Don't Miss!
- News Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಗ್ನಿಸಾಕ್ಷಿ' ಸನ್ನಿಧಿ ಜೊತೆಗಿನ ಗಾಸಿಪ್ ಬಗ್ಗೆ ವಿಜಯ್ ಸೂರ್ಯ ಏನಂತಾರೆ.?
Recommended Video
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಸನ್ನಿಧಿ (ವೈಷ್ಣವಿ) ಹಾಗೂ ಸಿದ್ಧಾರ್ಥ್ (ವಿಜಯ್ ಸೂರ್ಯ) ಹೇಗಿದ್ದಾರೋ, ಹಾಗೆ ನಿಜ ಜೀವನದಲ್ಲೂ ವೈಷ್ಣವಿ ಹಾಗೂ ವಿಜಯ್ ಸೂರ್ಯ ಪ್ರಣಯ ಪಕ್ಷಿಗಳು. ಇಬ್ಬರೂ ಲವ್ ಮಾಡುತ್ತಿದ್ದಾರೆ. ಸದ್ಯದಲ್ಲೇ ಮದುವೆ ಆಗ್ತಾರೆ ಎಂಬ ಗುಸು ಗುಸು ಆಗಾಗ ಕೇಳಿಬಂದಿತ್ತು.
''ನಾವಿಬ್ಬರು ಜಸ್ಟ್ ಫ್ರೆಂಡ್ಸ್, ನಮ್ಮಿಬ್ಬರ ನಡುವೆ ಗೆಳೆತನ ಬಿಟ್ಟು ಬೇರೆ ಏನೂ ಇಲ್ಲ'' ಅಂತ ವೈಷ್ಣವಿ ಸ್ಪಷ್ಟನೆ ಕೊಟ್ಟಿದ್ದರು. ಈಗ ನಟ ವಿಜಯ್ ಸೂರ್ಯ ಕೂಡ ಅದನ್ನೇ ಹೇಳಿದ್ದಾರೆ.
''ವೈಷ್ಣವಿ ಹಾಗೂ ನನ್ನ ನಡುವೆ ಏನಿಲ್ಲ. ನಾನಿನ್ನೂ ಸಿಂಗಲ್. ಗಾಸಿಪ್ ಕೇಳಿ ಕೇಳಿ ಅಭ್ಯಾಸ ಆಗ್ಬಿಟ್ಟಿದೆ'' ಅಂತ ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ವಿಜಯ್ ಸೂರ್ಯ ಹೇಳಿದ್ದಾರೆ.
''ಸನ್ನಿಧಿ ಜೊತೆ ಎಲ್ಲ ತರಹ ಗಾಸಿಪ್ ಬಂದುಬಿಟ್ಟಿದೆ. ನಾವು ಮದುವೆ ಆಗಿದ್ದೇವೆ, ನಮಗೆ ಮಕ್ಕಳು ಇದ್ದಾರೆ ಅಂತ ಮಾತನಾಡಿಕೊಳ್ತಾರೆ. ಗಾಸಿಪ್ ಕೇಳಿ ಕೇಳಿ ಅಭ್ಯಾಸ ಆಗ್ಬಿಟ್ಟಿದೆ. ನನ್ನನ್ನ ಮದುವೆ ಆಗುವವಳು ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು'' ಎಂದಿದ್ದಾರೆ ವಿಜಯ್ ಸೂರ್ಯ.