತ ಆರುಷಿ ತಾಯಿ ರಾಧಿಕಾ ಕೈ ಸೇರಿದ್ರೆ, ಇತ್ತ ಖುಷಿ ಸನ್ನಿಧಿ ಹತ್ತಿರ ಬಂದಿದ್ದಾಳೆ.
ರಚಿತಾ ರಾಮ್ 'ಕಾಮಿಡಿ ಟಾಕೀಸ್' ಡಬ್ಬಾ, ಡುಬಾಕ್ ಪ್ರೋಗ್ರಾಂ ಅಂತೆ.!
ಸತ್ಯ ತಿಳಿಯುತ್ತದೆಯಾ..?
ಸದ್ಯ ಆರುಷಿ ಬದಲು ಖುಷಿ, ಸನ್ನಿಧಿ ಪಾಲಾಗಿದ್ದಾಳೆ. ಖುಷಿ ಮೂಲಕ ರಾಧಿಕಾ ವಿಷಯ ಸನ್ನಿಧಿಗೆ ತಿಳಿಯುತ್ತದೆಯಾ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ.
ಸೃಜಾ ಕೊಟ್ಟ ಮಜಾ ಸುದ್ದಿ; 'ಮಜಾ ಟಾಕೀಸ್'ಗೆ ಮತ್ತೆ ಚಾಲನೆ.!
ಚಂದ್ರಿಕಾ ಸಂಚು
ಸನ್ನಿಧಿ ಬಳಿ ಖುಷಿ ಬಂದಿದ್ದರೂ ಕೂಡ ಮತ್ತೆ ಚಂದ್ರಿಕಾ ಸಂಚು ಮಾಡಿ ಆ ಮಗುವನ್ನು ದೂರ ಮಾಡಬಹುದಾ ಎನ್ನುವ ಪ್ರಶ್ನೆ ಕೂಡ ಇದೆ. ಯಾಕಂದ್ರೆ, ಖುಷಿ ತನ್ನ ತಾಯಿ ರಾಧಿಕ ವಿಷಯ ಹೇಳಿದರೆ ಧಾರಾವಾಹಿಯಲ್ಲಿ ಮುಂದೆ ಸ್ವಾರಸ್ಯವೇ ಇರುವುದಿಲ್ಲ.