Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜೀ ಕನ್ನಡ' ವಾಹಿನಿಯ 'ಮಹರ್ಷಿವಾಣಿ'ಗೆ 2 ವರ್ಷಗಳ ಸಂಭ್ರಮ
ಬೆಳಗ್ಗೆ 8 ಗಂಟೆಯಿಂದ 9.30 ವರೆಗೆ ವಾರದ ಏಳು ದಿನಗಳು ಪ್ರಸಾರವಾಗುವ 'ಮಹರ್ಷಿವಾಣಿ' ಕಾರ್ಯಕ್ರಮಕ್ಕೆ ಈಗ ಎರಡು ವರ್ಷ ತುಂಬಿದ ಸಂಭ್ರಮ. ಡಾ.ಆನಂದ ಗುರೂಜಿ ನಡೆಸಿಕೊಡುತ್ತಿರುವ ಈ ಜನಪ್ರಿಯ ಕಾರ್ಯಕ್ರಮ ಜೀ ಕನ್ನಡ ವಾಹಿನಿಯ ಟಿ.ಆರ್.ಪಿಯನ್ನು ಹೆಚ್ಚಿಸಿದೆ.
ಈಗಾಗಲೇ ಜೀ ಕನ್ನಡ ವಾಹಿನಿ ಕರ್ನಾಟಕದಲ್ಲಿ 2ನೇ ಸ್ಥಾನಕ್ಕೆ ಜಿಗಿದಿದೆ. ಬೆಳಗಿನ ಜಾವದ ಸ್ಲಾಟ್ ನಲ್ಲಿ 'ಮಹರ್ಷಿವಾಣಿ' ಮೊದಲ ಸ್ಥಾನದಲ್ಲಿದೆ. ಪ್ರತಿದಿನ 23 ಲಕ್ಷ ಪ್ರೇಕ್ಷಕರನ್ನು ತಲುಪುತ್ತಿದೆ. [ಜೀ ಕನ್ನಡದಲ್ಲಿ ಹೊಸ ಭವಿಷ್ಯವಾಣಿ 'ಮಹರ್ಷಿವಾಣಿ']
ಈ ಬಗ್ಗೆ ಸಂತಸ ವ್ಯಕ್ತ ಪಡಿಸಿರುವ ಮಹರ್ಷಿ ಡಾ.ಆನಂದ ಗುರೂಜಿ, ''ಜೀ ವಾಹಿನಿಯಲ್ಲಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಿ 2 ವರ್ಷಗಳನ್ನು ಪೂರೈಸಿದೆ. ಪ್ರತಿಯೊಂದು ಮನೆಯಲ್ಲೂ ಸಂಸ್ಕಾರವಂತರು ಇರಬೇಕು. ಪ್ರತಿಯೊಬ್ಬ ಮನುಷ್ಯನಲ್ಲೂ ಧಾರ್ಮಿಕ ಭಾವನೆಯನ್ನು ಬೆಳೆಸಬೇಕು''
''ಭಾರತೀಯ ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕು ಎಂಬುದೇ ನಮ್ಮ ಕಾರ್ಯಕ್ರಮದ ಉದ್ದೇಶವಾಗಿದೆ. ನೊಂದ ಜೀವಗಳಿಗೆ ಸಾಂತ್ವನ ಹೇಳುವುದು, ಕಷ್ಟದಲ್ಲಿರುವವರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ವೀಕ್ಷಕರಿಗೆ ಇಷ್ಟವಾಗಿದೆ''
''ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ನಾನು ಹೇಳುವುದಿಲ್ಲ. ಮಾರ್ಗದರ್ಶನ ನೀಡುವ ಪ್ರಯತ್ನ ಮಾಡಿದ್ದೇನೆ. ಸಾಲ ಬರಗಾಲದಿಂದ ನೊಂದು ಬೆಂದ ರೈತರು ಮನೆ ಬಾಗಿಲಿಗೆ ಹೋಗಿ ಸಮಾಧಾನ ಹೇಳುವ ಮಾನಸಿಕ ಧೈರ್ಯ ತುಂಬುವ ಕಾರ್ಯಗಳನ್ನು ಕೂಡ ಜೀ ಕನ್ನಡ ವಾಹಿನಿಯ ಸಹಕಾರದಿಂದ ಮಾಡಿಕೊಂಡು ಬಂದಿದ್ದೇವೆ''
''ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಹೋಗಿ ಅವರ ಅವಲಂಬಿತರಿಗೆ ಆತ್ಮ ಸ್ಥೈರ್ಯ ತುಂಬಿ ಕೈಲಾದಷ್ಟು ಸಹಾಯ ಕೂಡ ಮಾಡಿಕೊಂಡು ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೊಂದಷ್ಟು ಜನಪರ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿದ್ದೇವೆ'' ಎನ್ನುತ್ತಾರೆ.