Don't Miss!
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಗ್ನಿಸಾಕ್ಷಿ' ಸನ್ನಿಧಿ ಜೊತೆಗಿನ ಗಾಸಿಪ್ ಬಗ್ಗೆ ವಿಜಯ್ ಸೂರ್ಯ ಏನಂತಾರೆ.?
Recommended Video
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಸನ್ನಿಧಿ (ವೈಷ್ಣವಿ) ಹಾಗೂ ಸಿದ್ಧಾರ್ಥ್ (ವಿಜಯ್ ಸೂರ್ಯ) ಹೇಗಿದ್ದಾರೋ, ಹಾಗೆ ನಿಜ ಜೀವನದಲ್ಲೂ ವೈಷ್ಣವಿ ಹಾಗೂ ವಿಜಯ್ ಸೂರ್ಯ ಪ್ರಣಯ ಪಕ್ಷಿಗಳು. ಇಬ್ಬರೂ ಲವ್ ಮಾಡುತ್ತಿದ್ದಾರೆ. ಸದ್ಯದಲ್ಲೇ ಮದುವೆ ಆಗ್ತಾರೆ ಎಂಬ ಗುಸು ಗುಸು ಆಗಾಗ ಕೇಳಿಬಂದಿತ್ತು.
''ನಾವಿಬ್ಬರು ಜಸ್ಟ್ ಫ್ರೆಂಡ್ಸ್, ನಮ್ಮಿಬ್ಬರ ನಡುವೆ ಗೆಳೆತನ ಬಿಟ್ಟು ಬೇರೆ ಏನೂ ಇಲ್ಲ'' ಅಂತ ವೈಷ್ಣವಿ ಸ್ಪಷ್ಟನೆ ಕೊಟ್ಟಿದ್ದರು. ಈಗ ನಟ ವಿಜಯ್ ಸೂರ್ಯ ಕೂಡ ಅದನ್ನೇ ಹೇಳಿದ್ದಾರೆ.
''ವೈಷ್ಣವಿ ಹಾಗೂ ನನ್ನ ನಡುವೆ ಏನಿಲ್ಲ. ನಾನಿನ್ನೂ ಸಿಂಗಲ್. ಗಾಸಿಪ್ ಕೇಳಿ ಕೇಳಿ ಅಭ್ಯಾಸ ಆಗ್ಬಿಟ್ಟಿದೆ'' ಅಂತ ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ವಿಜಯ್ ಸೂರ್ಯ ಹೇಳಿದ್ದಾರೆ.
''ಸನ್ನಿಧಿ ಜೊತೆ ಎಲ್ಲ ತರಹ ಗಾಸಿಪ್ ಬಂದುಬಿಟ್ಟಿದೆ. ನಾವು ಮದುವೆ ಆಗಿದ್ದೇವೆ, ನಮಗೆ ಮಕ್ಕಳು ಇದ್ದಾರೆ ಅಂತ ಮಾತನಾಡಿಕೊಳ್ತಾರೆ. ಗಾಸಿಪ್ ಕೇಳಿ ಕೇಳಿ ಅಭ್ಯಾಸ ಆಗ್ಬಿಟ್ಟಿದೆ. ನನ್ನನ್ನ ಮದುವೆ ಆಗುವವಳು ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು'' ಎಂದಿದ್ದಾರೆ ವಿಜಯ್ ಸೂರ್ಯ.