Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ಕಲಿ ಸುನೀಲ್ ಗೆಲುವಿಗೆ ಕಾರಣ ಕೊಟ್ಟ ಅರ್ಜುನ್ ಜನ್ಯ
'ಜೀ ಕನ್ನಡ' ವಾಹಿನಿಯ 'ಸರಿಗಮಪ ಸೀಸನ್ 13' ಕಾರ್ಯಕ್ರಮದ ತೀರ್ಪು ಕೆಲವರಲ್ಲಿ ಅಸಮಾಧಾನ ಉಂಟು ಮಾಡಿತ್ತು. ಸುನೀಲ್ ಗೆಲುವಿನ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದರು. ಆದರೆ ಸುನೀಲ್ ಗೆಲುವಿಗೆ ಕಾರಣವಾದ ಅಂಶಗಳ ಬಗ್ಗೆ ಸಂಗೀತ ನಿರ್ದೇಶಕ ಮತ್ತು ಕಾರ್ಯಕ್ರಮ ತೀರ್ಪುಗಾರರಲ್ಲಿ ಒಬ್ಬರಾಗಿದ್ದ ಅರ್ಜುನ್ ಜನ್ಯ ಈಗ ಮಾತನಾಡಿದ್ದಾರೆ.
'ಸರಿಗಮಪ ಸೀಸನ್ 13' ಕಾರ್ಯಕ್ರಮದಲ್ಲಿ ಯಾರಿಗೆ ಎಷ್ಟು ವೋಟು ಬಂದಿತ್ತು?
''ಫೈನಲ್ ವೇದಿಕೆಯಲ್ಲಿ ಸುನೀಲ್ ಗಿಂತ ಚೆನ್ನಾಗಿ ಹಾಡುವವರು ಇದ್ದರು. ಆದರೆ ಅಂದಿನ ಹಾಡುಗಾರಿಕೆಯಲ್ಲಿ ಹೆಚ್ಚು ಇಷ್ಟವಾಗಿದ್ದು ಸುನೀಲ್ ಹಾಡು. ಸುನೀಲ್ ತನಗೆ ಒಪ್ಪುವಂತಹ ಹಾಡನ್ನು ಆಯ್ಕೆ ಮಾಡಿಕೊಂಡು ಚೆನ್ನಾಗಿ ಹಾಡಿದ. ಉಳಿದವರು ಕಠಿಣ ಗೀತೆಯನ್ನು ಆಯ್ಕೆ ಮಾಡಿಕೊಂಡು ಅದನ್ನು ಪ್ರೆಸೆಂಟ್ ಮಾಡುವಲ್ಲಿ ಎಡವಿದರು'' ಅಂತ ಅರ್ಜುನ್ ಜನ್ಯ ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯ ಹುಡುಗನಾಗಿದ್ದ 'ಸುನೀಲ'ನ ಸ್ಫೂರ್ತಿದಾಯಕ 'ಸರಿಗಮಪ' ಜರ್ನಿ
ಸರಿಗಮಪ-13 ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ಶ್ರೀಹರ್ಷ, ಮೆಹಬೂಬ್ ಸಾಬ್, ಅರವಿಂದ್, ಧನುಷ್, ದೀಕ್ಷಾ, ಸುನಿಲ್ ಪ್ರವೇಶ ಪಡೆದಿದ್ದರು. ಈ 6 ಜನರಲ್ಲಿ ಶ್ರೀ ಪುಟ್ಟರಾಜ ಗವಾಯಿಗಳ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್, ಜನರ ಆಯ್ಕೆಯಂತೆ 'ಸರಿಗಮಪ ಸೀಸನ್-13'ರ ವಿನ್ನರ್ ಆಗಿ ಹೊರಹೊಮ್ಮಿದ್ದರು.